Homeಮುಖಪುಟನಮಾಜ್ ವೇಳೆ ಮಸೀದಿ ಮುಂದೆ ಮೈಕ್‌ ಬಳಸಿ ಮೆರವಣಿಗೆ ಮಾಡಿದ ಹಿಂದುತ್ವ ಗುಂಪು: ಕಲ್ಲು ತೂರಾಟ

ನಮಾಜ್ ವೇಳೆ ಮಸೀದಿ ಮುಂದೆ ಮೈಕ್‌ ಬಳಸಿ ಮೆರವಣಿಗೆ ಮಾಡಿದ ಹಿಂದುತ್ವ ಗುಂಪು: ಕಲ್ಲು ತೂರಾಟ

- Advertisement -
- Advertisement -

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಾಲ್ಧಿ ಪಟ್ಟಣದ ಮಸೀದಿಯಲ್ಲಿ ಮುಸ್ಲಿಂ ಸಮುದಾಯದವರು ಮಂಗಳವಾರ ನಮಾಜ್ ಮಾಡುತ್ತಿರುವ ವೇಳೆ ಹಿಂದುತ್ವ ಗುಂಪೊಂದು ಧ್ವನಿವರ್ಧಕದಲ್ಲಿ ಜೋರಾಗಿ ಹಾಡು ಹಾಕಿಕೊಂಡು ಮೆರವಣಿಗೆ ಹೊರಟಿದ್ದರು. ಇದರಿಂದ ಎರಡೂ ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಬಗ್ಗೆ ಮಾತನಾಡಿದ   ಪೊಲೀಸ್ ವರಿಷ್ಠಾಧಿಕಾರಿ ಎಂ ರಾಜ್‌ಕುಮಾರ್ ಅವರು, ಈ ಹಿಂಸಾಚಾರದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಗಲಭೆ ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ ಮತ್ತು 45 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಲಗಾಂವ್‌ನಿಂದ ನಾಸಿಕ್ ಜಿಲ್ಲೆಯ ವಾಣಿಗೆ ತೆರಳುತ್ತಿದ್ದ ಹಿಂದುತ್ವವಾದಿಗಳ ಧಾರ್ಮಿಕ ಮೆರವಣಿಗೆಯು ಪಾಲ್ಧಿ ಗ್ರಾಮವನ್ನು ಹಾದುಹೋದಾಗ ಈ ಘಟನೆ ಸಂಭವಿಸಿದೆ. ಮಸೀದಿಯ ಮುಂದೆ ಜೋರಾಗಿ ಸಂಗೀತ ನುಡಿಸುವ ವಿಚಾರವಾಗಿ ಎರಡು ಸಮುದಾಯಗಳ ನಡುವೆ ವಾಗ್ವಾದ ನಡೆದಿದೆ. ಇದು ಜಗಳ ಮುಂದುವರೆದು ಕಲ್ಲು ತೂರಾಟಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

”ಮೆರವಣಿಗೆಯು ಮಸೀದಿಯನ್ನು ದಾಟುವವರೆಗೂ ಧ್ವನಿವರ್ಧಕವನ್ನು ಸ್ಥಗಿತಗೊಳಿಸಿದ್ದರು. ಮಸೀದಿಯನ್ನು ದಾಟಿದ ನಂತರ ಸಂಗೀತವನ್ನು ಮರುಪ್ರಾರಂಭಿಸಿದರು, ಆದರೂ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಯಿತು” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ಕುಮಾರ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕೂಡಲೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಎಫ್‌ಐಆರ್‌ಗಳಲ್ಲಿ ಒಂಬತ್ತು ಹಿಂದೂಗಳು ಮತ್ತು 63 ಮುಸ್ಲಿಮರನ್ನು ಹೆಸರಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂಸಾಚಾರದ ಸಮಯದಲ್ಲಿ ಆ ಪ್ರದೇಶದ ಮುಸ್ಲಿಮರ ಮನೆಗಳನ್ನು ಲೂಟಿ ಮಾಡಲಾಗಿದೆ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಕಳೆದೆರಡು ತಿಂಗಳುಗಳಿಂದ ಮಹಾರಾಷ್ಟ್ರದ ಹಲವು ನಗರಗಳಲ್ಲಿ ನಡೆದ ರ್ಯಾಲಿಗಳಲ್ಲಿ ಹಿಂದುತ್ವ ಗುಂಪುಗಳು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದವು, ಅದೇ ರೀತಿ ಜಲಗಾಂವ್‌ನಲ್ಲೂ ಹಿಂದುತ್ವ ಗುಂಪುಗಳು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದವು.

ಜಲಗಾಂವ್‌ನಲ್ಲಿ ನಡೆದ ಇಂತಹ ರ್ಯಾಲಿಯಲ್ಲಿ, ಸುದರ್ಶನ ನ್ಯೂಸ್ ಸಂಪಾದಕ ಸುರೇಶ್ ಚವ್ಹಾಂಕೆ ಅವರು “ಲವ್ ಜಿಹಾದ್” ವಿರುದ್ಧ ಕಾನೂನು ಜಾರಿಯಾಗಬೇಕು ಎಂದು ಹೇಳಿದ್ದರು. ಮಸೀದಿ ಮತ್ತು ಮದರಸಾಗಳಲ್ಲಿ ಮುಸ್ಲಿಂ ಹುಡುಗರಿಗೆ ನಮ್ಮ ಹಿಂದು ಸಹೋದರಿಯರನ್ನು ಹೇಗೆ ಮರುಳು ಮಾಡಬೇಕೆಂದು ಕಲಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...