Homeಮುಖಪುಟರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

- Advertisement -
- Advertisement -

’ನೀವು ಸುಖಾಸುಮ್ಮನೇ ವಿಷಯಗಳನ್ನು ದೊಡ್ಡದಾಗಿ ಮಾಡ್ತೀರಿ, ವಿಷಯ ತುಂಬಾ ಸರಳವಾಗಿದೆ. ರಾಹುಲ್ ಗಾಂಧಿ ಯಾರಿಗೋ ಅಪಮಾನ ಮಾಡಿದರು. ಅವರ ಮೇಲೆ ಕೇಸ್ ಹಾಕಲಾಯಿತು. ನ್ಯಾಯಾಧೀಶರು ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಘೋಷಿಸಿದರು ಹಾಗೂ 2 ವರ್ಷಗಳ ಶಿಕ್ಷೆ ವಿಧಿಸಿದರು. ಇಂತಹ ಶಿಕ್ಷೆ ಸಿಕ್ಕಾಗ ಸಂಸತ್ತಿನ ಸದಸ್ಯತ್ವ ರದ್ದಾಗುತ್ತದೆ, ಹಾಗಾಗಿ ಅನರ್ಹಗೊಳಿಸಲಾಯಿತು. ಇದರಲ್ಲಿ ಮೋದಿ ಸರಕಾರವನ್ನು ದೂಷಿಸುವಂತಹ ಯಾವ ವಿಷಯವಿದೆ? ಅದಾನಿಗೂ ಇದಕ್ಕೂ ಏನು ಸಂಬಂಧ? ನೀವು ಕಾರಣವಿಲ್ಲದೇ ಎಲ್ಲಾ ವಿಷಯಗಳಲ್ಲೂ ಪಿತೂರಿ ಹುಡುಕುತ್ತೀರಿ.’

ಪಾರ್ಕಿನಲ್ಲಿ ನಡೆಯುತ್ತಿದ್ದಾಗ ನನಗೆ ಒಬ್ಬ ವಯಸ್ಕರು ಈ ಪ್ರಶ್ನೆಗಳನ್ನು ಹಾಕಿದರು. ಅವರು ಒಳ್ಳೆಯ ವ್ಯಕ್ತಿ ಅನಿಸಿದರು ಮತ್ತು ಯಾವುದೇ ಪಕ್ಷದ ಕಾರ್ಯಕರ್ತ ಅಥವಾ ಸಮರ್ಥಕರಾಗಿರಲಿಲ್ಲ. ಪ್ರಶ್ನೆಗಳೂ ಸರಳವಾಗಿದ್ದವು, ಸೂಕ್ತವೂ ಆಗಿದ್ದವು. ಕಾರಣವಿಲ್ಲದೇ ಪಿತೂರಿ ಹುಡುಕಬಾರದು ಎಂಬ ನಿಮ್ಮ ಅಭಿಪ್ರಾಯ ಒಪ್ಪಿಕೊಳ್ಳುತ್ತೇನೆ ಎಂದು ನಾನು ಹೇಳಿದೆ. ಪ್ರತಿಯೊಂದು ಸಣ್ಣಪುಟ್ಟ ವಿಷಯಗಳಲ್ಲೂ ಆಳವಾದ ಪಿತೂರಿಯ ಆರೋಪ ಮಾಡುವುದು ರಾಜಕೀಯದ ರೋಗವಾಗಿದೆ. ನಾವಿದನ್ನು ಮಾಡಬಾರದು. ಆದರೆ ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸುವ ವಿಷಯದಲ್ಲಿ ಒಂದು ಆಳವಾದ ತಂತ್ರದ ಕಡೆಗೆ ಬೊಟ್ಟು ತೋರಿಸುವ ಹತ್ತು ವಿಚಿತ್ರ ವಿಷಯಗಳಿವೆ.

