Homeಮುಖಪುಟಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಜಯ: ಮೊಸರಿಗೆ ದಹಿ ಪದ ಬಳಸಬೇಕೆಂಬ ಆದೇಶ ವಾಪಸ್

ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಜಯ: ಮೊಸರಿಗೆ ದಹಿ ಪದ ಬಳಸಬೇಕೆಂಬ ಆದೇಶ ವಾಪಸ್

- Advertisement -
- Advertisement -

ಮೊಸರು ಬದಲಿಗೆ ಹಿಂದಿ ಪದ ದಹಿ ಎಂದು ಬಳಸಬೇಕೆಂದು ಕರ್ನಾಟಕ ಮತ್ತು ತಮಿಳುನಾಡು ಹಾಲು ಒಕ್ಕೂಟಗಳಿಗೆ ನೀಡಿದ್ದ ನಿರ್ದೇಶನವನ್ನು ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಂದು ವಾಪಸ್ ಪಡೆದಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಾಧಿಕಾರ, “Curd ಪದ ಬದಲಿಗೆ ಮೊಸರು, ಥಾಯಿರ್, ಪೆರುಗು ಇತ್ಯಾದಿ ಪ್ರಾದೇಶಿಕ ಪದಗಳನ್ನು ಬಳಸಬಹುದೆಂದು” ತಿಳಿಸಿದೆ.

ಜಯವಾಗಿದೆ.. ಜೈ ಕನ್ನಡಿಗ ದಹಿ ಹಿಂದಿ ಪದ ಬಳಕೆ ಕಡ್ಡಾಯ ಆದೇಶ ವಾಪಸ್ ಪಡೆದ fssai. ನಾವು ಸುಮ್ಮನಿರದೆ ಧ್ವನಿ ಎತ್ತಿದರೆ ಎಲ್ಲವೂ ಸಾಧ್ಯ.. ಹಿಂದಿಹೇರಿಕೆ ನಿಲ್ಲಲಿ.. ಇದಕ್ಕೆ ಧ್ವನಿಯಾದ ಎಲ್ಲ ಕನ್ನಡಿಗರಿಗೂ ಧನ್ಯವಾದಗಳು… ನಮ್ಮ ನಂದಿನಿ ನಮ್ಮ ಹೆಮ್ಮೆ ಎಂದು ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದಾರೆ.

ಈ ಮೊದಲು ಫುಡ್‌ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ತಮಿಳು ನಾಡು ಸಿಎಂ ಎಂ.ಕೆ ಸ್ಟಾಲಿನ್, ಕರ್ನಾಟಕ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದರು.

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಮಾರಾಟವಾಗುವ ನಂದಿನಿ ಮೊಸರಿಗೆ ಹಿಂದಿಯಲ್ಲಿ ಕಡ್ಡಾಯವಾಗಿ ‘ದಹಿ’ ಎಂದು ಹಾಕಬೇಕೆಂಬ ಕೇಂದ್ರ ಸರ್ಕಾರದ ಆದೇಶ ಮೂರ್ಖತನದ ಪರಮಾವಧಿ. ನಿಧಾನವಾಗಿ ನಂದಿನಿಯನ್ನು ಅಮುಲ್ ಜೊತೆ ವಿಲೀನಗೊಳಿಸುವ ಹುನ್ನಾರ. ಈ ರೀತಿಯ ಹಿಂದಿ ಹೇರಿಕೆ ಸಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಈ ಆದೇಶವನ್ನು ಕೇಂದ್ರ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇನ್ನೊಂದೆಡೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಹ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದಾರೆ. “ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಬರೆಯುವಂತೆ ನಿರ್ದೇಶಿಸುವ ಮಟ್ಟಕ್ಕೆ ನಾಚಿಕೆಯಿಲ್ಲದೆ ಹಿಂದಿ ಹೇರಿಕೆ ಬಂದು ನಿಂತಿದೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್‌ ಆಯ್ಕೆ ಅಸಿಂಧು ಆದೇಶವನ್ನ ಒಂದು ತಿಂಗಳು ಅಮಾನತಿನಲ್ಲಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...