Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...