Homeಕರ್ನಾಟಕಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

- Advertisement -
- Advertisement -

ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಚಾರಕ್ಕೆ ಬಂದವರಲ್ಲಿ ಪುನೀತ್‌ ಕೆರೆಹಳ್ಳಿ ಕೂಡ ಒಬ್ಬ. ಕಾರಿನಲ್ಲಿ ಕೂತು ಕಾಂಗ್ರೆಸ್‌ ನಾಯಕರನ್ನು ಏಕವಚನದಲ್ಲಿ ನಿಂದಿಸುತ್ತಾ, ಬಾಯಿಗೆ ಬಂದಂತೆ ಮಾತನಾಡುತ್ತಾ ಪ್ರಚಾರ ಪಡೆದ ಈ ಪುನೀತ್ ಮೂಲತಃ ಹಾಸನ ಜಿಲ್ಲೆಯವನು.

ತಾನು ಹಿಂದುತ್ವ ಬೆಂಬಲಿಗ, ಸಂಘಪರಿವಾರದ ಕಾರ್ಯಕರ್ತ ಎಂದು ಹೇಳಿಕೊಂಡು ಮುಂಚೂಣಿಗೆ ಬಂದ ಈತ ಮಾಡಿದ ಅವಾಂತರಗಳಿಗೆ ಲೆಕ್ಕವಿಲ್ಲ. ಇಂತಹ ಫ್ರಿಂಜ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಬಿಟ್ಟಿದ್ದೇ ತಪ್ಪಾಯಿತೆಂಬುದು ಜನರ ಮಾತು. ಈಗ ಅಮಾಯಕ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆಯಲ್ಲಿ ಪುನೀತ್‌ ಕೆರೆಹಳ್ಳಿ ಆರೋಪಿಯಾಗಿದ್ದಾನೆ.

ಪುನೀತ್‌ ಕೆರೆಹಳ್ಳಿ ಮೊದಮೊದಲು ಕಾರಿನಲ್ಲಿ ಕೂತು ಅರಚುತ್ತಿದ್ದನು. ಆಮೇಲೆ ಬಿಜೆಪಿ ನಾಯಕರೊಂದಿಗೆ ಗುರುಸಿಕೊಳ್ಳಲು ಆರಂಭಿಸಿದನು. ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಕಾರುತ್ತಾ ಪ್ರಚಾರ ಪಡೆದನು. “ಈತನಿಗೆ ಒಂದಿಷ್ಟು ಮಂದಿ ಗೂಗಲ್ ಪೇ, ಪೋನ್‌ ಪೇ ಮೂಲಕ ಧನಸಹಾಯ ಮಾಡಿ ಪ್ರೋತ್ಸಾಹಿಸಿದ್ದರಿಂದಲೇ ಕೋಮುದ್ವೇಷದ ಮಾತುಗಳನ್ನು ಹೆಚ್ಚಿಸಿಕೊಂಡ” ಎಂಬ ಆರೋಪಗಳಿವೆ. ಪುನೀತ್ ಕೆರೆಹಳ್ಳಿಯ ಇತಿಹಾಸ ಕೆದಕಿದರೆ ಆತ ಮಾಡಿರುವ ಅವಾಂತರಗಳು ಒಂದೊಂದಾಗಿ ಬಿಚ್ಚಿಕೊಳ್ಳುತ್ತವೆ.

ವೇಶ್ಯಾವಾಟಿಕೆಯಲ್ಲಿ ಕೆರೆಹಳ್ಳಿ ಹೆಸರು: 2013ರಲ್ಲಿಯೇ ಪುನಿತ್ ಕೆರೆಹಳ್ಳಿಯ ಹೆಸರು ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿದೆ ಎಂಬುದು ಕಳೆದ ವರ್ಷ ಬಯಲಾಗಿತ್ತು. ಭರತ್ ಶೆಟ್ಟಿ ಎಂಬವರೊಂದಿಗೆ ಪುನೀತ್‌ ನಡೆಸಿದ್ದ ಸಂಭಾಷಣೆಯ ಆಡಿಯೊ ವೈರಲ್ ಆಗಿತ್ತು. 2013ರಲ್ಲಿ ದಾಖಲಾಗಿರುವ ಪ್ರಕರಣ ಇದಾಗಿದ್ದು, 2016ರಲ್ಲಿ ಹೋರಾಟಕ್ಕೆ ನಾನು ಬಂದಿದ್ದೇನೆ ಎಂದು ಪುನೀತ್ ಹೇಳಿಕೊಂಡಿದ್ದ.

