Homeಕರ್ನಾಟಕಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಇದ್ರೀಶ್‌ ಪಾಷ ಅವರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಸಂಘಪರಿವಾರದ ಮುಖಂಡ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ‌ಇದ್ರೀಶ್ ಅವರನ್ನು ಕೊಲ್ಲಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿದ ಬಳಿಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹಿಂದುತ್ವ ಗೂಂಡಾಗಿರಿಯನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ರಕ್ಷಾ ರಾಮಯ್ಯ ಬ್ರಿಗೇಡ್‌ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಪುನೀತ್‌ ಕೆರೆಹಳ್ಳಿ ಬ್ಯಾಟ್‌ವೊಂದನ್ನು ಹಿಡಿದು ರಸ್ತೆಯಲ್ಲಿ ತಿರುಗುತ್ತಿರುವುದನ್ನು ಕಾಣಬಹುದು. “ಇದೊಂದೇ ಪ್ರೈಮರಿ ಸಾಕ್ಷಿ ಸಾಕು, ಈ ರೀತಿ ರಸ್ತೆಯಲ್ಲಿ ಬ್ಯಾಟ್ ಹಿಡಿದು ನಿಲ್ಲಲು ಇವನು ಪೊಲೀಸಾ? ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ರೌಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರಿಂದ ನೈತಿಕ ಪೊಲೀಸ್ ಗಿರಿ, ಮಸ್ಲಿಮ್ ಯುವಕ ಬಲಿ” ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು ಪ್ರತಿಕ್ರಿಯಿಸಿ, “ಸಂಘ ಪರಿವಾರದ ಗೋರಕ್ಷಕ ಗೂಂಡಾಗಳಿಂದ ಹತ್ಯೆಯಾದ ಮಂಡ್ಯದ ಗುತ್ತಲು ನಿವಾಸಿ ಇದ್ರಿಶ್ ಪಾಶಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆತನ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಆರೆಸ್ಸೆಸ್ ಸಂಘ ಪರಿವಾರದ ಗೂಂಡಾ ಪಡೆ ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ, ಬಡ ಮುಸಲ್ಮಾನರನ್ನು ಕೊಲ್ಲುವ‌ ಕ್ರಿಮಿನಲ್ ಕೃತ್ಯದಲ್ಲಿ ನಿರತವಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಇಂತಹ ಗೂಂಡಾಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರಿಂದ ಅಮಾಯಕ ಜನತೆ ಪ್ರಾಣ ಕಳೆದುಕೊಂಡು ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂತಹ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಗೂಂಡಾ ಪಡೆ ಇದ್ರಿಶ್ ಪಾಷಾ ಅವರನ್ನು ಕಾಂಪೌಂಡ್ ಒಳಗೆ ಸೇರಿಸಿಕೊಂಡು ವಿದ್ಯುತ್ ಶಾಕ್ ನೀಡುವ ಮೂಲಕ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ. ಮೇಲ್ನೋಟಕ್ಕೆ ಈ ಕೊಲೆ ನಡೆಸಿರುವುದು ಆರೆಸ್ಸೆಸ್ ಸಂಘಟನೆಗೆ ಸೇರಿದ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ನೇತೃತ್ವದ ಗೂಂಡಾಪಡೆ ಎಂದು ಕಾಣುತ್ತಿದೆ. ಇದ್ರಿಶ್ ಪಾಷಾ ಜೊತೆ ಇದ್ದ ಇನ್ನಿಬ್ಬರು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದರೆ ಅವರೂ ಕೊಲೆಯಾಗುತ್ತಿದ್ದರು. ಇದಕ್ಕೆ ಕಾರಣವಾದ ಕ್ರಿಮಿನಲ್‌ಗಳ ರಕ್ಷಣೆಗೆ ಬೊಮ್ಮಾಯಿ ಸರ್ಕಾರ ಮುಂದಾಗಬಾರದು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ರೈತ ವಿರೋಧಿ ಕೃಷಿ ವಿರೋಧಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದ ನಂತರ ದನದ ವ್ಯಾಪಾರಿಗಳ ಮೇಲೆ ದಾಳಿಗಳು ವಿಪರೀತ ಹೆಚ್ಚಾಗಿವೆ. ಗೋರಕ್ಷಕರ ಹೆಸರಿನ ಗೂಂಡಾಗಳು ದಾಳಿ ಮಾಡಿ ಹಲ್ಲೆ ನಡೆಸುವಾಗ ರಾಜ್ಯ ಸರ್ಕಾರದ ಪೊಲೀಸರು ಒಂದೋ ಮೂಕ ಪ್ರೇಕ್ಷಕರಾಗುವುದು ಇಲ್ಲವೇ ದಾಳಿಕೋರರ ಜೊತೆ ಕೈಜೋಡಿಸುವುದು ನಡೆದಿದೆ. ಇದರಿಂದಾಗಿ ದಾಳಿ, ಹಲ್ಲೆ ನಡೆಸುವವರಿಗೆ ಹೆಚ್ಚಿನ ಬಲ ಬಂದಂತಾಗಿದೆ. ಇಂತಹ ವ್ಯಕ್ತಿಗಳು ಮತ್ತು ಶಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಸಾಮಾಜಿಕ ಹೋರಾಟಗಾರ ದೀಪು  ಅವರು ಹಂಚಿಕೊಂಡಿದ್ದು, “ಗೋರಕ್ಷಣೆ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿಕೊಂಡು ಅಲ್ಪಸಂಖ್ಯಾತರನ್ನು ಕೊಂದ ಪುನೀತ್ ಕೆರೆಹಳ್ಳಿ ಎಂಬ ವಿಕೃತ ಕರೆಂಟ್ ಶಾಕ್ ಕೊಡುತ್ತಿರುವ ದೌರ್ಜನ್ಯದ ವಿಡಿಯೋವಿದು” ಎಂದು ತಿಳಿಸಿದ್ದಾರೆ.

