Homeಮುಖಪುಟನಿವೃತ ನ್ಯಾಯಾಧೀಶರನ್ನು ''ಭಾರತ ವಿರೋಧಿ ಗ್ಯಾಂಗ್'' ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ...

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದ ಕಾನೂನು ಸಚಿವರಿಗೆ 90 ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

- Advertisement -
- Advertisement -

ನಿವೃತ ನ್ಯಾಯಾಧೀಶರನ್ನು ”ಭಾರತ ವಿರೋಧಿ ಗ್ಯಾಂಗ್” ಎಂದು ಟೀಕಿಸಿದ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ವಿರುದ್ಧ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ರಿಜಿಜು ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ 90 ಮಾಜಿ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ.

”ಸರ್ಕಾರದ ಅಭಿಪ್ರಾಯಗಳನ್ನು ಒಬ್ಬ ವ್ಯಕ್ತಿಯು ಒಪ್ಪದಿದ್ದರೆ, ಆತನನ್ನು ”ರಾಷ್ಟ್ರವಿರೋಧಿ” ಎಂದು ಶಾಶ್ವತವಾಗಿ ಹಣೆಪಟ್ಟಿ ಕಟ್ಟುತ್ತೀರಿ. ಮುಂದುವರೆದು ಆತನ ವಿರುದ್ಧ ಸರ್ಕಾರವು ಎಲ್ಲಾ ರೀತಿಯ ಶಿಕ್ಷೆಯ ಕ್ರಮಗಳನ್ನು ಪ್ರಾರಂಭಿಸುತ್ತದೆ. ದೇಶದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೂ ಅದನ್ನು ಸರ್ಕಾರ ನಿಗ್ರಹಿಸಲು ಪ್ರಯತ್ನಿಸುತ್ತದೆ” ಎಂದು 90 ಮಾಜಿ ಅಧಿಕಾರಿಗಳು ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.

ಮಾಜಿ ಭಾರತೀಯ ಆಡಳಿತ ಸೇವೆಗಳ ಅಧಿಕಾರಿಗಳಾದ ಹರ್ಷ್ ಮಂದರ್, ನಜೀಬ್ ಜಂಗ್ ಮತ್ತು ಮಾಜಿ ಭಾರತೀಯ ಪೊಲೀಸ್ ಸೇವಾ ಅಧಿಕಾರಿ ಜೂಲಿಯೊ ರಿಬೇರೊ ಇವರೆಲ್ಲಾ ಪತ್ರಕ್ಕೆ ಸಹಿ ಮಾಡಿದವರಲ್ಲಿ ಇದ್ದಾರೆ.

ಮಾರ್ಚ್ 17 ರಂದು, ಕೆಲವು ನಿವೃತ್ತ ನ್ಯಾಯಾಧೀಶರು “ಭಾರತ ವಿರೋಧಿ ಗ್ಯಾಂಗ್” ನ ಭಾಗವಾಗಿದ್ದಾರೆ ಮತ್ತು ನ್ಯಾಯಾಂಗವನ್ನು ಪ್ರತಿಪಕ್ಷದ ಪಾತ್ರವನ್ನು ವಹಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾನೂನು ಸಚಿವರು ಹೇಳಿದ್ದರು.

ಇದನ್ನೂಓದಿ: ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಕಳೆದ ಕೆಲವು ತಿಂಗಳುಗಳಿಂದ, ರಿಜಿಜು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರು ನ್ಯಾಯಾಧೀಶರ ನೇಮಕದ ಕೊಲಿಜಿಯಂ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದರು. ಇದು ಅಪಾರದರ್ಶಕವಾಗಿದೆ ಎಂದು ಹೇಳುತ್ತಾ ಬಂದಿದ್ದಾರೆ.

ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಿಗೆ ಹೆಸರುಗಳನ್ನು ಶಿಫಾರಸು ಮಾಡುತ್ತಾರೆ ಮತ್ತು ಸರ್ಕಾರವು ಅವುಗಳನ್ನು ಅನುಸರಿಸುವುದನ್ನು ನಿರೀಕ್ಷಿಸಲಾಗುತ್ತದೆ ಇದು ಕೊಲಿಜಿಯಂ ವ್ಯವಸ್ಥೆಯಾಗಿದೆ.

ಆದರೆ ಕೊಲಿಜಿಯಂ ನೀಡಿದ ಕೆಲವೊಂದು ಹೆಸರನ್ನು ಸ್ವೀಕರಿಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿರುವುದು ನೋಡಿದರೆ, ಸರ್ಕಾರಕ್ಕೆ ವಿಧೇಯ ನ್ಯಾಯಾಂಗ ಸೃಷ್ಠಿ ಮಾಡುವ ಉದ್ದೇಶ ಇದ್ದಂತಿದೆ. ನ್ಯಾಯಾಂಗದ ಸ್ವಾಯತ್ತತೆಯನ್ನು ರಕ್ಷಣೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು ಹಾಗೂ ತಜ್ಞರು ಬಹಿರಂಗವಾಗಿ ಗಂಭೀರ ಕಾಳಜಿ ವ್ಯಕ್ತಪಡಿಸುತ್ತಿರುವುದು ಅಚ್ಚರಿಯೇನಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿಯ ಮಾಜಿ ಲೆಫ್ಟಿನೆಂಟ್‌ ಗವರ್ನರ್‌ ನಜೀಬ್‌ ಜಂಗ್‌, ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ ಪಿಳ್ಳೈ, ವಿದೇಶಾಂಗ ಇಲಾಖೆಯ ಮಾಜಿ ಕಾರ್ಯದರ್ಶಿ ಸುಜಾತ ಸಿಂಗ್‌ ಹಾಗೂ ಆರೋಗ್ಯ ಇಲಾಖೆಯ ಮಾಜಿ ಕಾರ್ಯದರ್ಶಿ ಕೆ. ಸುಜಾತ ಸಿಂಗ್‌ ರಾವ್‌ ಸೇರಿ ಒಟ್ಟು 90 ಮಂದಿ ಮಾಜಿ ಅಧಿಕಾರಿಗಳು ಈ ಪತ್ರ ಬರೆದಿದ್ದಾರೆ.

”ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆ ಮಾಡುವುದು ಆಯ್ಕೆಯಲ್ಲ. ಕಾರ್ಯಾಂಗವು ನ್ಯಾಯಾಂಗದ ಮೇಲೆ ಅತಿಕ್ರಮಣ ಮಾಡುವುದು ಜನತಂತ್ರದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ತೀಕ್ಷ್ಣವಾಗಿ ಮಾಜಿ ಅಧಿಕಾರಿಗಳು ಈ ಪತ್ರದಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಅದರ ಕೊಲಿಜಿಯಂ ವ್ಯವಸ್ಥೆಯ ಮೇಲೆ ಸರ್ಕಾರದ ”ಸಂಯೋಜಿತ ದಾಳಿಯ ಭಾಗ” ಎಂದು ತೋರುತ್ತದೆ ಎಂದು ಗುರುವಾರ ರಿಜಿಜು ಅವರಿಗೆ ಬರೆದ ಪತ್ರದಲ್ಲಿ ಮಾಜಿ ನಾಗರಿಕ ಸೇವಕರು ತಿಳಿಸಿದ್ದಾರೆ.

ರಿಜಿಜು ಮತ್ತು ಧಂಕರ್ ಅವರು ನ್ಯಾಯಾಂಗ ನೇಮಕಾತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಕೊಲಿಜಿಯಂನೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಬದಲು ಅದಕ್ಕೆ ವಿರುದ್ಧವಾಗಿ ಟೀಕೆಗಳನ್ನು ಮಾಡುತ್ತಾ ವಿಷಪೂರಿತವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...