Homeದಲಿತ್ ಫೈಲ್ಸ್ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

ದರ್ಶನ್ ಸೋಲಂಕಿ ಪ್ರಕರಣ; ಎಫ್‌ಐಆರ್ ದಾಖಲಿಸಲು ಪೊಲೀಸರ ನಿರಾಕರಣೆ: ಕುಟುಂಬ ಆರೋಪ

“ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಸಿಎಂಗೆ ದರ್ಶನ್‌ ಸೋಲಂಕಿಯವರ ಕುಟುಂಬ ಪತ್ರ ಬರೆದಿದೆ

- Advertisement -
- Advertisement -

ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್‌ ಸೋಲಂಕಿ ಅವರ ಕುಟುಂಬ ಮತ್ತಷ್ಟು ಸಮಸ್ಯೆಗಳಿಗೆ ಎದುರಾಗಿದೆ. “ಮುಂಬೈ ನಗರ ಪೊಲೀಸರು ನಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ; ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

18 ವರ್ಷ ವಯಸ್ಸಿನ ದರ್ಶನ್ ಸೋಲಂಕಿಯವರು ಫೆಬ್ರವರಿ 12 ರಂದು ತಮ್ಮ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದರು. ಅಹಮದಾಬಾದ್‌ ಮೂಲದವರಾದ ದರ್ಶನ್‌, ಐಐಟಿ-ಬಾಂಬೆಯಲ್ಲಿ ಬ್ಯಾಚುಲರ್ಸ್ ಇನ್ ಟೆಕ್ನಾಲಜಿ (ಕೆಮಿಕಲ್) ಕೋರ್ಸ್‌ನಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದರು.

ಐಐಟಿ ಬಾಂಬೆಯಲ್ಲಿ ದರ್ಶನ್‌ ಜಾತಿ ತಾರತಮ್ಯವನ್ನು ಎದುರಿಸುತ್ತಿದ್ದರು ಎಂದು ಅವರ ಕುಟುಂಬ ಹೇಳಿಕೊಂಡಿತ್ತು. ಆದಾಗ್ಯೂ, ಐಐಟಿ-ಬಾಂಬೆ ಸ್ಥಾಪಿಸಿದ ತನಿಖಾ ಸಮಿತಿಯು ಈ ಆರೋಪವನ್ನು ನಿರಾಕರಿಸಿದೆ. ಸೋಲಂಕಿಯವರು ಶೈಕ್ಷಣಿಕವಾಗಿ ಹಿಂದುಳಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಸಮಿತಿ ಹೇಳಿಕೊಂಡಿದೆ.

ಈ ಎಲ್ಲ ಬೆಳವಣಿಗೆಗಳ ನಂತರ ಮತ್ತೊಂದು ಸಂಗತಿ ಹೊರಬಿದ್ದಿತ್ತು. ಸೋಲಂಕಿಯವರ ಜೊತೆಯಲ್ಲಿ ಈ ಹಿಂದೆ ಮಾತನಾಡಿದ್ದ ಹಿರಿಯ ವಿದ್ಯಾರ್ಥಿಯೊಬ್ಬರ ಆಡಿಯೊ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು. ತಮ್ಮ ಹಾಸ್ಟೆಲ್ ರೂಮ್‌ ಬದಲಿಸಬೇಕೆಂದು, ರೂಮ್‌ಮೇಟ್‌ ಜಾತಿ ತಾರತಮ್ಯ ಎಸಗುತ್ತಿದ್ದಾನೆಂದು ಸೋಲಂಕಿ ಹೇಳಿಕೊಂಡಿದ್ದಾಗಿ ಆ ಆಡಿಯೊ ಸಂಭಾಷಣೆ ಬಹಿರಂಗಪಡಿಸಿತ್ತು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ದರ್ಶನ್‌ ಸೋಲಂಕಿಯವರ ತಂದೆ ರಮೇಶಭಾಯ್ ಸೋಲಂಕಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ನಮ್ಮ ಕುಟುಂಬವು ಪೊಲೀಸರು ಮತ್ತು ವಿಶೇಷ ತನಿಖಾ ತಂಡದ ಸದಸ್ಯರ ವರ್ತನೆಯಿಂದ ಸಂಪೂರ್ಣವಾಗಿ ಆಘಾತಕ್ಕೊಳಗಾಗಿದೆ ಮತ್ತು ನಿರಾಶೆಗೊಂಡಿದೆ. ಸುಮಾರು ಎರಡು ವಾರಗಳಿಂದ ಎಫ್‌ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ತಾವು ಹೇಳಿದಂತೆ ದೂರಿನಲ್ಲಿ ಬರೆದುಕೊಡಬೇಕೆಂದು ಪೊಲೀಸರು ಮತ್ತು ವಿಶೇಷ ತನಿಖಾ ತಂಡ ಒತ್ತಾಯಿಸುತ್ತಿದೆ” ಎಂದು ರಮೇಶ್‌ಭಾಯ್‌ ಆರೋಪಿಸಿದ್ದಾರೆ.