ಮೊದಲ ವಿಚಿತ್ರ, ರಾಹುಲ್ ಗಾಂಧಿ ಈ ಭಾಷಣ ಮಾಡಿದ್ದು ಕರ್ನಾಟಕದ ಕೋಲಾರದಲ್ಲಿ ಆದರೆ ಅವರ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದ್ದು ಗುಜರಾತಿನ ಸೂರತ್ ನಗರದಲ್ಲಿ. ಹೌದು, ಪ್ರಕರಣ ಎಲ್ಲಿ ದಾಖಲಾಗಬೇಕು ಎಂಬುದು ಪ್ರಕರಣ ದಾಖಲಿಸುವವನ ಇಚ್ಛೆ ಎಂದು ನೀವು ಹೇಳಬಹುದು. ಆದರೆ ನೆನಪಿಡಿ, ಪ್ರಕರಣ ದಾಖಲಿಸಿದವರು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ, ಅವರು ಬಿಜೆಪಿಯ ಶಾಸಕ ಪೂರ್ಣೇಶ ಮೋದಿ. ಇದರ ಹಿಂದೆ ಏನೋ ಅಡಗಿದೆ ಎಂದು ನಿಮಗೆ ಅನಿಸುತ್ತಿಲ್ಲವಾ?

ಎರಡನೆಯ ವಿಚಿತ್ರವೇನೆಂದರೆ, ಪ್ರಕರಣ ಶುರುವಾದ ನಂತರ ಆಗಿನ ನ್ಯಾಯಾಧೀಶರಾಗಿದ್ದ ಕಪಾಡಿಯಾ, ಎಲ್ಲಾ ವಿಚಾರಣೆಗಳ ಸಂದರ್ಭಗಳಲ್ಲಿ ರಾಹುಲ್ ಗಾಂಧಿ ಹಾಜರಿರಬೇಕು ಎಂಬ ಆದೇಶ ನೀಡಲು ನಿರಾಕರಿಸಿದಾಗ, ದೂರು ದಾಖಲಿಸಿದವರೇ ಹೈಕೋರ್ಟಿಗೆ ಹೋಗಿ, ತಮ್ಮ ಪ್ರಕರಣ ನಿಲ್ಲಿಸಿದರು; ಸಾಮಾನ್ಯವಾಗಿ ಆರೋಪಿ ತನ್ನ ವಿರುದ್ಧದ ಪ್ರಕರಣ ನಿಲ್ಲಿಸುವ ಪ್ರಯತ್ನ ಮಾಡುತ್ತಾಳೆ/ನೆ, ದೂರು ದಾಖಲಿಸಿದ ವ್ಯಕ್ತಿ ಈ ರೀತಿ ಮಾಡುವುದಿಲ್ಲ. ಇದರ ಹಿಂದೆ ನ್ಯಾಯಾಧೀಶರ ವರ್ಗಾವಣೆಗೆ ಕಾಯುವ ಇರಾದೆ ಇದ್ದಿರಬಹುದಲ್ಲವೇ?

ಮೂರನೆಯ ವಿಚಿತ್ರ, ಅದಾನಿ ವಿಷಯದಲ್ಲಿ ರಾಹುಲ್ ಗಾಂಧಿಯ ಭಾಷಣ ಮಾಡಿದ ಒಂದು ವಾರದೊಳಗೇ ಅಷ್ಟು ತರಾತುರಿಯಲ್ಲಿ ಬಿಜೆಪಿಯ ಶಾಸಕರು ವರ್ಷಗಳಿಂದ ತಣ್ಣಗೇ ಕುಳಿತಿದ್ದ ಪ್ರಕರಣವನ್ನು ಮತ್ತೊಮ್ಮೆ ಶುರು ಮಾಡುವ ಪ್ರಕ್ರಿಯೆ ಆರಂಭಿಸಿದರು. ಇದರ ಹಿಂದೆ ಯಾವುದೇ ರಾಜಕೀಯ ನಡೆ ಕಾಣುತ್ತಿಲ್ಲವೇ?

