Homeಮುಖಪುಟಹೈದರಾಬಾದ್: ಉಚ್ಛಾಟಿತ ಬಿಜೆಪಿ ಶಾಸಕನ ರಾಮನವಮಿ ರ್ಯಾಲಿಯಲ್ಲಿ ನಾಥೂರಾಂ ಗೋಡ್ಸೆ ಚಿತ್ರ ಪ್ರತ್ಯಕ್ಷ

ಹೈದರಾಬಾದ್: ಉಚ್ಛಾಟಿತ ಬಿಜೆಪಿ ಶಾಸಕನ ರಾಮನವಮಿ ರ್ಯಾಲಿಯಲ್ಲಿ ನಾಥೂರಾಂ ಗೋಡ್ಸೆ ಚಿತ್ರ ಪ್ರತ್ಯಕ್ಷ

- Advertisement -
- Advertisement -

ತೆಲಂಗಾಣದ ಉಚ್ಛಾಟಿತ ಬಿಜೆಪಿ ಶಾಸಕ ರಾಜಾ ಸಿಂಗ್ ನೇತೃತ್ವದ ರಾಮನವಮಿ ರ್ಯಾಲಿಯಲ್ಲಿ ಮಹಾತ್ಮ ಗಾಂಧಿಯವರನ್ನು ಕೊಂದ ನಾಥೂರಾಂ ಗೋಡ್ಸೆಯ ಚಿತ್ರ ಇದ್ದುದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.

ರಾಜಾ ಸಿಂಗ್ ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರವಾದ ಗೋಶಾಮಹಲ್‌ನ ಸೀತಾರಾಂಬಾಗ್‌ನ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆಯಲ್ಲಿ ನೂರಾರು ಜನರು ಭಾಗವಹಿಸಿದ್ದರು. ಯಾತ್ರೆ ಭಾಗವಾಗಿ ಹಾಡಿಗೆ ನೃತ್ಯ ಮಾಡುವಾಗ ಮತ್ತು ಕೇಸರಿ ಧ್ವಜಗಳನ್ನು ಬೀಸುವಾಗ ಗೋಡ್ಸೆಯ ಚಿತ್ರವನ್ನು ಹೊತ್ತುಕೊಂಡಿರುವುದು ಕಂಡುಬಂದಿದೆ.

ಕಳೆದ ವರ್ಷ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಸ್ತುತ ಅಮಾನತುಗೊಂಡಿರುವ ಬಿಜೆಪಿ ಶಾಸಕ ರಾಜಾ ಸಿಂಗ್ ಗೋಡ್ಸೆ ಫೋಟೊ ತಂದಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಬಿಡುಗಡೆ ಮಾಡಿ ಮಾತನಾಡಿರುವ ಅವರು, ಶೋಭಾ ಯಾತ್ರೆಯಲ್ಲಿ ಭಾಗವಹಿಸಿದ್ದವರು ಸ್ವಾತಂತ್ರ್ಯ ಹೋರಾಟಗಾರರಾದ ಛತ್ರಪತಿ ಶಿವಾಜಿ, ಮಹಾರಾಣಾ ಪ್ರತಾಪ್, ದಾಮೋದರ್ ಸಾರ್ವರ್ಕರ್ ಮತ್ತು ಇತರ ರಾಷ್ಟ್ರೀಯ ನಾಯಕರ ಛಾಯಾಚಿತ್ರಗಳನ್ನು ತಂದಿದ್ದರು. ಕೆಲವರು ನಾಥೂರಾಂ ಗೋಡ್ಸೆಯ ಫೋಟೋವನ್ನು ತಂದಿರಬಹುದು. ಇದು ಅವರು ನಂಬಿದ ಸಿದ್ಧಾಂತವನ್ನು ಅವಲಂಬಿಸಿರುತ್ತದೆ” ಎಂದಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಮಿಷನರ್ ಪ್ರಿವೆಂಟಿವ್ ಡಿಟೆನ್ಶನ್ (ಪಿಡಿ) ಕಾಯ್ದೆಯನ್ನು ಜಾರಿಗೊಳಿಸಿದ ನಂತರ ಅವರನ್ನು ಆಗಸ್ಟ್ 25 ರಂದು ಜೈಲಿಗೆ ಕಳುಹಿಸಲಾಯಿತು. ಬಿಜೆಪಿ ಕೂಡ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಪಿಡಿ ಆಕ್ಟ್ ಅಡಿಯಲ್ಲಿ ಬಂಧನಕ್ಕೊಳಗಾಗಿ ಎರಡು ತಿಂಗಳು ಜೈಲಿನಲ್ಲಿ ಕಳೆದ ನಂತರ ರಾಜಾ ಸಿಂಗ್ ಕಳೆದ ವರ್ಷ ನವೆಂಬರ್ 9 ರಂದು ಜೈಲಿನಿಂದ ಬಿಡುಗಡೆಯಾಗಿದ್ದರು.

ತೆಲಂಗಾಣ ಹೈಕೋರ್ಟ್ ಪೊಲೀಸ್ ಆಯುಕ್ತರ ಆದೇಶವನ್ನು ತಳ್ಳಿಹಾಕಿ ಶಾಸಕರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು, ಆದರೆ ಸಮುದಾಯಗಳ ನಡುವೆ ದ್ವೇಷವನ್ನುಂಟುಮಾಡುವ ಯಾವುದೇ ಭಾಷಣ ಮಾಡದಂತೆ ಸೂಚಿಸಿದೆ.

ಇದನ್ನೂ ಓದಿ: ಸಂಬಂಧ ಬಹಿರಂಗಪಡಿಸದಿರಲು ನೀಲಿಚಿತ್ರ ನಟಿಗೆ ಹಣ ಪಾವತಿ ಪ್ರಕರಣ: ಡೊನಾಲ್ಡ್ ಟಂಪ್‌ಗೆ ಬಂಧನ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...