“ಪೊಲೀಸರ ವರ್ತನೆಯು ನಮ್ಮಲ್ಲಿ ಯಾವುದೇ ವಿಶ್ವಾಸವನ್ನು ತರುತ್ತಿಲ್ಲ. ದರ್ಶನ್ ಎದುರಿಸುತ್ತಿದ್ದ ಜಾತಿ ತಾರತಮ್ಯದ ದೃಷ್ಟಿಕೋನದಲ್ಲಿ ತನಿಖೆಯನ್ನು ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಕರಣವನ್ನು ಬೇರೆಡೆಗೆ ತಿರುಗಿಸಲು ಎಸ್‌ಐಟಿ ಪ್ರಯತ್ನಿಸುತ್ತಿದೆ ಎಂದು ನಾವು ಆತಂಕಗೊಂಡಿದ್ದೇವೆ” ಎಂದಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರಿಗೂ ಪತ್ರ ಬರೆದಿದ್ದು, “ಸ್ವತಂತ್ರ ತನಿಖೆ ನಡೆಸಬೇಕು; ಸೋಲಂಕಿ ಅವರ ಕುಟುಂಬದವರು ಸಲ್ಲಿಸಿದ ಪ್ರಾಥಮಿಕ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಬೇಕು” ಎಂದು ಕೋರಲಾಗಿದೆ.

“ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯದಿಂದ ಅಕಾಲಿಕ ಮರಣ ಹೊಂದಿದ ನಮ್ಮ ಮಗನಿಗೆ ನ್ಯಾಯ ದೊರಕಿಸಿಕೊಡಲು, ಸತ್ಯವನ್ನು ಎತ್ತಿಹಿಡಿಯಲು ದಯವಿಟ್ಟು ಈ ವಿಷಯದಲ್ಲಿ ತುರ್ತಾಗಿ ಕಾರ್ಯನಿರ್ವಹಿಸಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ದಲಿತ ವಿದ್ಯಾರ್ಥಿಯ ಕೊಠಡಿಯಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಸೋಲಂಕಿ ಅವರ ಸಹಪಾಠಿಯೊಬ್ಬರನ್ನು ಅದರಲ್ಲಿ ಹೆಸರಿಸಲಾಗಿದೆ ಎಂದು ಸೋಮವಾರ ಎಸ್‌ಐಟಿ ಹೇಳಿಕೊಂಡಿತ್ತು.

ಸೋಲಂಕಿ ಅವರ ಉತ್ತರ ಪತ್ರಿಕೆಗಳು ಮತ್ತು ಅವರ ಕೆಲವು ಹಳೆಯ ನೋಟ್‌ಬುಕ್‌ಗಳನ್ನು ವಶಕ್ಕೆ ಪಡೆದು ಸೂಸೈಡ್ ನೋಟ್‌ನಲ್ಲಿನ ಕೈಬರಹವನ್ನು ಹೋಲಿಕೆ ಮಾಡಲು ಎಸ್‌ಐಟಿ ಮುಂದಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...