ನಾಲ್ಕನೆಯ ವಿಚಿತ್ರ: ಇದು ಎಂಥ ಕಾಕತಾಳೀಯ ನೋಡಿ, ದೂರುದಾರ ತನ್ನ ಪ್ರಕರಣ ನಿಲ್ಲಿಸಲು ಬಯಸಿದಾಗ ಹೈಕೋರ್ಟ್ ನಿಲ್ಲಿಸುತ್ತೆ, ಯಾವಾಗ ಮತ್ತೆ ಶುರು ಮಾಡಲು ಬಯಸುತ್ತಾರೋ ಆಗ ಹೈಕೋರ್ಟ್ ಮರು ಪ್ರಾರಂಭಿಸುತ್ತದೆ. ಸಾಮಾನ್ಯ ಪ್ರಕರಣಗಳಲ್ಲಿಯೂ ಹೈಕೋರ್ಟ್ ಇಷ್ಟು ಉದಾರವಾಗಿರುತ್ತದೆಯೇ?

ಪೂರ್ಣೇಶ್ ಮೋದಿ

ಐದನೆಯ ವಿಚಿತ್ರ, ನ್ಯಾಯಾಧೀಶ ಹಸ್‌ಮುಖ್‌ಭಾಯಿ ವರ್ಮಗೆ ಸಂಬಂಧಿಸಿದೆ. ಮತ್ತೆ ಪ್ರಕರಣ ಶುರುವಾದಾಗ ನ್ಯಾಯಾಧೀಶರು ಬದಲಾಗುತ್ತಾರೆ ಹಾಗೂ ಕಳೆದ ಆರು ತಿಂಗಳಲ್ಲಿ ವರ್ಮಾಸಾಹೇಬರಿಗೆ ಒಂದಲ್ಲ ಎರಡು ಬಡ್ತಿ ಸಿಕ್ಕಿವೆ. ನಿಮಗೆ ಇದು ಅನುಮಾನಾಸ್ಪದವಾಗಿ ಕಾಣಿಸುತ್ತಿಲ್ಲವೇ?

ಈಗ ಆರನೆಯ ವಿಚಿತ್ರ ನೋಡಿ. ಪ್ರಕರಣ ಎರಡನೆಯ ಸಲ ಶುರುವಾದ ಒಂದು ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳುತ್ತದೆ ಹಾಗೂ ತೀರ್ಪನ್ನೂ ಪ್ರಕಟಿಸಲಾಗುತ್ತದೆ. ಈ ದೇಶದ ನ್ಯಾಯಾಲಯಗಳು ಇಷ್ಟು ತ್ವರಿತವಾಗಿ ಬೇರೆ ಯಾವುದೇ ಪ್ರಕರಣಗಳಲ್ಲಿ ವಿಚಾರಣೆ ನಡೆಸುತ್ತವೆಯೇ? ಅಥವಾ ಯಾವುದೋ ಒಂದು ಡೆಡ್‌ಲೈನ್‌ಗಿಂತ ಮುನ್ನ ತೀರ್ಪು ಪ್ರಕಟಿಸುವ ತರಾತರಿಯಲ್ಲಿದ್ದರೆ?

