Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...