Homeಮುಖಪುಟಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

ಧರ್ಮದೊಂದಿಗೆ ರಾಜಕೀಯ ಬೆರೆಸುವುದನ್ನು ನಿಲ್ಲಿಸಿ, ದ್ವೇಷ ಭಾ‍ಷಣ ನಿಲ್ಲುತ್ತೆ: ರಾಜಕಾರಣಿಗಳಿಗೆ ಸುಪ್ರೀಂ ತಾಖೀತು

- Advertisement -
- Advertisement -

ರಾಜಕಾರಣಿಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸಿದರೆ ದ್ವೇಷ ಭಾಷಣಗಳು ನಿಲ್ಲತ್ತವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ.

”ರಾಜಕಾರಣಿಗಳು ಧರ್ಮದೊಂದಿಗೆ ರಾಜಕೀಯವನ್ನು ಬೆರೆಸಿದಾಗ ದೊಡ್ಡ ಸಮಸ್ಯೆ ಉದ್ಭವಿಸುತ್ತದೆ. ರಾಜಕೀಯ ಮತ್ತು ಧರ್ಮವನ್ನು ಪ್ರತ್ಯೇಕಿಸಿದ ಕ್ಷಣ ದ್ವೇಷಭಾಷಣಗಳು ಕೊನೆಯಾಗುತ್ತವೆ. ನಮ್ಮ ಇತ್ತೀಚಿನ ತೀರ್ಪಿನಲ್ಲೂ ರಾಜಕೀಯವನ್ನು ಧರ್ಮದೊಂದಿಗೆ ಬೆರೆಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ, ”ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡಲು ದ್ವೇಷದ ಮಾತುಗಳನ್ನು ಬಿಡುವುದು ಅತ್ಯಗತ್ಯವಾಗಿದೆ” ಎಂದು ನ್ಯಾಯಾಲಯ ಮಂಗಳವಾರ ಅಭಿಪ್ರಾಯಪಟ್ಟಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ ಅವರು, ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ, ಮಹಾರಾಷ್ಟ್ರದಲ್ಲಿ ನಾಲ್ಕು ತಿಂಗಳಲ್ಲಿ 50 ರ್ಯಾಲಿಗಳು ನಡೆದಿವೆ. ಈ ರ್ಯಾಲಿಗಳಲ್ಲಿ ‘ಲವ್ ಜಿಹಾದ್’ ಮತ್ತು ‘ಲ್ಯಾಂಡ್ ಜಿಹಾದ್’ ನಂತಹ ವಿಚಾರಗಳನ್ನು ಮಾತನಾಡಿ ಮುಸ್ಲಿಂ ಸಮುದಾಯದ ವಿರುದ್ದ ಪಿತೂರಿ ಮಾಡಲು ಚರ್ಚಿಸಲಾಗಿದೆ ಎಂದು ಹೇಳಿದರು.

ಆ ಎಲ್ಲಾ ರ್ಯಾಲಿಗಳಲ್ಲಿ, ಭಾಷಣಕಾರರು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಸಮುದಾಯದ ಬಗ್ಗೆ ಪಿತೂರಿ ಸಿದ್ಧಾಂತಗಳನ್ನು ತೇಲಿ ಬಿಡಲಾಗುತ್ತಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ರ್ಯಾಲಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಪಾಷಾ ಅವರು ಬುಧವಾರದ ವಿಚಾರಣೆಯಲ್ಲಿ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಅದನ್ನು ಪರಿಗಣಿಸಿದೆ.