ಆಯ್ತು, ತೀರ್ಪು ಬೇಗನೇ ಬಂತು ಆದರೆ ಬಂದ ತೀರ್ಪಿಗೆ ಸಂಬಂಧಿಸಿದ ಏಳನೆಯ ವಿಚಿತ್ರ ನೋಡಿ. ರಾಹುಲ್ ಗಾಂಧಿ ಕೆಲವು ಕಳ್ಳರನ್ನು ಹೆಸರಿಸಿ, ಏನು ಎಲ್ಲಾ ಕಳ್ಳರ ಉಪನಾಮ ಮೋದಿ ಏಕೆ ಎಂದು ಕೇಳಿದ್ದರು. ಆದರೆ ಯಾರ ಹೆಸರಲ್ಲಿ ಮೋದಿ ಅಂತಿದೆಯೋ, ಅವರು ಕಳ್ಳರಾಗಿರುವುದು ಏಕೆ ಎಂದು ಹೇಳಿದ್ದಿಲ್ಲ. ಹಾಗೂ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದ್ದೇನೆಂದರೆ, ಯಾವುದೇ ವರ್ಗ ಅಥವಾ ಸಮುದಾಯದ ಅಪಮಾನ ಆಗಿದೆ ಎಂದ ಮಾತ್ರಕ್ಕೆ ನೀವು ನಿಮ್ಮ ಮಾನನಷ್ಟ ಆಗಿದೆ ಎಂದು ಪ್ರಕರಣ ದಾಖಲಿಸುವಂತಿಲ್ಲ ಎಂದು; ಅಂದರೆ, ಹೇಳಿಕೆಯೊಂದು ನೇರಾನೇರವಾಗಿ ನಿಮ್ಮ ಕಡೆಗೆ ಸೂಚಿಸುತ್ತಿಲ್ಲ ಎಂದರೆ ಪ್ರಕರಣ ದಾಖಲಿಸುವಂತಿಲ್ಲ. ರಾಹುಲ್ ಗಾಂಧಿಯವರು ಪೂರ್ಣೇಶ್ ಮೋದಿಯ ಹೆಸರನ್ನೂ ಹೇಳಿಲ್ಲ ಹಾಗೂ ಅವರ ಕಡೆ ಬೊಟ್ಟು ಮಾಡಿ ತೋರಿಸಲೂ ಇಲ್ಲ. ಇಂತಹದ್ದರಲ್ಲಿ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಕಡೆಗಣಿಸುತ್ತ ಅವರನ್ನು ತಪ್ಪಿತಸ್ಥ ಎಂದು ಹೇಗೆ ತೀರ್ಮಾನಿಸಲಾಗುತ್ತದೆ?

ಇದನ್ನೂ ಓದಿ: ‘ಗಾಂಧಿ ತತ್ವಗಳಿಗೆ ಎಸಗಿದ ದೊಡ್ಡ ದ್ರೋಹ’: ರಾಹುಲ್ ಅಮಾನತ್ತಿಗೆ ಅಮೆರಿಕ ಸಂಸದರಿಂದ ಖಂಡನೆ

ಎಂಟನೆಯ ವಿಚಿತ್ರದ ಕಾಕತಾಳೀಯ ನೋಡಿ; ಈ ಪ್ರಕರಣದ ಶಿಕ್ಷೆಯ ಅವಧಿಗೆ ಸಂಬಂಧಿಸಿದ್ದು. ಮಾನನಷ್ಟ ಮೊಕದ್ದಮೆಯಲ್ಲಿ ಯಾರೊಬ್ಬ ದೋಷಿಗೂ 2 ವರ್ಷದ ಸೆರೆವಾಸ ಸಿಕ್ಕಿದ್ದರ ಬಗ್ಗೆ ದೇಶದ ಯಾವ ದೊಡ್ಡ ವಕೀಲರೂ ಒಂದು ಉದಾಹರಣೆ ನೀಡಲು ಸಾಧ್ಯವಾಗಿಲ್ಲ. ಇಂತಹ ಹಿಂದೆಂದೂ ಕಾಣದಂತಹ ಗರಿಷ್ಠ ಸಂಭಾವ್ಯ ಶಿಕ್ಷೆ ರಾಹುಲ್ ಗಾಂಧಿಗೆ ಏಕೆ ವಿಧಿಸಲಾಯಿತು? 2 ವರ್ಷದ ಶಿಕ್ಷೆಯಿಲ್ಲದೇ ಯಾರನ್ನೂ ಸಂಸತ್ತಿನಿಂದ ಅನರ್ಹಗೊಳಿಸಲು ಸಾಧ್ಯವಿಲ್ಲ ಎಂಬುದೂ ಕೇವಲ ಕಾಕತಾಳೀಯವೇ?

