Homeದಲಿತ್ ಫೈಲ್ಸ್ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

“ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಸಿಎಂಗೆ ದರ್ಶನ್‌ ಸೋಲಂಕಿಯವರ ಕುಟುಂಬ ಪತ್ರ ಬರೆದಿದೆ

- Advertisement -
- Advertisement -

ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್‌ ಸೋಲಂಕಿ ಅವರ ಕುಟುಂಬ ಮತ್ತಷ್ಟು ಸಮಸ್ಯೆಗಳಿಗೆ ಎದುರಾಗಿದೆ. “ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಐಐಟಿ ಬಾಂಬೆಯಲ್ಲಿ ದರ್ಶನ್‌ ಜಾತಿ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹೇಳಿಕೊಂಡಿತ್ತು. ಆದಾಗ್ಯೂ, ಐಐಟಿ-ಬಾಂಬೆ ಸ್ಥಾಪಿಸಿದ ತನಿಖಾ ಸಮಿತಿಯು ಈ ಆರೋಪವನ್ನು ನಿರಾಕರಿಸಿದೆ. ಸೋಲಂಕಿಯವರು ಶೈಕ್ಷಣಿಕವಾಗಿ ಹಿಂದುಳಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಮಿತಿ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಮತ್ತೊಂದು ಸಂಗತಿ ಹೊರಬಿದ್ದಿತ್ತು. ಸೋಲಂಕಿಯವರ ಜೊತೆಯಲ್ಲಿ ಈ ಹಿಂದೆ ಮಾತನಾಡಿದ್ದ ಹಿರಿಯ ವಿದ್ಯಾರ್ಥಿಯೊಬ್ಬರ ಆಡಿಯೊ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು. ತಮ್ಮ ಹಾಸ್ಟೆಲ್ ರೂಮ್‌ ಬದಲಿಸಬೇಕೆಂದು, ರೂಮ್‌ಮೇಟ್‌ ಜಾತಿ ತಾರತಮ್ಯ ಎಸಗುತ್ತಿದ್ದಾನೆಂದು ಸೋಲಂಕಿ ಹೇಳಿಕೊಂಡಿದ್ದಾಗಿ ಆ ಆಡಿಯೊ ಸಂಭಾಷಣೆ ಬಹಿರಂಗಪಡಿಸಿತ್ತು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದಾರೆ.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದು, “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ದಲಿತ ವಿದ್ಯಾರ್ಥಿಯ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಸೋಲಂಕಿ ಅವರ ಸಹಪಾಠಿಯೊಬ್ಬರನ್ನು ಅದರಲ್ಲಿ ಹೆಸರಿಸಲಾಗಿದೆ ಎಂದು ಸೋಮವಾರ ಎಸ್‌ಐಟಿ ಹೇಳಿಕೊಂಡಿತ್ತು.

ಸೋಲಂಕಿ ಅವರ ಉತ್ತರ ಪತ್ರಿಕೆಗಳು ಮತ್ತು ಅವರ ಕೆಲವು ಹಳೆಯ ನೋಟ್‌ಬುಕ್‌ಗಳನ್ನು ವಶಕ್ಕೆ ಪಡೆದು ಸೂಸೈಡ್ ನೋಟ್‌ನಲ್ಲಿನ ಕೈಬರಹವನ್ನು ಹೋಲಿಕೆ ಮಾಡಲು ಎಸ್‌ಐಟಿ ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...