ವೇಶ್ಯಾವಾಟಿಕೆಯ ಸಂಬಂಧ ಸುದ್ದಿ ಹರಿದಾಡಿದ್ದಾಗ ಪುನೀತ್‌ಗೆ ಆತನ ಸ್ನೇಹಿತನೊಬ್ಬ ಬುದ್ಧಿವಾದ ಹೇಳಿದ್ದ. ಆದರೆ ಆತನನ್ನೇ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆರೆಹಳ್ಳಿ ವಿರುದ್ಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೇಗೂರು ಕೆರೆಗೆ ಕೋಮುವಾದದ ಬಣ್ಣ: ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ 2021ರ ಆಗಸ್ಟ್ 11ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಆರೋಪದ ಮೇಲೆ ಪುನಿತ್‌ ಕೆರೆಹಳ್ಳಿ ಮತ್ತು ಇತರರ ಮೇಲೆ ಪ್ರಕರಣ ದಾಖಲಾಗಿತ್ತು.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು. ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದರು.

ಶ್ರೀರಂಗಪಟ್ಟಣದಲ್ಲಿ ಕೋಮುದ್ವೇಷ ಹಬ್ಬಿಸಲು ಯತ್ನ: ಶ್ರೀರಂಗಪಟ್ಟಣದ ಜಾಮಿಯ ಮಸೀದಿ ಮೊದಲ ದೇವಾಲಯವಾಗಿತ್ತು ಎಂದು ವಿವಾದ ಸೃಷ್ಟಿಸಲು ಯತ್ನಿಸಿದವರಲ್ಲಿ ಕೆರೆಹಳ್ಳಿ ಕೂಡ ಒಬ್ಬ. ಇತಿಹಾಸವನ್ನು ಸರಿಯಾಗಿ ತಿಳಿಯದೆ ಗೊಂದಲ ಸೃಷ್ಟಿಸಿ, ಶಾಂತಿಯುತವಾಗಿರುವ ಶ್ರೀರಂಗಪಟ್ಟಣದಲ್ಲಿ ಬೆಂಕಿ ಹಚ್ಚಲು ಕೆರೆಹಳ್ಳಿಯಂತಹ ಫ್ರಿಂಜ್‌ಗಳು ಯತ್ನಿಸಿದ್ದರು. (ವಿವಾದದ ಕುರಿತು ಓದಲು ಇಲ್ಲಿ ಕ್ಲಿಕ್ ಮಾಡಿರಿ)

ಟಿಪ್ಪು ಪ್ಲೆಕ್ಸ್‌ ಹರಿದು ರಾದ್ಧಾಂತ: ಸಂವಿಧಾನ ಬಾಹಿರ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕೆರೆಹಳ್ಳಿ, 2022ರ ಆಗಸ್ಟ್‌ನಲ್ಲಿ ಟಿಪ್ಪು ಪ್ಲೆಕ್ಸ್ ಹರಿದು ರಾದ್ಧಾಂತ ಮಾಡಿದ್ದನು. ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದ್ದಕ್ಕೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಜಟ್ಕಾ ಕಟ್‌, ಹಲಾಲ್‌ ಕಟ್‌ ವಿವಾದ: ಶಾಂತಿಯುತವಾಗಿ ನಡೆಯುತ್ತಿದ್ದ ಹಬ್ಬಗಳಲ್ಲಿ ಗಲಭೆಗಳನ್ನು ಸೃಷ್ಟಿಸಲು ಯತ್ನಿಸಿದವರ ಪೈಕಿ ಪುನೀತ್‌ ಕೆರೆಹಳ್ಳಿಯೂ ಒಬ್ಬ. ಮುಸ್ಲಿಮರ ಬಳಿ ವ್ಯಾಪಾರ ಮಾಡಬೇಡಿ, ಮಾಂಸ ಖರೀದಿ ಮಾಡಬೇಡಿ ಎಂದು ಪ್ರಚಾರ ಮಾಡುತ್ತಾ ಕೋಮುದ್ವೇಷವನ್ನು ಹಬ್ಬಿಸಲು ಯುಗಾದಿ ಸಂದರ್ಭ ಬಂದಾಗಲೆಲ್ಲ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ನಿರಂತರ ಪ್ರಯತ್ನ ಮಾಡುತ್ತಾ ಬಂದಿದ್ದಾರೆ. ಇದಕ್ಕೆ ಸಾರ್ವಜನಿಕರು ವಿರೋಧವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಗೋರಕ್ಷಣೆ ಹೆಸರಲ್ಲಿ ದಾಂಧಲೆ: ರಾಷ್ಟ್ರ ರಕ್ಷಣಾ ಪಡೆ ಎಂಬ ಕೂಟವನ್ನು ರಚಿಸಿಕೊಂಡು ಗೋರಕ್ಷಣೆ ಮಾಡುತ್ತೇನೆ ಎಂದು ಸಕ್ರಿಯವಾಗಿರುವ ಕೆರೆಹಳ್ಳಿ ಮತ್ತು ಸಹಚರರು ಈಗ ಕೊಲೆ ಪ್ರಕರಣದಲ್ಲಿ ಸಿಲುಕಿಬಿದ್ದಿದ್ದಾರೆ. ಅಮಾಯಕ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಬೇಡಿಕೆಯನ್ನೂ ಇವರು ಇಟ್ಟಿದ್ದರು, ಕೊಡಲು ಒಪ್ಪದೇ ಇದ್ದಿದ್ದರಿಂದ ಕೊಲೆ ಮಾಡಿದ್ದಾರೆಂದು ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ.

