Homeಕರ್ನಾಟಕಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

ಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ ವತಿಯಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಶನಿವಾರ ಕೈಬಿಡಲಾಯಿತು.

- Advertisement -
- Advertisement -

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಹೇಳಿದರು.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

“ಜಾರಿಯೇ ಆಗದಿರುವ 17 % ಮೀಸಲಾತಿಯಲ್ಲಿ ಒಳಮೀಸಲಾತಿ ನೀಡಲಾಗಿದೆ, ಮಾದಿಗ ಸಮುದಾಯವನ್ನು ಮತ್ತೆ ದಿಕ್ಕು ತಪ್ಪಿಸಲಾಗಿದೆ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಗೊಂದಲ ಆಗಿರುವುದು ನಿಜ. ಆದರೆ ಇದನ್ನು ಸರಿಪಡಿಸಬಹುದು. ಒಳಮೀಸಲಾತಿಯನ್ನು ಒಪ್ಪಿಕೊಂಡಿದ್ದಾರೆ. ಛತ್ತೀಸ್‌ಘಡದಲ್ಲಿ ಶೇ.82ರಷ್ಟು ಮೀಸಲಾತಿ ಇದ್ದರೆ, ಕೆಲವು ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ.60ನ್ನು ಮೀರಿದೆ. ಹೀಗಾಗಿ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸುವುದು ಸಮಸ್ಯೆಯಾಗುವುದಿಲ್ಲ. ಎಸ್‌ಸಿ, ಎಸ್‌ಟಿಗಳೆಲ್ಲರೂ ಮೀಸಲಾತಿ ಹೆಚ್ಚಳಕ್ಕೆ ಒಕ್ಕೊರಲಿನಿಂದ ಆಗ್ರಹಿಸಬೇಕಿದೆ” ಎಂದರು.

“ಸದ್ಯಕ್ಕೆ ಒಂದು ಮಟ್ಟಿಗಿನ ಗೆಲುವು ನಮಗಾಗಿದೆ. ಆದರೆ ಸ್ಪೃಶ್ಯ ಜಾತಿಗಳಿಗೆ ಹೆಚ್ಚಿನ ಮೀಸಲಾತಿ ನೀಡಿರುವುದು ತಪ್ಪು. ಹೊಲೆಯ ಸಹೋದರರಿಗೆ ಇನ್ನರ್ಧ ಪರ್ಸೆಂಟ್ ಹೆಚ್ಚಿನ ಪಾಲು ನೀಡಬಹುದಿತ್ತು, ಮತ್ತೊಂದರ್ಧ ಅಲೆಮಾರಿಗಳಿಗೆ ನೀಡಬಹುದಿತ್ತು. ಹೆಚ್ಚಿಗೆ ನೀಡಿರುವುದಕ್ಕೆ ಯಾವುದೇ ಕಾರಣ ಕಾಣಿಸುತ್ತಿಲ್ಲ” ಎಂದು ತಿಳಿಸಿದರು.

‘ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿದಿರಿ’

“ಒಳಮೀಸಲಾತಿ ಜಾರಿಗೊಳಿಸಿದ ಮೋದಿ ಮತ್ತು ಅಮಿತ್ ಷಾ ಅವರಿಗೆ ಅಭಿನಂದನೆ” ಎಂಬ ರೀತಿ ಜಾಹೀರಾತುಗಳನ್ನು ನೀಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿರುವ ಎಸ್.ಮಾರಪ್ಪ ಅವರು, “ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಎಚ್ಚರಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ಸಮಿತಿ ತೆಗೆದುಕೊಂಡ ನಿರ್ಣಯಗಳು 

1. ಗ್ರೂಪ್ ನಂಬರ್ ಒಂದು ಹಾಗೂ ಎರಡಕ್ಕೆ ಸಂಬಂಧಿಸಿದ ಸಮುದಾಯಗಳಾದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಉಪಜಾತಿ ಪದಗಳನ್ನು ಮತ್ತೆ ಮಾದಿಗ ಮತ್ತು ಹೊಲೆಯ ಸಂಬಂಧಿತ ಜಾತಿಗಳ ಗುಂಪುಗಳಿಗೆ ಯಥಾವತ್ತಾಗಿ ಸೇರಿಸಬೇಕು.

2. ನಾಲ್ಕನೇ ಗುಂಪಿನಲ್ಲಿರುವ ಅಲೆಮಾರಿಗಳು ಮತ್ತು ಅರೆ ಅಲೆಮಾರಿಗಳ ಜೊತೆ ಯಾವುದೇ ಕಾರಣಕ್ಕೂ ಮಾದಿಗ, ಹೊಲೆಯ, ತ್ರಿಮತಸ್ಥ ಚರ್ಮಕಾರರು, ಮೊಗೇರ ಇನ್ನಿತರ ಸಮುದಾಯಗಳನ್ನು ಸೇರಿಸದೆ ಮೇಲೆ ತಿಳಿಸಿದ ಸಮುದಾಯಗಳನ್ನು ಅವರ ಮೂಲ ಸಮುದಾಯಗಳ ಗುಂಪಿಗೆ ಸೇರಿಸಬೇಕು.

3. ಈಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನವನ್ನು ಹಾಗೂ ಅದರ ಶಿಫಾರಸ್ಸನ್ನು ಕೂಡಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸಂವಿಧಾನದ ಅನುಚ್ಛೇಧ 341(3)ಗೆ ತಿದ್ದುಪಡಿ ಮಾಡಬೇಕು.

4. ತ್ರ‍್ರಿಮತಸ್ಥರಿಗೆ, ಚರ್ಮಕಾರರಿಗೆ (ಮೋಚಿ, ಡೋಹರ, ಸಮಗಾರ) ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

5. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿ ಸಮುದಾಯಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ಶಾಸನಸಭಾ ಪ್ರಾತಿನಿಧ್ಯ ಕಲ್ಪಿಸಬೇಕು.

6. ಕರ್ನಾಟಕ ರಾಜ್ಯದಲ್ಲಿರುವ 43,000 ಪೌರಕಾರ್ಮಿಕ ಹಾಗೂ ವಾಹನ ಚಾಲಕರನ್ನು ಖಾಯಂಗೊಳಿಸಬೇಕು.

7. ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆಗೆ ಕೂಡಲೇ ತಿದ್ದುಪಡಿ ತಂದು ದಲಿತರಿಗೆ ಭೂ ಹಂಚಿಕೆ ಮಾಡಬೇಕು.

8. ಒಳ ಮೀಸಲಾತಿ ಹೋರಾಟಗಾರರ ಮೇಲೆ ದಾಖಲಿಸಿರುವ ಅಪರಾಧ ಮೊದ್ದಮೆಗಳನ್ನು ಈ ಕೂಡಲೇ ರದ್ದುಪಡಿಸಬೇಕು.

9. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ (ಎಸ್‌ಸಿಎಸ್‌ಎ) ಅನುದಾನವನ್ನು ಒಳಮೀಸಲಾತಿ ಶೇಕಡ 6+5.5+4.5+1 ಅನುಪಾತದಂತೆ ಹಂಚಿಕೆ ಮಾಡಬೇಕು. ಎಸ್‌ಸಿಎಸ್‌ಎ ಅನುದಾನ ದುರುಪಯೋಗಕ್ಕೆ ಕಾರಣವಾದ 7(ಡಿ) ಯನ್ನು ರದ್ದುಪಡಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...