Homeಕರ್ನಾಟಕಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

- Advertisement -
- Advertisement -

“ಒಳಮೀಸಲಾತಿ ಜಾರಿಯಾಗಿದೆ ಎಂದು ಸುಳ್ಳು ಜಾಹೀರಾತು ನೀಡದಿರಿ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಮನವಿ ಒತ್ತಾಯಿಸಿದ್ದಾರೆ.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ. ಇದನ್ನು ಬಗೆಹರಿಸಬೇಕಿದೆ. ಆದರೆ ಒಳ ಮೀಸಲಾತಿ ಈಗಾಗಲೇ ಜಾರಿಯಾಗಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವುದು ತಪ್ಪು” ಎಂದು ತಿಳಿಸಿದರು.

“ಒಳಮೀಸಲಾತಿ ಜಾರಿ ಮಾಡಿ ಸಾಮಾಜಿಕ ನ್ಯಾಯ ನೀಡಿದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಹಾಗೂ ಕೇಂದ್ರ ಸಚಿವರಾದ ಶ್ರೀ ಅಮಿತ್‌ ಶಾ ಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ಹಾಗೂ ಸಮುದಾಯದ ಮುಖಂಡರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂಬ ಒಕ್ಕಣೆಯೊಂದಿಗೆ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ‘ಮಾದಿಗ ಮಹಾಸಭಾ, ಬೆಂಗಳೂರು’ ಎಂಬ ಹೆಸರಲ್ಲಿ ಜಾಹೀರಾತು ಪ್ರಕಟವಾಗುತ್ತಿದೆ. ಜಾರಿಯೇ ಆಗದಿರುವ ಮೀಸಲಾತಿ ಹೆಚ್ಚಳದಲ್ಲಿ ಮೀಸಲಾತಿ ಹಂಚಿಕೆ ಮಾಡಿರುವುದು ಗೊಂದಲ ಸೃಷ್ಟಿಸಿದೆ. ಹೀಗಿರುವಾಗ ಬಿಜೆಪಿ ನಾಯಕರ ಫೋಟೋಗಳೊಂದಿಗೆ ಜಾಹೀರಾತನ್ನು ನೀಡುತ್ತಿರುವ ಕುರಿತು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಜಾಹೀರಾತು

“ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಮಾರಪ್ಪ ಎಚ್ಚರಿಸಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದರು.

 

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...