Homeಕರ್ನಾಟಕಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ?” ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ” ಎಂದಿದ್ದಾರೆ.

“ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ” ಎಂದು ಹೇಳಿದ್ದಾರೆ.

“ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ. ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ” ಎಂದು ವಿಷಾದಿಸಿದ್ದಾರೆ.

ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, “ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಸ್ಪಷ್ಟಪಡಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...