Homeಮುಖಪುಟಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ - ಡಾ.ಶ್ರೀಧರ್

ಬಾಯ್ಕಟ್ ಜ್ಯೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಎಂಬುದೊಂದು ಮಾನಸಿಕ ರೋಗ – ಡಾ.ಶ್ರೀಧರ್

- Advertisement -
- Advertisement -

ಇದು ಬಹಳ ಅತಿರೇಕದ ವರ್ತನೆಯಾಗಿದೆ. ಹಾಗೆ ನೋಡಿದರೆ ಬೇಸಾಯ ಮಾಡುವವರು ವಿವಿಧ ಜಾತಿ ಧರ್ಮಗಳಿಗೆ ಸೇರಿರುತ್ತಾರೆ. ಅವುಗಳನ್ನು ಮಾರುವವರು ಸಹ ಅಷ್ಟೇ. ಅವರ ಬಳಿ ನಾವು ಕೊಂಡುಕೊಳ್ಳುವುದಿಲ್ಲ ಎನ್ನಲಾಗುತ್ತದೆಯೇ? ಎಂದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಪ್ರಶ್ನಿಸಿದ್ದಾರೆ.

ಡೆಲಿವರಿ ಬಾಯ್ ಹಿಂದೂವಲ್ಲದ ಕಾರಣಕ್ಕೆ ಜೊಮ್ಯಾಟೊ ಆರ್ಡರ್ ರದ್ದು ಮಾಡಿ ಟ್ವಿಟ್ಟರ್ ನಲ್ಲಿ ಪ್ರಕಟಿಸಿದ ವಿಷಯದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು ಮಾಧ್ಯಮಗಳಲ್ಲಿ ವಿಶೇಷವಾಗಿ ತಂತ್ರಜ್ಞಾನದ ಸಾಮಾಜಿಕ ಜಾಲತಾಣಗಳು ವಿವೇಕ ಮತ್ತು ವಿವೇಚನೆಗಳನ್ನು ಹೆಚ್ಚಿಸುವ ಬದಲು ಭಾವುಕತನಕ್ಕೆ ತಕ್ಷಣದಲ್ಲಿ ಪ್ರತಿಕ್ರಿಯೆ ಕೊಡುವಂತದ್ದನ್ನು ಉತ್ತೇಜನ ನೀಡುತ್ತಿವೆ. ಹೀಗಾಗಿ ಬಾಯ್ಕಟ್ ಜೊಮ್ಯಾಟೋ ಟ್ವಿಟ್ಟರ್ ಟ್ರೆಂಡ್ ಆಗಿರುವ ಹಿನ್ನೆಲೆಯಲ್ಲಿ ನಾವು ನಂಬರ್ ಗಳನ್ನು ತೆಗೆದುಕೊಂಡರೆ ಅವರು ತಮ್ಮ ಮೊಬೈಲ್ ನಲ್ಲಿ ಗುಂಡಿ ಒತ್ತಿದ್ದಾರೆ ಅಷ್ಟೇ, ಅವರಿಗೆ ಸ್ವತಂತ್ರ ಚಿಂತನೆಗಳಿಲ್ಲ ಎಂದು ಟೀಕಿಸಿದ್ದಾರೆ ಎಂದಿದ್ದಾರೆ.

ಅವರ ಪ್ರತಿಕ್ರಿಯೆ ದೇಹದ ಬೆರಳುಗಳು ಆ ಕ್ಷಣದಲ್ಲಿ ಒತ್ತಿದ ಗುಂಡಿ ಅಷ್ಟೇ ಆಗಿದೆ. ಅದರಲ್ಲಿ ವಿವೇಚನೆ ಮಾಡುವ ಸಾಮರ್ಥ್ಯವಾಗಲಿ, ವಿಚಾರ ಮಾಡುವಂತಹ ಶಕ್ತಿಯ ಪ್ರದರ್ಶನವಾಗಲಿ ಇಲ್ಲದಿರುವುದರಿಂದ ಅವುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವಾಗುವುದಿಲ್ಲ. ಆ ಮಂದಿಯನ್ನು ಒಂದು ಕಡೆ ಕೂಡಿಸಿ, ಪ್ರಶ್ನೆ ಕೇಳಿದರೆ ಅವರಲ್ಲಿ ವಿಚಾರವಿರುವುದಿಲ್ಲ. ಕೊನೆಗೆ ನನಗೆ ಗೊತ್ತಿಲ್ಲದೇ ಗುಂಡಿ ಒತ್ತಿಬಿಟ್ಟೇ ಎಂದು ಹೇಳಬಹುದು. ಹಾಗಾಗಿ ಸಂಖ್ಯೆ ಮುಖ್ಯವಲ್ಲ ಎಂದರು.

ಆದರೆ ಆಹಾರ ನಿರಾಕರಿಸಿ ಆ ಒಬ್ಬ ವ್ಯಕ್ತಿ ಮಾಡಿದ್ದು ಕೋಟಿ ಜನಕ್ಕೆ ಮಾಡುವ ಅವಮಾನವಾಗಿದೆ. ಅವರು ಜನಗಳ ಮಧ್ಯೆ ಬದುಕಲು ಸಾಧ್ಯವಿಲ್ಲ ಎಂದರೆ ಬೇಕಾದರೆ ಹಿಮಾಲಯಕ್ಕೆ ಹೋಗಿ ಸೇರಿಕೊಳ್ಳಲ್ಲಿ. ಇದನ್ನು ಏಕೆ ಪ್ರತಿಭಟಿಸಬೇಕೆಂದರೆ ಇದೆಲ್ಲಾ ಮಾನಸಿಕ ಅಸ್ವಸ್ಥತೆಯ ಸಂಕೇತ ಆಗಿದೆ. ಇದನ್ನು ಪ್ಯಾರನೊಯ್ಡ್ ಎಂದು ಕರೆಯುತ್ತಾರೆ.

ಅಂದರೆ ತೀವ್ರ ಭಯ ಮತ್ತು ಆತಂಕದ ಕಾರಣಕ್ಕೆ ಅತಾರ್ಕಿಕವಾಗಿ ವಾದ ಮಾಡುವ ಅತಿ ಸಂದೇಹ ಮತ್ತು ಸಂಶಯಪಡುವ ಖಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿ ಎಂದರ್ಥ. ಬಾಯ್ಕಟ್ ಜೊಮ್ಯಾಟೋ ಎಂದು ಟ್ವೀಟ್ ಮಾಡಿರುವವರು ಅತೀ ತೀವ್ರ ಸಂದೇಹ ಮತ್ತು ಸಂಶಯದಿಂದ ಬಳಲುತ್ತಿದ್ದೀರಿ, ಆದಷ್ಟು ಬೇಗ ನೀವು ಮಾನಸಿಕ ತಜ್ಞರನ್ನು ಭೇಟಿ ಮಾಡಿದರೆ ಒಳ್ಳೆಯದು ಮನೋರೋಗ ಶಾಸ್ತ್ರಜ್ಞರಾದ ಡಾ.ಶ್ರೀಧರ್ ರವರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...