Homeಕರ್ನಾಟಕಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

- Advertisement -
- Advertisement -

“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ?” ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.

“ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ” ಎಂದಿದ್ದಾರೆ.

“ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ?” ಎಂದು ಕೇಳಿದ್ದಾರೆ.

“ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ” ಎಂದು ಹೇಳಿದ್ದಾರೆ.

“ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ. ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ” ಎಂದು ವಿಷಾದಿಸಿದ್ದಾರೆ.

ಇನ್ನು ಎರಡನೇ ಅಭ್ಯರ್ಥಿ ಪಟ್ಟಿಯಲ್ಲಿ ಗೊಂದಲ ಇದೆಯೇ ಎಂದು ಕೇಳಿದ ಪ್ರಶ್ನೆಗೆ, “ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಸ್ಪಷ್ಟಪಡಿಸಿದ್ದಾರೆ.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಅದಕ್ಕೆ ಉತ್ತರಿಸಿದ ಶಿವಕುಮಾರ್ ಅವರು, “ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದ್ದು, ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...