ಈ ನ್ಯಾಯಾಂಗ ನಿಂದನೆ ಅರ್ಜಿಯು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿ ಅಲ್ಲ. ದ್ವೇಷ ಭಾಷಣವನ್ನು ನಿಗ್ರಹಿಸುವುದು ಮುಖ್ಯವಾಗಿದೆ ಎಂದು ಹೇಳಿದ ಪಾಷಾ ಅವರು, ”ಹತ್ಯಾಕಾಂಡವು ಗ್ಯಾಸ್ ಚೇಂಬರ್‌ಗಳಿಂದ ಪ್ರಾರಂಭವಾಗಲಿಲ್ಲ ಅದು ದ್ವೇಷ ಭಾಷಣದಿಂದ ಪ್ರಾರಂಭವಾಯಿತು” ಎಂದು ವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅಡಮಾ ಡಿಯೆಂಗ್ ಅವರು ಹೇಳಿಕೆಯನ್ನು ಉಲ್ಲೇಖಿಸಿದರು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ನೀವು ನಿಮಗೆ ಬೇಕಾದ ಕೆಲವು ಘಟನೆಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಾತನಾಡುತ್ತಿದ್ದೀರಿ ಎಂದರು.

”ಅರ್ಜಿದಾರರಿಗೆ ದ್ವೇಷ ಭಾಷಣದ ಬಗ್ಗೆ ಕಾಳಜಿ ಇದ್ದರೆ, ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ಹಿಂದೂಗಳ ವಿರುದ್ಧ ಮಾಡಿದ ದ್ವೇಷಪೂರಿತ ಮಾತುಗಳ ಬಗ್ಗೆ ಚರ್ಚಿಸಲಿ, ಅಂತಹ ಎಲ್ಲಾ ನಿದರ್ಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮೆಹ್ತಾ ಹೇಳಿದರೆಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಮ್ಮ ಈ ಅರ್ಜಿಗೆ ಸೇರಿಸಬೇಕಾದ ಕೆಲವು ಹೇಳಿಕೆಗಳನ್ನು ನಾವು ಸಹ ಸೇರಿಸಬೇಕಿದೆ. ”ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ನಾಯಕರು ನಿಮಗೆ ಸಮಾನತೆ ಬೇಕಾದರೆ ಎಲ್ಲಾ ಬ್ರಾಹ್ಮಣರನ್ನು ಕಡಿಯಬೇಕು ಎಂದು ಹೇಳುತ್ತಾರೆ….” ದಯವಿಟ್ಟು ಕೇರಳದ ಈ ಕ್ಲಿಪ್ ಅನ್ನು ಕೇಳಿ, ಇದು ಆಘಾತಕಾರಿಯಾಗಿದೆ. ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟು ಮಾಡುತ್ತದೆ. ”ಹಿಂದೂಗಳು ಮತ್ತು ಕ್ರೈಸ್ತರು ಅಂತಿಮ ವಿಧಿವಿಧಾನಗಳಿಗೆ ಸಿದ್ಧರಾಗಬೇಕು” ಇದನ್ನು ಮಾಡಲು ಮಗುವನ್ನು ಹುಟ್ಟಿಸಬೇಕು ಎಂದು ಹೇಳುತ್ತಾರೆ. ಇದು ನಾಚಿಕೆಪಡುವ ವಿಚಾರ” ಎಂದು ಮೆಹ್ತಾ ಹೇಳಿದರು.

ನಂತರ ಪಾಷಾ ಮಧ್ಯಪ್ರವೇಶಿಸಿ. ಒಂದೇ ಕಡೆ ವಾಲುವುದು ಸೂಕ್ತವಲ್ಲ ಎಂದು, ಸಾಲಿಸಿಟರ್ ಜನರಲ್‌ಗೆ ಹೇಳಿದರು.

ನ್ಯಾಯಾಲಯವು ದ್ವೇಷ ಭಾಷಣ ನಿದರ್ಶನಗಳ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳುವಲ್ಲಿ ಅಧಿಕಾರಿಗಳ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

”ರಾಜ್ಯ ದುರ್ಬಲವಾಗಿದೆ, ಶಕ್ತಿಹೀನವಾಗಿದೆ. ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಈ ರೀತಿ ದ್ವೇಷ ಭಾಷಣದ ವಿರುದ್ಧ ಮೌನವಾಗಿದ್ದರೆ ನಮಗೆ ರಾಜ್ಯ ಏಕೆ?” ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...