Homeಕರ್ನಾಟಕಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

ಆಧಾರ್-ಪಾನ್ ಕಾರ್ಡ್ ಲಿಂಕ್‌ ಗಡುವು ಜೂನ್ 30ರವರೆಗೆ ವಿಸ್ತರಣೆ: ಕೇಂದ್ರ ಹಣಕಾಸು ಇಲಾಖೆ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವ ಕೊನೆಯ ದಿನಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಇಲಾಖೆಯು ಪ್ರಕಟಣೆ ಹೊರಡಿಸಿದ್ದು, ”ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನು ಒದಗಿಸುವ ಸಲುವಾಗಿ, ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30, 2023ಕ್ಕೆ ವಿಸ್ತರಿಸಲಾಗಿದೆ” ಎಂದು ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಪ್ರಸ್ತುತ ಇರುವ ಗಡುವು ಮಾರ್ಚ್‌ 31ಕ್ಕೆ ಅಂತ್ಯಗೊಳ್ಳಲಿದೆ. ಆದರೆ, ಇನ್ನೂ ಸಾಕಷ್ಟು ಜನರು ಪಾನ್‌ ಕಾರ್ಡ್‌ ಜೊತೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿಲ್ಲ ಹಾಗಾಗಿ ದಿನಾಂಕ ವಿಸ್ತರಣೆ ಮಾಡುವ ನಿರ್ಧಾರ ಮಾಡಲಾಗಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

“ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡದೇ ಹೋದರೆ ಅಂತಹ ಪಾನ್‌ಗಳ ವಿರುದ್ಧ ಯಾವುದೇ ಮರುಪಾವತಿಯನ್ನು ಮಾಡಲಾಗುವುದಿಲ್ಲ. ಪಾನ್ ನಿಷ್ಕ್ರಿಯಗೊಳಿಸಲಾಗುತ್ತದೆ. ಆ ಪಾನ್‌ಗಳಿಗೆ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ ಮತ್ತು ಟಿಡಿಎಸ್‌ ಮತ್ತು ಟಿಸಿಎಸ್‌ಅನ್ನು ಹೆಚ್ಚಿನ ದರದಲ್ಲಿ ಕಡಿತಗೊಳಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಅಸ್ಸಾಂ, ಮೇಘಾಲಯ ಮತ್ತು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವವರು ಪ್ಯಾನ್​ ಕಾರ್ಡ್-ಆಧಾರ್ ಕಾರ್ಡ್​ ಲಿಂಕ್ ಮಾಡಬೇಕಂತಿಲ್ಲ.

ಆದಾಯ ತೆರಿಗೆ ಕಾಯ್ದೆ, 1961 ಅಡಿಯಲ್ಲಿ ನಾನ್‌ ರೆಸಿಡೆನ್ಟ್ (ಅನಿವಾಸಿಗಳು) ಮತ್ತು ಹಿಂದಿನ ವರ್ಷದಿಂದ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಪ್ಯಾನ್​-ಆಧಾರ್​ ಕಾರ್ಡ್ ಲಿಂಕ್​ ಮಾಡದಿದ್ದರೂ ತೊಂದರೆಯಿಲ್ಲ.

ಆದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿದ 1 ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸುವ ಮೂಲಕ ಪಾನ್‌ ಮತ್ತು ಆಧಾರ್ ಲಿಂಕ್ ಮಾಡುವುದನ್ನು ಪೂರ್ಣ ಮಾಡಬಹುದಾಗಿದೆ.

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಕೆಳಗಿನ ಲಿಂಕ್ https://eportal.incometax.gov.in/iec/foservices/#/pre-login/bl-link-aadhaar ಅನ್ನು ಪ್ರವೇಶಿಸುವ ಮೂಲಕ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬಹುದು.

 ಆಧಾರ್-ಪಾನ್ ಹೇಗೆ ಲಿಂಕ್ ಮಾಡುವುದು?

ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆಯನ್ನು ನಮೂದಿಸಿ

ನಿಮ್ಮ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ

View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.

ಎಡಬದಿಯಲ್ಲಿ Quick Liks ಕಾಣಿಸುತ್ತದೆ. ಅಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ

ನಿಮ್ಮ ಪಾನ್ ಮತ್ತು ಆಧಾರ್ ನಂಬರ್ ಅನ್ನು ನಮೂದಿಸಿ, ಬಳಿಕ View Link Aadhaar Status ಮೇಲೆ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.

ಇನ್ನು, ಇನ್ಕಮ್ ಟ್ಯಾಕ್ಸ್ ಇ ಫೈಲಿಂಗ್ ಪೋರ್ಟಲ್​ಗೆ https://incometaxindiaefiling.gov.in/ ಹೋಗಿ ಅಲ್ಲಿ ನೀವು ಲಾಗಿನ್ ಆಗಬೇಕು. ಅಲ್ಲಿ ಲಿಂಕ್ ಆಧಾರ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಪರಿಶೀಲನೆ ನಡೆಸಬಹುದು.

ಪಾನ್ ಜೊತೆ ನಿಮ್ಮ ಆಧಾರ್ ಲಿಂಕ್ ಅಗಿದ್ದರೆ ಆಧಾರ್ ನಂಬರ್ ಕಾಣುತ್ತದೆ. ಇಲ್ಲದಿದ್ದರೆ ಲಿಂಕ್ ಆಧಾರ್ ಸ್ಟೇಟಸ್ ಕಾಣುತ್ತದೆ. ನೀವು ಆಧಾರ್ ಮತ್ತು ಪಾನ್  ಲಿಂಕ್ ಮಾಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...