Homeಮುಖಪುಟ'ಹಿಂದೂ ರಾಷ್ಟ್ರ' ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

‘ಹಿಂದೂ ರಾಷ್ಟ್ರ’ ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

- Advertisement -
- Advertisement -

ಪಂಜಾಬ್‌ನ ಆಡಳಿತಾರೂಢ ಬಿಜೆಪಿಯ ‘ಹಿಂದೂ ರಾಷ್ಟ್ರ’ ಸಿದ್ಧಾಂತವನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಕಟುವಾಗಿ ಟೀಕಿಸಿದ್ದಾರೆ. ನಿಮ್ಮ ಈ ‘ಹಿಂದೂ ರಾಷ್ಟ್ರ’ ಸಿದ್ಧಾಂತವೇ ಖಲಿಸ್ತಾನ್ ಚಳವಳಿಯ ಉದಯಕ್ಕೆ ಮತ್ತು ಪಂಜಾಬ್‌ನಲ್ಲಿ ಅಮೃತಪಾಲ್ ಸಿಂಗ್‌ರಂತಹ ಪ್ರತ್ಯೇಕತಾವಾದಿಗಳು ಹುಟ್ಟಿಕೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಭರತ್‌ಪುರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಖಲಿಸ್ತಾನ್ ಪ್ರತ್ಯೇಕತಾವಾದಿ, ಬಂಡುಕೋರ ಅಮೃತಪಾಲ್ ಸಿಂಗ್ ಅವರ ಜನಪ್ರಿಯತೆಗೆ ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳೇ ಕಾರಣ ಎಂದು ದೂಷಿಸಿದ್ದಾರೆ.

”ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದರೆ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು? ಎಂದು ಅಮೃತಪಾಲ್ ಸಿಂಗ್ ಹೇಳುತ್ತಿದ್ದಾರೆ” ಇಂತಹ ಹೇಳಿಕೆ ನೀಡುವಲ್ಲಿ ಸಿಂಗ್ ಅವರ ದಿಟ್ಟತನದ ಹಿಂದಿನ ಕಾರಣವನ್ನು ಗೆಹ್ಲೋಟ್ ಪ್ರಶ್ನಿಸಿದರು. ದೇಶದಲ್ಲಿ ಧರ್ಮ ಮತ್ತು ರಾಜಕೀಯ ಬೆಸೆದುಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ: ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

”ಧರ್ಮದ ಹೆಸರಿನಲ್ಲಿ ಜನರನ್ನು ಮೆಚ್ಚಿಸುವುದು ಸುಲಭ. ಆದರೆ ನಮ್ಮ ದೇಶದ ಬಗ್ಗೆ ಚಿಂತಿಸಬೇಕು,” ಎಂದು ಎಚ್ಚರಿಸಿದರು. ”ಇಂದಿರಾ ಗಾಂಧಿ ಅವರು ಖಲಿಸ್ತಾನ್ ರಚನೆಗೆ ಅವಕಾಶ ನೀಡಲಿಲ್ಲ, ಅದಕ್ಕಾಗಿಯೇ ಅವರನ್ನು ಕೊಲ್ಲಲಾಯಿತು” ಎಂದು ಸಿಎಂ ಗೆಹ್ಲೋಟ್ ಎಂದು ಹೇಳಿದರು.

ಪಂಜಾಬ್ ಪೊಲೀಸರು ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರರನ್ನು ಬಂಧಿಸಲು ಹುಡುಕಾಟ ನಡೆಸಿದ್ದಾರೆ. ಮತ್ತೊಂದೆಡೆ ಪರಾರಿಯಾಗಿರುವ ವಾರಿಸ್ ಪಂಜಾಬ್ ಡಿ ಮುಖ್ಯಸ್ಥರು ಎರಡು ವೀಡಿಯೊ ಸಂದೇಶಗಳನ್ನು ಮತ್ತು ಒಂದು ಆಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಮಾರ್ಚ್ 18 ರಿಂದ ಪರಾರಿಯಾಗಿರುವ ಸಿಂಗ್ ಗುರುವಾರ ಫೇಸ್‌ಬುಕ್‌ನಲ್ಲಿ ಲೈವ್‌ಗೆ ಹೋಗಿ ತಾನು ಶರಣಾಗುವುದಿಲ್ಲ. ”ನಾನು ಪಲಾಯನಗೈದಿದ್ದೇನೆ ಮತ್ತು ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಈ ಭ್ರಮೆಯನ್ನು ತಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ನನಗೆ ಸಾವಿಗೆ ಭಯವಿಲ್ಲ ಎಂದು ಪಂಜಾಬಿ ಭಾಷೆಯಲ್ಲಿ ವಿಡಿಯೋದಲ್ಲಿ ಘೋಷಿಸಿದರು.

ಗುರುವಾರದ ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಮೊದಲು ಅಮೃತಪಾಲ್ ಸಿಂಗ್ ಆಡಿಯೊ ಸಂದೇಶ ಕಳುಹಿಸಿದ್ದು ಅದರಲ್ಲಿ, ಸಿಖ್ ನಾಯಕ ಅಕಾಲ್ ತಖ್ತ್‌ಗೆ ಸಭೆಯನ್ನು ಕರೆಯುವಂತೆ ಮತ್ತು ಅಕಾಲ್ ತಖ್ತ್ ಸಮುದಾಯದ ನಾಯಕ ಎಂದು ಸಾಬೀತುಪಡಿಸುವಂತೆ ಕೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...