Homeಕರ್ನಾಟಕವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಎಚ್‌ಡಿ ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,  “ವರುಣ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು. ವರುಣ ಕ್ಷೇತ್ರವೇ ನನ್ನ ಹುಟ್ಟೂರು. ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ, ಹಾಗಾಗಿ ಇಲ್ಲಿಂದ ಸ್ಪರ್ಧೆ ಮಾಡುತ್ತಿದ್ದೇನೆ” ಎಂದಿದ್ದಾರೆ.

“ಯಾವುದೇ ಒಂದು ಕ್ಷೇತ್ರ ಲಕ್ಕಿ ಹಾಗೂ ಅನ್‌ಲಕ್ಕಿ ಅಲ್ಲ. ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಹೀಗಾಗಿ ವರುಣಾ ಜತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮ್ಯಾಚ್ ಫಿಕ್ಸ್ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲೂ ಅದರ ಸಾಧ್ಯತೆ ಇದೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ” ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌‌ ಜತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, “ನಮ್ಮ ಹೈಕಮಾಂಡ್ ಜತೆಗೆ ಯಾರೂ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಈ ಬಾರಿ ನಾವು ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೇವೆ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಿವಾಸದ ಮೇಲಿನ ಕಲ್ಲು ತೂರಾಟದ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಬೊಮ್ಮಾಯಿಯವರು ಇದು ಕಾಂಗ್ರೆಸ್‌ನವರ ಕೃತ್ಯ ಎನ್ನುತ್ತಾರೆ. ಯಡಿಯೂರಪ್ಪನವರೇ ಕಾಂಗ್ರೆಸ್ ನವರು ಅಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರಿಗಿಂತ ಬೊಮ್ಮಾಯಿಗೆ ಈ ವಿಚಾರ ಹೆಚ್ಚು ಗೊತ್ತೇ? ಎಂದು ಪ್ರಶ್ನಿಸಿದ್ದಾರೆ.

ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮೀಸಲಾತಿ ಕೊಡಬೇಕಿತ್ತು. ಮೂರುವರೆ ವರ್ಷದಿಂದ ಈ ಬಗ್ಗೆ ಸುಮ್ಮನಿದ್ದ ಬಿಜೆಪಿ ಈಗ ಏನು ಮಾಡುತ್ತಿದೆ? ಎಂದು ಕೇಳಿದ್ದಾರೆ.

ಸಿದ್ದರಾಮಯ್ಯನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುಕಾಲದಿಂದ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಅವರು ಸದ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರ ದೂರವಾದ್ದರಿಂದ ಬೆಂಗಳೂರಿಗೆ ಹತ್ತಿರದ ಕ್ಷೇತ್ರ ಇದ್ದರೆ ಸೂಕ್ತ ಎಂದು ಕೆಲ ದಿನಗಳ ಹಿಂದೆ ಕೋಲಾರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಸದ್ಯ ಅವರು ಕೋಲಾರದಿಂದ ಹಿಂದೆ ಸರಿಯುತ್ತಾರೆ ಅಥವಾ ಕೋಲಾರ ಮತ್ತು ವರುಣಾ ಎರಡು ಕ್ಷೇತ್ರಗಳಿಂದಲೂ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಈಗ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ 13 ಚುನಾವಣೆಗಳ ಪೈಕಿ ಐದು ಬಾರಿ ಸಿದ್ದರಾಮಯ್ಯನವರು ಗೆದ್ದಿದ್ದರು. ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಂತರದಲ್ಲಿ ರಾಜಕೀಯ ನೆಲೆಯನ್ನು ಒದಗಿಸಿದ್ದು ವರುಣ. ಕುಲದೀಪ್ ಸಿಂಗ್ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ವರದಿಯಂತೆ ವರುಣ ಹೋಬಳಿಯನ್ನು ಪ್ರತ್ಯೇಕಿಸಿ, ಟಿ.ನರಸೀಪರ ಹಾಗೂ ವರುಣದ ಭಾಗಶಃ ಪ್ರದೇಶಗಳನ್ನು ಸೇರಿಸಿ ವರುಣ ವಿಧಾನಸಭಾ ಕ್ಷೇತ್ರವನ್ನು 2008ರಲ್ಲಿ ರಚಿಸಲಾಯಿತು. ಈವರೆಗೆ ನಡೆದಿರುವ ಮೂರು ವಿಧಾನಸಭಾ ಚುನಾವಣೆಗಳ ಪೈಕಿ ಎರಡು ಬಾರಿ ಸಿದ್ದರಾಮಯ್ಯ, ಒಂದು ಭಾರಿ ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಆಯ್ಕೆಯಾಗಿದ್ದಾರೆ. 2018ರಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ – ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಗೆದ್ದು, ಚಾಮುಂಡೇಶ್ವರಿಯಲ್ಲಿ ಸೋತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...