ಒಂಬತ್ತನೆಯ ಕಾಕತಾಳೀಯ, ಸೂರತ್‌ನ ನ್ಯಾಯಾಧೀಶರು ತೀರ್ಪು ನೀಡಿದ 24 ಗಂಟೆಗಳಲ್ಲಿ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಅನರ್ಹ ಎಂದು ಘೋಷಿಸುವ ಅಧಿಸೂಚನೆಯನ್ನು ಜಾರಿಗೊಳಿಸಲಾಯಿತು. ಇಲ್ಲಿಯವರೆಗೆ ಆದ ಇಂತಹ ಪ್ರಕರಣಗಳಲ್ಲಿ ಕ್ರಮ ತೆಗೆದುಕೊಳ್ಳಲು ಕನಿಷ್ಠ ಒಂದು ತಿಂಗಳು ಬೇಕಾಗಿದೆ. ಈ ಬಾರಿ ಮಿಂಚಿನ ವೇಗ ಏಕೆ? ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹೋಗಿ ಈ ತೀರ್ಪಿನ ವಿರುದ್ಧ ಸ್ಟೇ ತೆಗೆದುಕೊಂಡು ಬರಬಾರದು ಎಂಬ ಕಾರಣಕ್ಕೆ ಈ ತರಾತುರಿಯೇ? ಅಂದರೆ ಯಾರೋ ಎಲ್ಲೋ ಮುಂಚೆಯಿಂದಲೇ ಈ ಯೋಜನೆ ಮಾಡಿಟ್ಟಿದ್ದರೆ?

10ನೆಯ ವಿಚಿತ್ರ ಸಂವಿಧಾನಕ್ಕೆ ಸಂಬಂಧಿಸಿದೆ; ಏಕೆಂದರೆ ಸಂವಿಧಾನದ 103ನೆಯ ಅನುಚ್ಛೇದದ ಅನುಗುಣವಾಗಿ ಯಾವುದೇ ಸಂಸದರನ್ನು ಅನರ್ಹ ಎಂದು ಘೋಷಿಸುವ ಮುನ್ನ ರಾಷ್ಟ್ರಪತಿಯವರ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಆದರೆ ಈ ವಿಷಯದಲ್ಲಿ ರಾಷ್ಟ್ರಪತಿಯವರ ಅಭಿಪ್ರಾಯ ಏಕೆ ತೆಗೆದುಕೊಳ್ಳಲಿಲ್ಲ? ರಾಷ್ಟ್ರಪತಿ ತಮ್ಮ ಅಭಿಪ್ರಾಯ ತೆಗೆದುಕೊಳ್ಳಲು ಚುನಾವಣಾ ಆಯೋಗದ ಅಭಿಪ್ರಾಯ ತೆಗೆದುಕೊಳ್ಳಬೇಕಾಗುತ್ತಿತ್ತು ಹಾಗೂ ಅದರಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವಲ್ಲಿ ತಡವಾಗುತ್ತಿತ್ತು ಎಂಬ ಕಾರಣಕ್ಕೆ ರಾಷ್ಟ್ರಪತಿಯವರ ಅನುಮತಿ ತೆಗೆದುಕೊಳ್ಳಲು ಮುಂದಾಗಲಿಲ್ಲವೇ?

ನನ್ನ ಎಲ್ಲ ಪ್ರಶ್ನೆಗಳನ್ನು ಕೇಳಿಸಿಕೊಂಡು ಆ ಸಾಹೇಬರು ಹ್ಮೂ ಅಂದು ಸುಮ್ಮನಾದರು. ಈಗ ನೀವೇ ಹೇಳಿ, ಇದು ಒಂದು ಸಾಮಾನ್ಯ ನ್ಯಾಯದ ಪ್ರಕ್ರಿಯೆಯೇ? ಅಥವಾ ಇನ್ನುಮುಂದೆ ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮಾತನಾಡಲು ಬಿಡಬಾರದು ಎಂದು ಯಾರೋ ಮೊದಲೇ ತೀರ್ಮಾನಿಸಿದ್ದರೆ? ಅದಾನಿ ವಿರುದ್ಧ ಅವರು ಮಾತನಾಡಿದ್ದಕ್ಕೂ ಇದಕ್ಕೂ ಏನಾದರೂ ಸಂಬಂಧವಿದೆಯೇ? ತೀರ್ಮಾನ ಓದುಗರಿಗೆ ಬಿಟ್ಟಿದ್ದು.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...