Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...