Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...