Homeಮುಖಪುಟಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಲಿಚಿತ್ರ ತಾರೆಯನ್ನು ಮೌನವಾಗಿರಿಸಲು ಹಣ ಪಾವತಿ ಮಾಡಿರುವ ಪ್ರಕರಣದಲ್ಲಿ, ಅವರ ಮೇಲೆ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಸಲ್ಲಿಸಿದೆ.

ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಗುರುವಾರ ಸಂಜೆ ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ, ಟ್ರಂಪ್ ಶರಣಾಗತಿಗೆ ಸಹಕರಿಸುವಂತೆ ಸೂಚಿಸಿದ್ದಾರೆ. ಆದರೆ ಟ್ರಂಪ್ ಮಾತ್ರ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಈ ದೋಷಾರೋಪಣೆಯು ರಾಜಕೀಯ ಕಿರುಕುಳ ಮತ್ತು ಚುನಾವಣಾ ಹಸ್ತಕ್ಷೇಪ ಎಂದು ಖಂಡಿಸಿದ್ದಾರೆ.

2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ.

ಈ ಮೂಲಕ ಅಪರಾಧದ ಆರೋಪ ಹೊತ್ತ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ. ಇದರೊಂದಿಗೆ ಟ್ರಂಪ್‌ಗೆ ಬಂಧನ ಭೀತಿ ಎದುರಾಗಿದೆ.

ಈ ಕುರಿತಂತೆ ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಪ್ರತಿಕ್ರಿಯಿಸಿದ್ದು, ”ಈ ಹೋರಾಟದಲ್ಲಿ ಬೆಂಬಲಿಸಿದ ಮತ್ತು ಪ್ರೀತಿ ಕೊಟ್ಟ ಎಲ್ಲರಿಗೂ ಧನ್ಯವಾದಗಳು. ನಾನು ಪ್ರತಿಕ್ರಿಯಿಸಲು ಸಾಧ್ಯವಾಗದಷ್ಟು ಸಂದೇಶಗಳು ಬರುತ್ತಿವೆ. ಅಲ್ಲದೆ, ಆ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ” ಎಂದು ಹೇಳಿದ್ದಾರೆ.

ಸ್ಟಾರ್ಮಿ ಪರ ವಕೀಲ ಕ್ಲಾರ್ಕ್ ಬ್ರೀವ್‌ಸ್ಟರ್ ಟ್ವೀಟ್ ಮಾಡಿದ್ದು, ”ಸಂತೋಷಕ್ಕೆ ಯಾವುದೇ ಕಾರಣವಿಲ್ಲ, ಗ್ರ್ಯಾಂಡ್ ಜ್ಯೂರಿಗಳ ಕಠಿಣ ಪರಿಶ್ರಮ ಮತ್ತು ಆತ್ಮಸಾಕ್ಷಿಯನ್ನು ಗೌರವಿಸಬೇಕು. ಈಗ ಸತ್ಯ ಮತ್ತು ನ್ಯಾಯಕ್ಕೆ ಜಯವಾಗಲಿ. ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

ಕ್ಲಾರ್ಕ್ ಬ್ರೀವ್‌ಸ್ಟರ್ ಅವರ ಟ್ವೀಟ್ ಅನ್ನೂ ರೀಟ್ವೀಟ್ ಮಾಡಿರುವ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ವಕೀಲರಿಗೆ ಧನ್ಯವಾದ ತಿಳಿಸಿದ್ದಾರೆ.

ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ಹಲವು ವರ್ಷಗಳಿಂದ ಟ್ರಂಪ್ ಜೊತೆಗಿನ ಸಂಬಂಧ ಕುರಿತಾದ ವಿವಾದದಲ್ಲಿ ಸಿಲುಕಿದ್ದಾರೆ. 2006ರ ಬೇಸಿಗೆಯಲ್ಲಿ ನಾವಿಬ್ಬರೂ ಲೈಂಗಿಕ ಸಂಬಂಧ ಹೊಂದಿದ್ದೆವು ಎಂದು 2018ರಲ್ಲಿ ಸ್ಟಾರ್ಮಿ ಆರೋಪಿಸಿದ್ದರು. ಆ ನಂತರ ಟ್ರಂಪ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಬೆಂಬಲಿಗರು, ಸ್ಟಾರ್ಮಿ ಅವರನ್ನು ತೀವ್ರವಾಗಿ ಅವಮಾನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....