Homeಮುಖಪುಟರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ರಾಜಸ್ಥಾನದಲ್ಲಿ ಆರೋಗ್ಯ ಹಕ್ಕು ಕಾಯ್ದೆ ಜಾರಿ; ಬೀದಿಗಿಳಿದ ವೈದ್ಯರು

ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ

- Advertisement -
- Advertisement -

ರಾಜಸ್ಥಾನ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಹಕ್ಕು ಕಾಯ್ದೆ ವಿರುದ್ಧ ರಾಜ್ಯದಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಮಂಗಳವಾರ ಬೆಂಬಲ ನೀಡಿದೆ.

ಕಳೆದ ವಾರ ರಾಜ್ಯ ವಿಧಾನಸಭೆಯಲ್ಲಿ ಕಾಯಿದೆಯನ್ನು ಅಂಗೀಕರಿಸಲಾಯಿತು. “ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳು ಅಗತ್ಯವಿದ್ದಾಗ ಯಾವುದೇ ಪೂರ್ವಪಾವತಿ ಇಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡಬೇಕು” ಎಂದು ಈ ಕಾಯ್ದೆ ಹೇಳಿದೆ. “ಈ ಷರತ್ತು ಕಾನೂನಿನ ಅತ್ಯಂತ ವಿವಾದಾತ್ಮಕ ಅಂಶಗಳಲ್ಲಿ ಒಂದಾಗಿದೆ” ಎಂದು ರಾಜ್ಯದ ವೈದ್ಯಕೀಯ ಸಮೂಹ ಬೀದಿಗಿಳಿದಿದೆ.

ಸರ್ಕಾರ ಆಸ್ಪತ್ರೆಗಳಿಗೆ ಮರುಪಾವತಿ ಮಾಡುತ್ತದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆಯಾದರೂ, ಮರುಪಾವತಿ ಹೇಗೆ ಅಥವಾ ಯಾವಾಗ ನಡೆಯುತ್ತದೆ ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಜಾರಿಯಾಗಿರುವ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಮಾರ್ಚ್ 27ರಂದು ಭಾರತೀಯ ವೈದ್ಯಕೀಯ ಸಂಘವು ಕರೆ ನೀಡಿದ ನಂತರ ಸುಮಾರು 20,000 ವೈದ್ಯರು ಜೈಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಶರದ್ ಕುಮಾರ್ ಅಗರ್ವಾಲ್, ಗೌರವ ಕಾರ್ಯದರ್ಶಿ ಅನಿಲ್‌ಕುಮಾರ್ ನಾಯಕ್ ಪ್ರತಿಕ್ರಿಯಿಸಿ, “ರಾಜಸ್ಥಾನ ಸರ್ಕಾರವು ಪ್ರತಿಭಟನಾನಿರತ ವೈದ್ಯರೊಂದಿಗೆ ಚರ್ಚೆಯನ್ನು ಪ್ರಾರಂಭಿಸಬೇಕು, ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ, ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಕಷ್ಟು ಮೂಲಸೌಕರ್ಯವನ್ನು ಪೂರೈಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು” ಎಂದಿದ್ದಾರೆ.

ರಾಜಸ್ಥಾನ ಸರ್ಕಾರವು ಕಾಯಿದೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಆಕ್ರಮಣಕಾರಿ ಹೋರಾಟಕ್ಕೆ ಕಾರಣವಾಗಬಹುದು. ದೇಶಾದ್ಯಂತ ತನ್ನ ಆಂದೋಲನವನ್ನು ಮುಂದುವರಿಸಲಾಗುವುದು ಎಂದು ಭಾರತೀಯ ವೈದ್ಯಕೀಯ ಸಂಘ ಎಚ್ಚರಿಸಿದೆ.

“ರೋಗಿಗಳು ಎದುರಿಸುವ ಯಾವುದೇ ತೊಂದರೆಗೆ ರಾಜಸ್ಥಾನ ಸರ್ಕಾರವು ಜವಾಬ್ದಾರವಾಗಿರುತ್ತದೆ” ಎಂದು ಬೆದರಿಕೆ ಹಾಕಿದೆ.

