Homeಮುಖಪುಟಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

ಉಕ್ರೇನ್‌, ಚೀನಾದಿಂದ ವಾಪಸಾದ ಮೆಡಿಕಲ್‌ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸಲು ಅವಕಾಶ: ಕೇಂದ್ರ ಸರ್ಕಾರ

- Advertisement -
- Advertisement -

ತಮ್ಮ ಕೋರ್ಸ್‌ಗಳನ್ನು ಮುಗಿಸದೆ ಉಕ್ರೇನ್ ಮತ್ತು ಚೀನಾದಿಂದ ಹಿಂತಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂಬಿಬಿಎಸ್‌ ಪೂರ್ಣಗೊಳಿಸುವ ಅವಕಾಶವನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಯಾವುದೇ ಭಾರತೀಯ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗದೆ ಎಂಬಿಬಿಎಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಒಂದು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಚೀನಾದಲ್ಲಿನ ಕೋವಿಡ್ -19 ಪ್ರಯಾಣದ ನಿರ್ಬಂಧ, ಉಕ್ರೇನ್ ಯುದ್ಧದಿಂದಾಗಿ ವೈದ್ಯಕೀಯ ಪದವಿ ಮತ್ತು ಬ್ಯಾಚುಲರ್ ಆಫ್ ಸರ್ಜರಿ ಪದವಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ವೈದ್ಯಕೀಯ ವಿದ್ಯಾರ್ಥಿಗಳ ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ವಿಕ್ರಮ್ ನಾಥ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ರಷ್ಯಾ ದೇಶವು ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ, ಉಕ್ರೇನ್‌ನಲ್ಲಿ ಓದುತ್ತಿದ್ದ 20,000 ಭಾರತೀಯ ವಿದ್ಯಾರ್ಥಿಗಳು ಹಿಂತಿರುಗಬೇಕಾಯಿತು. ಅವರಲ್ಲಿ 18,000 ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ.

ಯುದ್ಧ ಪೀಡಿತ ದೇಶಕ್ಕೆ ಮರಳಲು ಸಾಧ್ಯವಾಗದ ಕಾರಣ ಭಾರತದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಸಂಬಂಧಿತ ಸಚಿವಾಲಯಗಳನ್ನು ಒಳಗೊಂಡಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧ್ಯಕ್ಷತೆಯ ಸಮಿತಿಯು ಈ ವಿಷಯವನ್ನು ಚರ್ಚಿಸಿದ ನಂತರ ಕೇಂದ್ರವು ತನ್ನ ನಿರ್ಧಾರವನ್ನು ಉನ್ನತ ನ್ಯಾಯಾಲಯಕ್ಕೆ ಬುಧವಾರ ತಿಳಿಸಿದೆ.

ಎಂಬಿಬಿಎಸ್ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ಒಂದು ಅವಕಾಶವನ್ನು ನೀಡಲು ಸಮಿತಿಯು ನಿರ್ಧರಿಸಿದೆ. ವಿದ್ಯಾರ್ಥಿಗಳು ಯಾವುದೇ ಭಾರತೀಯ ಕಾಲೇಜುಗಳಿಗೆ ದಾಖಲಾಗುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ಹೇಳಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗವು ಎಂಬಿಬಿಎಸ್ ಕೋರ್ಸ್‌ಗೆ ನಿಗದಿಪಡಿಸಿದ ಪಠ್ಯಕ್ರಮದಲ್ಲಿ ನಡೆಸಲಾದ ತಮ್ಮ ಥಿಯರಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹಾಜರಾಗುತ್ತಾರೆ, ಆದರೆ ಪ್ರಾಯೋಗಿಕ ಪರೀಕ್ಷೆಗಳು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಡೆಯುತ್ತವೆ.

ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಎರಡು ವರ್ಷಗಳ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕಾಗುತ್ತದೆ ಎಂದು ಸಮಿತಿ ಹೇಳಿದೆ. ವಿದ್ಯಾರ್ಥಿಗಳಿಗೆ ಎರಡನೇ ವರ್ಷದಲ್ಲಿ ಅವರ ಇಂಟರ್ನ್‌ಶಿಪ್‌ಗೆ ಅವಕಾಶವಿರುತ್ತದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣನ್‌, ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚಿಸಿರುವ ಪಠ್ಯಕ್ರಮದಲ್ಲಿನ ವ್ಯತ್ಯಾಸ ಹಾಗೂ ವಿದೇಶಿ ವೈದ್ಯಕೀಯ ಸಂಸ್ಥೆಗಳಲ್ಲಿ ಅನುಸರಿಸುವ ವ್ಯತ್ಯಾಸ ವಿದ್ಯಾರ್ಥಿಗಳಿಗೆ ಅಡ್ಡಿಯಾಗಬಹುದು ಎಂದು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕೇವಲ ಒಂದು ಪ್ರಯತ್ನ ಸಾಕಾಗುವುದಿಲ್ಲ ಎಂದು ಅರ್ಜಿದಾರರು ಕಳವಳ ವ್ಯಕ್ತಪಡಿಸಿದರು.

“ಇದು ಅಖಿಲ ಭಾರತ ವಕೀಲಿ ಪರೀಕ್ಷೆಯಂತಲ್ಲ, ನೀವು ಅನುತ್ತೀರ್ಣರಾದರೆ ನೀವು ಇನ್ನೂ ನಿಮ್ಮ ಎಲ್‌ಎಲ್‌ಬಿ [ಬ್ಯಾಚುಲರ್ ಆಫ್ ಲಾಸ್] ಪದವಿಯನ್ನು ಹೊಂದಿರುತ್ತೀರಿ” ಎಂದು ಶಂಕರನಾರಾಯಣನ್ ವಾದಿಸಿದರು. “ಈ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ, ಅವರಿಗೆ ಏನೂ ಉಳಿಯುವುದಿಲ್ಲ” ಎಂದು ತಿಳಿಸಿದರು.

ಆದರೆ, ಸಮಿತಿ ನೀಡಿದ ಶಿಫಾರಸುಗಳನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಲೇವಾರಿ ಮಾಡಿದೆ.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದುದರ ಪರಿಣಾಮವಾಗಿ ಭಾರತಕ್ಕೆ ಮರಳಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಭಾರತದ ವಿವಿಗಳಲ್ಲಿ ಸೀಟು ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ 2022ರ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು.

ಇದನ್ನೂ ಓದಿರಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

ಭಾರತದ ವೈದ್ಯ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆ ಉಂಟಾಗುವುದರಿಂದ ಆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿತ್ತು.

ಇಲ್ಲಿನ ನೀಟ್‌ ಪರೀಕ್ಷೆಯಲ್ಲಿ ಕಳಪೆ ಸಾಧನೆ ಮಾಡಿದ ಮತ್ತು ಅಗ್ಗದ ವೈದ್ಯಕೀಯ ವೆಚ್ಚದ ಕಾರಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್‌ನಂತಹ ರಾಷ್ಟ್ರಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

ಕಳಪೆ ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ನಾವು ಪ್ರವೇಶ ನೀಡಿದ್ದೆ ಆದರೆ ಅದು ಭವಿಷ್ಯದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗವು ಗುಣಮಟ್ಟ ಕಾಪಾಡುವ ಕುರಿತು ನಿರ್ದೇಶನ ನೀಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.

ಈ ವಿದ್ಯಾರ್ಥಿಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ದಾಖಲು ಮಾಡಿಕೊಳ್ಳಲು ಅವಕಾಶ ನೀಡಿದರೂ ಸಹ ಆ ಕಾಲೇಜುಗಳ ಶುಲ್ಕವನ್ನು ಭರಿಸಲು ಅವರು ಶಕ್ತರಾಗಿಲ್ಲ ಎಂದೂ ಸಹ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...