Homeಕರ್ನಾಟಕಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

- Advertisement -
- Advertisement -

ಏಪ್ರಿಲ್‌ 1 ರಿಂದ ಔಷಧಗಳ ಬೆಲೆಯನ್ನು ಶೇ.12.12ರಷ್ಟು ಹೆಚ್ಚಿಸಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್‌ ವಿರೋಧ ವ್ಯಕ್ತಪಡಿಸಿ ಟ್ವೀಟ್‌ ಮಾಡಿವೆ.

ಯಾವ ಯಾವ ಔಷಧಗಳ ಬೆಲೆ ಏರಿಕೆಯಾಗಲಿದೆ?

ಪ್ಯಾರಸಿಟಮಲ್ ಸೇರಿದಂತೆ 800ಕ್ಕೂ ಹೆಚ್ಚು ಅತ್ಯಗತ್ಯ ಔಷಧಗಳ ಬೆಲೆ ಏರಿಕೆಯಾಗಲಿದೆ. ಪ್ರಮುಖವಾಗಿ ಅಲರ್ಜಿ, ಸೋಂಕು, ಜ್ವರ, ಚರ್ಮ ರೋಗ, ಹೃದ್ರೋಗ, ರಕ್ತಹೀನತೆ, ಅಧಿಕ ರಕ್ತದೊತ್ತಡವನ್ನು ಗುಣಪಡಿಸಲು ಬಳಸುವ ಔಷಧಿಗಳ ಬೆಲೆಗಳು ಹೆಚ್ಚಾಗಲಿದೆ. ಬೆಲೆ ಏರಿಕೆಯಾಗುವ ಔಷಧಗಳ ಪಟ್ಟಿಯಲ್ಲಿ ಅಜಿಥ್ರೊಮೈಸಿನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಮೆಟ್ರೋನಿಡಜೋಲ್, ಪ್ಯಾರೆಸಿಟಮಾಲ್, ಫೆನೋಬಾರ್ಬಿಟೋನ್ ಮತ್ತು ಫೆನಿಟೋಯಿನ್ ಸೋಡಿಯಂನಂತಹ ಔಷಧಗಳ ಬೆಲೆ ಹೆಚ್ಚಳವಾಗಲಿ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿದ್ದು, ”ಅಗತ್ಯ ಜೀವರಕ್ಷಕ ಔಷಧಗಳ ಬೆಲೆ 12% ಏರಿಕೆಯಾಗುತ್ತಿದೆ. ಕೋವಿಡ್ ಸಾಂಕ್ರಾಮಿಕದ ಸಂಕಷ್ಟ ಎದುರಿಸಿದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆಯ ಕೊಡುಗೆ ಇದು. ಜನಸಾಮಾನ್ಯರ ಸುಲಿಗೆಯ ಬಗ್ಗೆ ಬಿಜೆಪಿ ನಾಯಕರು ಏಕೆ ಮಾತಾಡುತ್ತಿಲ್ಲ? ಮತ ಕೇಳಲು ಹೋದಾಗ ಜನರಲ್ಲಿ ಬೆಲೆ ಏರಿಕೆಯ ಸಾಧನೆಯನ್ನು ಹೇಳಿಕೊಳ್ಳುವಿರಾ?” ಎಂದು ರಾಜ್ಯ ಬಿಜೆಪಿಗೆ ಪ್ರಶ್ನೆ ಮಾಡಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ದೇಶದ ಜನರು ಈಗಾಗಲೇ ಹೈರಾಣಾಗಿದ್ದು, ಔಷಧ ಬೆಲೆ ಹೆಚ್ಚಿಸಿ ಮತ್ತಷ್ಟು ಆಘಾತ ನೀಡುತ್ತಿದೆ. ಈ ಮೂಲಕ ವಿಕೃತ ಜನದ್ರೋಹಿ ಮನಸ್ಥಿತಿಯನ್ನು ಕೇಂದ್ರ ಸರ್ಕಾರ ತೋರುತ್ತಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕಲ್ಲ’: ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಪ್ರತಿಜ್ಞೆ

ಈ ಬಗ್ಗೆ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ”ಆಕಾಶದೆತ್ತರಕ್ಕೆ ಏರಿರುವ ಅಗತ್ಯ ವಸ್ತುಗಳ ಬೆಲೆಯ ಮಧ್ಯೆ ಜನತೆಗೆ ಮತ್ತೊಂದು ಆಘಾತ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಸಾಮಾನ್ಯ ಬಳಕೆಯ ಔಷಧಿಗಳ ಬೆಲೆಯನ್ನು 12%ಕ್ಕೂ ಅಧಿಕವಾಗಿ ಹೆಚ್ಚಿಸಲು ಔಷಧ ಕಂಪನಿಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಹೈರಾಣಾಗಿರುವ ಜನತೆಯ ಮೇಲೆ ಮತ್ತೊಂದು ಹೊರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

”ನೋವು ನಿವಾರಕ, ಆ್ಯಂಟಿ ಬಯಾಟಿಕ್, ಉರಿಯೂತ ನಿವಾರಕ ಔಷಧಿ ಸೇರಿದಂತೆ ಜನಸಾಮಾನ್ಯರು ಹೆಚ್ಚು ಬಳಸುವ 800ಕ್ಕೂ ಹೆಚ್ಚು ಔಷಧಿಗಳ ಬೆಲೆ ಏಪ್ರಿಲ್ ತಿಂಗಳಿಂದ ಏರಿಕೆಯಾಗಲಿದೆ. ಕಳೆದ ವರ್ಷವೂ‌ 10% ಕ್ಕಿಂತ ಹೆಚ್ಚು ಏರಿಸಲಾಗಿತ್ತು. ಮೊಟ್ಟಮೊದಲ ಬಾರಿ ಈ ಪ್ರಮಾಣದಲ್ಲಿ ಸಾಮಾನ್ಯ ಔಷಧಿಗಳ ಬೆಲೆ ಏರಿಕೆ ಮಾಡಲಾಗುತ್ತಿದೆ” ಎಂದು ಹೇಳಿದೆ.

”ಯಾರೂ ಕೂಡ ಬದುಕಲು ಬಿಡಬಾರದು ಎಂಬ ದುಷ್ಟ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂಗಿದೆ. ಬಳಕೆಯ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ಜನತೆಯ ಜೇಬು ಖಾಲಿಯಾಗಿ, ಬಡವರು ಇನ್ನಷ್ಟು ಬಡವರಾಗಿ, ಹಸಿವಿಗೆ ದೂಡಲ್ಪಡುತ್ತಿದ್ದಾರೆ. ಇಷ್ಟು ವಿಕೃತ ಜನದ್ರೋಹಿ ಮನಸ್ಥಿತಿ ದೇಶದ ಇತಿಹಾಸದಲ್ಲೇ ಯಾವ ಸರ್ಕಾರಕ್ಕೂ ಇರಲಿಲ್ಲ!” ಎಂದು ಕಿಡಿಕಾರಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...