ಲೇಖಕ, ಬರಹಗಾರ ರಾ.ಚಿಂತನ್‌ ಪ್ರತಿಕ್ರಿಯಿಸಿ, “ಈ ಧರ್ಮ ರಕ್ಷಣೆಯ ‘ತೀವ್ರ’ವಾದ ಕಡೆಗೆ ಇಲ್ಲಿಗೆ ಹೋಗಿ ಮುಟ್ಟುತ್ತದೆ. ಇವರನ್ನು ಹಿಂಬಾಲಿಸೋ, ಬೆಂಬಲಿಸೋ, ಎಲ್ಲರೂ ಕೊಲೆಗಡುಕರೇ. ಗೋಮಾಂಸ ರಫ್ತು ಮಾಡುತ್ತಿರುವ ಬಿಜೆಪಿಗೆ ಬಹುಪರಾಕ್ ಹಾಕುವ ಈ ಕಟುಕರೇ ಅದೇ ಗೋಮಾಂಸದ ವಿಚಾರದಲ್ಲಿ ಕೊಲೆಗಳನ್ನು ಮಾಡುತ್ತಿದ್ದಾರೆ. ಇದನ್ನು ತಿಳಿಹೇಳುವ ನಮ್ಮ ಮಾತು ಇವರಿಗೆ ಅಪಥ್ಯವಾಗುತ್ತದೆ. ಮುಸಲ್ಮಾನ ಸಮಾಜ ಇಂತಹ ಪುಂಡರ ಬೆನ್ನುಮೂಳೆ ಮುರಿಯದಿದ್ದರೇ ವಿನಾಕಾರಣ ಹೀಗೆ ಕೊಲೆಯಾಗಬೇಕಾದೀತು. ಅಹಿಂಸೆ ನಮ್ಮ ಮಂತ್ರವಾಗಲಿ, ಆದರೆ ಆತ್ಮರಕ್ಷಣೆಗೆ ಹೆದರಬೇಡಿ. ಇದ್ರಿಸ್ ಸಾವಿಗೆ ಸಂತಾಪಗಳನ್ನು ಸೂಚಿಸುತ್ತೇನೆ, ಪೊಲೀಸರು ತಾರತಮ್ಯ ಮಾಡದೇ ಆರೋಪಿಗಳ ಹೆಡೆಮುರಿ ಕಟ್ಟಲಿ” ಎಂದು ಆಶಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಅವರು ಪ್ರತಿಕ್ರಿಯಿಸಿ, “ಪುನೀತ್ ಕೆರೆಹಳ್ಳಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ. ಸದ್ಯದ ಕರ್ನಾಟಕದ ರಾಜಕೀಯ, ಸಾಮಾಜಿಕ ಸಂದರ್ಭಕ್ಕೆ ಅದುವೇ ಸರಿಯಾದದ್ದು. ಬಿಜೆಪಿಯ ರಾಜಕಾರಣದ ಸಮರ್ಥ ಪ್ರತಿನಿಧಿ, ನೈಜ ಮುಖ ಆತ. ಇದಕ್ಕಿಂತ ಹೆಚ್ಚು ಏನು ಹೇಳಲು ಸಾಧ್ಯ? ಇಂಥವನನ್ನು ವರ್ಷಗಳಿಂದ ಸಹಿಸಿಕೊಂಡದ್ದಕ್ಕೆ ಪೊಲೀಸ್ ಇಲಾಖೆಯ ಮರ್ಯಾದಸ್ಥರು ನಿವೃತ್ತರಾಗುವುದು ಲೇಸು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...