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟು ಹಾಕಿದ ಪ್ರಕರಣವನ್ನು ಈ ಘಟನೆ ನೆನಪಿಸಿದೆ. ಗೋವನ್ನು ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳದ ಮುಖಂಡರು ರಾಜಸ್ಥಾನ-ಹರಿಯಾಣ ಗಡಿಯಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿದ್ದಾರೆಂಬುದು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋರಕ್ಷಣಾ ಪಡೆ, ಈ ರೀತಿಯ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿ ಅನೇಕ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತಿತ್ತು. ಅದೇ ಮಾದರಿಯಲ್ಲಿ ಪುನಿತ್ ಕೆರೆಹಳ್ಳಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊಗಳನ್ನು ಅಪ್‌ಲೋಡ್ ಮಾಡುತ್ತ ಬಂದಿದ್ದಾನೆ. ನೈತಿಕ ಗೂಂಡಾಗಿರಿ ಮೆರೆಯುತ್ತಾ ಕಾನೂನು ಕೈಗೆತ್ತಿಕೊಂಡಿರುವುದು ಇಲ್ಲಿನ ವಿಡಿಯೊಗಳಿಂದ ಸ್ಪಷ್ಟವಾಗುತ್ತದೆ. ಪದೇ ಪದೇ ಪ್ರಕರಣಗಳನ್ನು ದಾಖಲಾಗುತ್ತಿದ್ದರೂ ಕಠಿಣ ಕ್ರಮಗಳನ್ನು ಜರುಗಿಸದ ಕಾರಣ ಮತ್ತೆ ಮತ್ತೆ ಪುನೀತ್ ಕೆರೆಹಳ್ಳಿ ಮತ್ತಷ್ಟು ಕ್ರೌರ್ಯಗಳನ್ನು ನಡೆಸುತ್ತಿದ್ದಾನೆಂಬ ಆರೋಪಗಳನ್ನು ಸುಲಭವಾಗಿ ತಳ್ಳಿಹಾಕಲು ಸಾಧ್ಯವಿಲ್ಲ.

ಆಡಳಿತರೂಢ ಬಿಜೆಪಿಯ ನಾಯಕರೊಂದಿಗೆ ಆತ ತೆಗೆಸಿಕೊಂಡಿರುವ ಫೋಟೋಗಳು ಹರಿದಾಡುತ್ತಿವೆ. ಪ್ರಭುತ್ವದ ಪೋಷಣೆ ತನಗಿದೆ ಎಂಬ ದಾಷ್ಟ್ಯವನ್ನು ಪುನೀತ್ ಕೆರೆಹಳ್ಳಿ ಥರದವರು ಮತ್ತೆ ಮತ್ತೆ ಪ್ರದರ್ಶಿಸುತ್ತಿದ್ದಾರೆಂಬುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...