Homeಕರ್ನಾಟಕಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

ಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಶನಿವಾರ ಕೈಬಿಡಲಾಯಿತು.

- Advertisement -
- Advertisement -

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಹೇಳಿದರು.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ಜಾರಿಯೇ ಆಗದಿರುವ 17 % ಮೀಸಲಾತಿಯಲ್ಲಿ ಒಳಮೀಸಲಾತಿ ನೀಡಲಾಗಿದೆ, ಮಾದಿಗ ಸಮುದಾಯವನ್ನು ಮತ್ತೆ ದಿಕ್ಕು ತಪ್ಪಿಸಲಾಗಿದೆ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಗೊಂದಲ ಆಗಿರುವುದು ನಿಜ. ಆದರೆ ಇದನ್ನು ಸರಿಪಡಿಸಬಹುದು. ಒಳಮೀಸಲಾತಿಯನ್ನು ಒಪ್ಪಿಕೊಂಡಿದ್ದಾರೆ. ಛತ್ತೀಸ್‌ಘಡದಲ್ಲಿ ಶೇ.82ರಷ್ಟು ಮೀಸಲಾತಿ ಇದ್ದರೆ, ಕೆಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.60ನ್ನು ಮೀರಿದೆ. ಹೀಗಾಗಿ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸುವುದು ಸಮಸ್ಯೆಯಾಗುವುದಿಲ್ಲ. ಎಸ್‌ಸಿ, ಎಸ್‌ಟಿಗಳೆಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಒಕ್ಕೊರಲಿನಿಂದ ಆಗ್ರಹಿಸಬೇಕಿದೆ” ಎಂದರು.

“ಸದ್ಯಕ್ಕೆ ಒಂದು ಮಟ್ಟಿಗಿನ ಗೆಲುವು ನಮಗಾಗಿದೆ. ಆದರೆ ಸ್ಪೃಶ್ಯ ಜಾತಿಗಳಿಗೆ ಹೆಚ್ಚಿನ ಮೀಸಲಾತಿ ನೀಡಿರುವುದು ತಪ್ಪು. ಹೊಲೆಯ ಸಹೋದರರಿಗೆ ಇನ್ನರ್ಧ ಪರ್ಸೆಂಟ್ ಹೆಚ್ಚಿನ ಪಾಲು ನೀಡಬಹುದಿತ್ತು, ಮತ್ತೊಂದರ್ಧ ಅಲೆಮಾರಿಗಳಿಗೆ ನೀಡಬಹುದಿತ್ತು. ಹೆಚ್ಚಿಗೆ ನೀಡಿರುವುದಕ್ಕೆ ಯಾವುದೇ ಕಾರಣ ಕಾಣಿಸುತ್ತಿಲ್ಲ” ಎಂದು ತಿಳಿಸಿದರು.

‘ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದಿರಿ’

“ಒಳಮೀಸಲಾತಿ ಜಾರಿಗೊಳಿಸಿದ ಮೋದಿ ಮತ್ತು ಅಮಿತ್ ಷಾ ಅವರಿಗೆ ಅಭಿನಂದನೆ” ಎಂಬ ರೀತಿ ಜಾಹೀರಾತುಗಳನ್ನು ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿರುವ ಎಸ್.ಮಾರಪ್ಪ ಅವರು, “ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಎಚ್ಚರಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ಸಮಿತಿ ತೆಗೆದುಕೊಂಡ ನಿರ್ಣಯಗಳು 

1. ಗ್ರೂಪ್ ನಂಬರ್ ಒಂದು ಹಾಗೂ ಎರಡಕ್ಕೆ ಸಂಬಂಧಿಸಿದ ಸಮುದಾಯಗಳಾದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪಜಾತಿ ಪದಗಳನ್ನು ಮತ್ತೆ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳ ಗುಂಪುಗಳಿಗೆ ಯಥಾವತ್ತಾಗಿ ಸೇರಿಸಬೇಕು.

2. ನಾಲ್ಕನೇ ಗುಂಪಿನಲ್ಲಿರುವ ಅಲೆಮಾರಿಗಳು ಮತ್ತು ಅರೆ ಅಲೆಮಾರಿಗಳ ಜೊತೆ ಯಾವುದೇ ಕಾರಣಕ್ಕೂ ಮಾದಿಗ, ಹೊಲೆಯ, ತ್ರಿಮತಸ್ಥ ಚರ್ಮಕಾರರು, ಮೊಗೇರ ಇನ್ನಿತರ ಸಮುದಾಯಗಳನ್ನು ಸೇರಿಸದೆ ಮೇಲೆ ತಿಳಿಸಿದ ಸಮುದಾಯಗಳನ್ನು ಅವರ ಮೂಲ ಸಮುದಾಯಗಳ ಗುಂಪಿಗೆ ಸೇರಿಸಬೇಕು.

3. ಈಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನವನ್ನು ಹಾಗೂ ಅದರ ಶಿಫಾರಸ್ಸನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸಂವಿಧಾನದ ಅನುಚ್ಛೇಧ 341(3)ಗೆ ತಿದ್ದುಪಡಿ ಮಾಡಬೇಕು.

4. ತ್ರ‍್ರಿಮತಸ್ಥರಿಗೆ, ಚರ್ಮಕಾರರಿಗೆ (ಮೋಚಿ, ಡೋಹರ, ಸಮಗಾರ) ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

5. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿ ಸಮುದಾಯಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ಶಾಸನಸಭಾ ಪ್ರಾತಿನಿಧ್ಯ ಕಲ್ಪಿಸಬೇಕು.

6. ಕರ್ನಾಟಕ ರಾಜ್ಯದಲ್ಲಿರುವ 43,000 ಪೌರಕಾರ್ಮಿಕ ಹಾಗೂ ವಾಹನ ಚಾಲಕರನ್ನು ಖಾಯಂಗೊಳಿಸಬೇಕು.

7. ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆಗೆ ಕೂಡಲೇ ತಿದ್ದುಪಡಿ ತಂದು ದಲಿತರಿಗೆ ಭೂ ಹಂಚಿಕೆ ಮಾಡಬೇಕು.

8. ಒಳ ಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಅಪರಾಧ ಮೊದ್ದಮೆಗಳನ್ನು ಈ ಕೂಡಲೇ ರದ್ದುಪಡಿಸಬೇಕು.

9. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ (ಎಸ್‌ಸಿಎಸ್‌ಎ) ಅನುದಾನವನ್ನು ಒಳಮೀಸಲಾತಿ ಶೇಕಡ 6+5.5+4.5+1 ಅನುಪಾತದಂತೆ ಹಂಚಿಕೆ ಮಾಡಬೇಕು. ಎಸ್‌ಸಿಎಸ್‌ಎ ಅನುದಾನ ದುರುಪಯೋಗಕ್ಕೆ ಕಾರಣವಾದ 7(ಡಿ) ಯನ್ನು ರದ್ದುಪಡಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...