Homeಮುಖಪುಟಮೊಸರಿಗೆ ʻದಹಿʼ ಎಂದು ಬಳಸುವಂತೆ ಕೇಂದ್ರದ ಒತ್ತಡಕ್ಕೆ ಸ್ಟಾಲಿನ್, ಹೆಚ್‌ಡಿಕೆ ಕಿಡಿ: ಹಿಂದಿ ಹೇರಿಕೆಗೆ ತೀವ್ರ...

ಮೊಸರಿಗೆ ʻದಹಿʼ ಎಂದು ಬಳಸುವಂತೆ ಕೇಂದ್ರದ ಒತ್ತಡಕ್ಕೆ ಸ್ಟಾಲಿನ್, ಹೆಚ್‌ಡಿಕೆ ಕಿಡಿ: ಹಿಂದಿ ಹೇರಿಕೆಗೆ ತೀವ್ರ ವಿರೋಧ

- Advertisement -
- Advertisement -

ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಫುಡ್‌ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ ಅಥಾರಿಟಿ ಆಫ್ ಇಂಡಿಯಾ) ವಿರುದ್ಧ ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್ ಕಿಡಿಕಾರಿದ್ದಾರೆ. ಕರ್ನಾಟಕದ ಜೆಡಿಎಸ್ ಪಕ್ಷ ಸಹ ವಿರೋಧ ವ್ಯಕ್ತಪಡಿಸಿದೆ.

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ ನಂದಿನಿ ಮೊಸರಿಗೆ ಹಿಂದಿಯಲ್ಲಿ ಕಡ್ಡಾಯವಾಗಿ ‘ದಹಿ’ ಎಂದು ಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶ ಮೂರ್ಖತನದ ಪರಮಾವಧಿ. ನಿಧಾನವಾಗಿ ನಂದಿನಿಯನ್ನು ಅಮುಲ್ ಜೊತೆ ವಿಲೀನಗೊಳಿಸುವ ಹುನ್ನಾರ. ಈ ರೀತಿಯ ಹಿಂದಿ ಹೇರಿಕೆ ಸಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಈ ಆದೇಶವನ್ನು ಕೇಂದ್ರ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇನ್ನೊಂದೆಡೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದಾರೆ. “ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಬರೆಯುವಂತೆ ನಿರ್ದೇಶಿಸುವ ಮಟ್ಟಕ್ಕೆ ನಾಚಿಕೆಯಿಲ್ಲದೆ ಹಿಂದಿ ಹೇರಿಕೆ ಬಂದು ನಿಂತಿದೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...