Homeಕರ್ನಾಟಕಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

ಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಇದ್ರೀಶ್‌ ಪಾಷ ಎನ್ನುವ 39 ವರ್ಷದ ಅಮಾಯಕ ಮುಸ್ಲಿಂ ವ್ಯಕ್ತಿಯ ಕೊಲೆಗೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಕಾಂಗ್ರೆಸ್‌ ಈ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ” ಎಂದು ಟೀಕಿಸಿದೆ.

“40% ಕಮಿಷನ್ ಪಡೆದು ಆರಾಮಾಗಿರುವ ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ” ಎಂದಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು” ಎಂದಿದ್ದಾರೆ.

“ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ” ಎಂದು ಆಗ್ರಹಿಸಿದ್ದಾರೆ.

“ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...