Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....