Homeಮುಖಪುಟಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಲಿಚಿತ್ರ ತಾರೆಯನ್ನು ಮೌನವಾಗಿರಿಸಲು ಹಣ ಪಾವತಿ ಮಾಡಿರುವ ಪ್ರಕರಣದಲ್ಲಿ, ಅವರ ಮೇಲೆ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಸಲ್ಲಿಸಿದೆ.

ಮ್ಯಾನ್‌ಹ್ಯಾಟನ್ ಜಿಲ್ಲಾ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಗುರುವಾರ ಸಂಜೆ ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ, ಟ್ರಂಪ್ ಶರಣಾಗತಿಗೆ ಸಹಕರಿಸುವಂತೆ ಸೂಚಿಸಿದ್ದಾರೆ. ಆದರೆ ಟ್ರಂಪ್ ಮಾತ್ರ ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಈ ದೋಷಾರೋಪಣೆಯು ರಾಜಕೀಯ ಕಿರುಕುಳ ಮತ್ತು ಚುನಾವಣಾ ಹಸ್ತಕ್ಷೇಪ ಎಂದು ಖಂಡಿಸಿದ್ದಾರೆ.

2016ರ ಅಧ್ಯಕ್ಷೀಯ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಮ್ಮ ಜತೆಗಿನ ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ತಾರೆಗೆ ಟ್ರಂಪ್ ಹಣ ಸಂದಾಯ ಮಾಡಿದ್ದ ಪ್ರಕರಣ ಇದಾಗಿದೆ.

ಈ ಮೂಲಕ ಅಪರಾಧದ ಆರೋಪ ಹೊತ್ತ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಟ್ರಂಪ್ ಒಳಗಾಗಿದ್ದಾರೆ. ಇದರೊಂದಿಗೆ ಟ್ರಂಪ್‌ಗೆ ಬಂಧನ ಭೀತಿ ಎದುರಾಗಿದೆ.

ಈ ಕುರಿತಂತೆ ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಪ್ರತಿಕ್ರಿಯಿಸಿದ್ದು, ”ಈ ಹೋರಾಟದಲ್ಲಿ ಬೆಂಬಲಿಸಿದ ಮತ್ತು ಪ್ರೀತಿ ಕೊಟ್ಟ ಎಲ್ಲರಿಗೂ ಧನ್ಯವಾದಗಳು. ನಾನು ಪ್ರತಿಕ್ರಿಯಿಸಲು ಸಾಧ್ಯವಾಗದಷ್ಟು ಸಂದೇಶಗಳು ಬರುತ್ತಿವೆ. ಅಲ್ಲದೆ, ಆ ಬಗ್ಗೆ ಮಾತನಾಡಲು ನನಗೆ ಇಷ್ಟವಿಲ್ಲ” ಎಂದು ಹೇಳಿದ್ದಾರೆ.

ಸ್ಟಾರ್ಮಿ ಪರ ವಕೀಲ ಕ್ಲಾರ್ಕ್ ಬ್ರೀವ್‌ಸ್ಟರ್ ಟ್ವೀಟ್ ಮಾಡಿದ್ದು, ”ಸಂತೋಷಕ್ಕೆ ಯಾವುದೇ ಕಾರಣವಿಲ್ಲ, ಗ್ರ್ಯಾಂಡ್ ಜ್ಯೂರಿಗಳ ಕಠಿಣ ಪರಿಶ್ರಮ ಮತ್ತು ಆತ್ಮಸಾಕ್ಷಿಯನ್ನು ಗೌರವಿಸಬೇಕು. ಈಗ ಸತ್ಯ ಮತ್ತು ನ್ಯಾಯಕ್ಕೆ ಜಯವಾಗಲಿ. ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಹೇಳಿದ್ದಾರೆ.

ಕ್ಲಾರ್ಕ್ ಬ್ರೀವ್‌ಸ್ಟರ್ ಅವರ ಟ್ವೀಟ್ ಅನ್ನೂ ರೀಟ್ವೀಟ್ ಮಾಡಿರುವ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ವಕೀಲರಿಗೆ ಧನ್ಯವಾದ ತಿಳಿಸಿದ್ದಾರೆ.

ನೀಲಿ ಚಿತ್ರ ತಾರೆ ಸ್ಟಾರ್ಮಿ ಡ್ಯಾನಿಯಲ್ಸ್ ಅವರು, ಹಲವು ವರ್ಷಗಳಿಂದ ಟ್ರಂಪ್ ಜೊತೆಗಿನ ಸಂಬಂಧ ಕುರಿತಾದ ವಿವಾದದಲ್ಲಿ ಸಿಲುಕಿದ್ದಾರೆ. 2006ರ ಬೇಸಿಗೆಯಲ್ಲಿ ನಾವಿಬ್ಬರೂ ಲೈಂಗಿಕ ಸಂಬಂಧ ಹೊಂದಿದ್ದೆವು ಎಂದು 2018ರಲ್ಲಿ ಸ್ಟಾರ್ಮಿ ಆರೋಪಿಸಿದ್ದರು. ಆ ನಂತರ ಟ್ರಂಪ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರಂಪ್ ಬೆಂಬಲಿಗರು, ಸ್ಟಾರ್ಮಿ ಅವರನ್ನು ತೀವ್ರವಾಗಿ ಅವಮಾನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...