ರಾಜಸ್ಥಾನದ ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಕಾಲೇಜುಗಳ ಅಧ್ಯಾಪಕರು ಖಾಸಗಿ ವೈದ್ಯರೊಂದಿಗೆ ಸೇರಿ ಒಂದು ದಿನದ ಮುಷ್ಕರವನ್ನು ನಡೆಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

“ಪೂರ್ವಾನುಮತಿ ಇಲ್ಲದೆ ರಜೆ ಮೇಲೆ ತೆರಳುವ ವೈದ್ಯರು ಹಾಗೂ ಸರ್ಕಾರಿ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಧರಣಿ ಮುಂದುವರಿದಿದೆ.

ಹೊರರೋಗಿ ವಿಭಾಗಗಳು, ಒಳರೋಗಿಗಳ ವಿಭಾಗಗಳು, ತೀವ್ರ ನಿಗಾ ಘಟಕಗಳು, ತುರ್ತು ಮತ್ತು ಹೆರಿಗೆ ವಿಭಾಗಗಳಲ್ಲಿ ಯಾವುದೇ ಸೇವೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿತ್ತು.

ಕಾಯ್ದೆ ಏನು ಹೇಳುತ್ತದೆ?

“ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯರು ತುರ್ತು ಚಿಕಿತ್ಸೆ ಪಡೆಯಬೇಕಾಗಿರುವ ವ್ಯಕ್ತಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಿಲ್ಲ” ಎಂದು ಕಾಯ್ದೆ ಹೇಳುತ್ತದೆ. ಈ ಕಾಯ್ದೆಯ ಮೂಲಕ ಆರೋಗ್ಯ ರಕ್ಷಣೆಯ ಸೇವೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಿದ ಭಾರತದ ಮೊದಲ ರಾಜ್ಯವಾಗಿ ರಾಜಸ್ಥಾನ ಹೊಮ್ಮಿದೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಅಪಘಾತಗಳು, ಪ್ರಾಣಿ ಅಥವಾ ಹಾವು ಕಡಿತ, ಗರ್ಭಾವಸ್ಥೆಯಲ್ಲಿನ ತೊಡಕುಗಳು ಅಥವಾ ರಾಜ್ಯ ಆರೋಗ್ಯ ಪ್ರಾಧಿಕಾರದಿಂದ ವ್ಯಾಖ್ಯಾನಿಸಲಾದ ತುರ್ತುಸ್ಥಿತಿಯ ಸಂದರ್ಭಗಳನ್ನು ತುರ್ತು ಚಿಕಿತ್ಸೆಯ ಭಾಗವಾಗಿ ಗುರುತಿಸಲಾಗಿದೆ.

ಕಾಯ್ದೆಯ ವಿರೋಧಿಗಳ ವಾದವೇನು?

“ಇದು ಆರೋಗ್ಯ ಕಾರ್ಯಕರ್ತರ ಮೇಲೆ, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ” ಎಂದು ಕಾಯ್ದೆಯ ವಿರೋಧಿಗಳು ವಾದಿಸುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಸೊಸೈಟಿಯ ಕಾರ್ಯದರ್ಶಿ ವಿಜಯ್ ಕಪೂರ್ ಅವರು ‘ದಿ ಸ್ಕ್ರಾಲ್‌’ಗೆ ಪ್ರತಿಕ್ರಿಯಿಸಿ, “ಸರ್ಕಾರ ತನ್ನ ಜವಾಬ್ದಾರಿಯನ್ನು ಖಾಸಗಿ ವೈದ್ಯರಿಗೆ ವರ್ಗಾಯಿಸುತ್ತಿದೆ. ಬಂದೂಕಿನ ನಳಿಕೆಯನ್ನಿಟ್ಟು ಈ ಕೆಲಸವನ್ನು ಮಾಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...