Homeಮುಖಪುಟ‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

- Advertisement -
- Advertisement -

ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವ ಸಂಬಂಧ ಕುಹಕವಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, “ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಯಲ್ಲಿ ಒಂದಾಗುತ್ತಿವೆ” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದರಾಗಿ ಅನರ್ಹಗೊಳಿಸಿದ ವಿರುದ್ಧ ಪ್ರತಿಪಕ್ಷಗಳು ಕಳೆದ ವಾರ ಒಗ್ಗಟ್ಟು ಪ್ರದರ್ಶಿಸಿದ ಬೆಳವಣಿಗೆಗಳ ನಡುವೆ ಮೋದಿ ಹೇಳಿಕೆ ಹೊರಬಿದ್ದಿದೆ.

ಅದಾನಿ ಗ್ರೂಪ್‌ನ ಹಗರಣಗಳ ಕುರಿತು ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳು ಜಂಟಿ ಪ್ರತಿಭಟನೆಗಳನ್ನು ನಡೆಸಿದ್ದು, ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ 14 ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ.

ಮಂಗಳವಾರ ದೆಹಲಿಯ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮೋದಿಯವರು, “ಪ್ರತಿಪಕ್ಷಗಳು ದೇಶದ ಸಂಸ್ಥೆಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ” ಎಂದು ಆರೋಪಿಸಿದ್ದಾರೆ.

“ಭಾರತವನ್ನು ತಡೆದು ನಿಲ್ಲಿಸುವ ಪ್ರಯತ್ನದಲ್ಲಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗುತ್ತಿದೆ” ಎಂದು ಪ್ರಧಾನಿ ಹೇಳಿದ್ದಾರೆ.

“ತನಿಖಾ ಸಂಸ್ಥೆಗಳು ಕ್ರಮ ಕೈಗೊಂಡಾಗ ದಾಳಿ ಮಾಡಲಾಗುತ್ತಿದೆ, ನ್ಯಾಯಾಲಯಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಇಂದು, ಎಲ್ಲಾ ಭ್ರಷ್ಟ ಮುಖಗಳು ಒಂದೇ ವೇದಿಕೆಯಲ್ಲಿ ಒಟ್ಟುಗೂಡುವುದನ್ನು ಕಾಣಬಹುದು” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ದೇಶದಲ್ಲಿ ಭ್ರಷ್ಟಾಚಾರವನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮೋದಿ ದೂರಿದ್ದಾರೆ.

“ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕೇವಲ 5,000 ಕೋಟಿ ರೂಪಾಯಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಆದರೆ ಬಿಜೆಪಿ ಆಡಳಿತದಲ್ಲಿ 1.10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ. ಕಳೆದ ಒಂಬತ್ತು ವರ್ಷಗಳಲ್ಲಿ, ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಅಭಿಯಾನವನ್ನು ನಡೆಸಿತು, ಇದು ಭ್ರಷ್ಟರನ್ನು ಅಸ್ಥಿರಗೊಳಿಸಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಕ್ರಮ ವಿತ್ತೀಯ ವಹಿವಾಟುಗಳನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯವು ಬಳಸುತ್ತಿರುವ ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯಿದೆಯು ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಭಾಗವಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಸ್ಮೃತಿ ಇರಾನಿಯವರನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್‌ ತುಚ್ಛವಾಗಿ ಟೀಕಿಸಿದರೆ?

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...