Homeಮುಖಪುಟಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಲು ಯತ್ನ: ಗುಜರಾತ್‌ ಮೂಲದ ನಾಲ್ವರ ಸಾವು

- Advertisement -
- Advertisement -

ಇತ್ತೀಚೆಗೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿ ಮೃತಪಟ್ಟವರಲ್ಲಿ ಭಾರತ ಮೂಲದ ಗುಜರಾತ್ ರಾಜ್ಯದವರು ಸೇರಿದ್ದಾರೆ. ಈ ಬಗ್ಗೆ ಭಾನುವಾರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕುಟುಂಬವೊಂದು ಖಚಿತಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕಾ-ಕೆನಡಾ ಗಡಿಯ ನಡುವಿನ ಮೊಹಾಕ್ ಪ್ರದೇಶದ ಅಕ್ವೆಸಾಸ್ನೆಯಲ್ಲಿನ ಜವುಗು ಪ್ರದೇಶದಲ್ಲಿ ಎಂಟು ವ್ಯಕ್ತಿಗಳ ಶವಗಳು ಪತ್ತೆಯಾಗಿವೆ. ಅವರೆಲ್ಲರೂ ಪ್ರಯಾಣ ದಾಖಲೆಗಳಿಲ್ಲದೆ ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಬಗ್ಗೆ ಭಾನುವಾರ ಮೆಹ್ಸಾನಾದ ಮಾನೆಕ್‌ಪುರ್ ಗ್ರಾಮದ ನಿವಾಸಿ ಜಸುಭಾಯ್ ಚೌಧರಿ ಅವರು ಮಾಹಿತಿ ನೀಡಿದ್ದು, ”ತಮ್ಮ ಸಹೋದರ, ಸೊಸೆ ಮತ್ತು ಅವರ ಇಬ್ಬರು ಮಕ್ಕಳು ಎರಡು ತಿಂಗಳ ಹಿಂದೆ ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಹೋಗಿದ್ದರು. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರು, ಸಂಪರ್ಕಕ್ಕೆ ಸಿಗುತ್ತಿಲ್ಲ. ಹಾಗಾಗಿ, ”ಅಲ್ಲಿ ಸಾವನ್ನಪ್ಪಿರುವವರು ನಮ್ಮ ಕುಟುಂಬದ ಸದಸ್ಯರು ಎಂಬ ಅನುಮಾನಕ್ಕೆ ಕಾರಣವಾಯಿತು” ಎಂದು ಚೌಧರಿ ಹೇಳಿದರು.

ಇದನ್ನೂ ಓದಿ: ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

”ಕೆನಡಾದಲ್ಲಿ ನೆಲೆಸಿರುವ ಇತರ ಸಂಬಂಧಿಕರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಸಾವನ್ನಪ್ಪಿರುವವರ ಹೆಸರು ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿತ್ತು. ಇದರಿಂದ ನಮ್ಮ ಅನುಮಾನ ದೃಢಪಟ್ಟಿದೆ” ಎಂದು ಅವರು ಹೇಳಿದರು.

ಕೆನಡಾಕ್ಕೆ ತೆರಳಿದ್ದ ತಮ್ಮ ಕುಟುಂಬದ ಬಗ್ಗೆ ಚೌಧರಿ ಮಾಹಿತಿ ನೀಡಿದ್ದು, ಪ್ರವೀಣ್ ಚೌಧರಿ (50), ಅವರ ಪತ್ನಿ ದೀಕ್ಷಾ (45), ಪುತ್ರ ಮೀತ್ (20) ಮತ್ತು ಪುತ್ರಿ ವಿಧಿ (24) ಎಂದು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ಮಾನೆಕ್‌ಪುರ ಗ್ರಾಮದ ಒಂದು ಕುಟುಂಬದ ನಾಲ್ವರು ಸಂದರ್ಶಕ ವೀಸಾ (visitor visas)ದಲ್ಲಿ ಕೆನಡಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರು ನದಿ ದಾಟಲು ಪ್ರಯತ್ನಿಸಿದಾಗ ಮೃತಪಟ್ಟಿದ್ದಾರೆ ಎಂದು ಮೆಹ್ಸಾನಾ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ”ಗ್ರಾಮಸ್ಥರು ತಮ್ಮ ದೇಹವನ್ನು ಮರಳಿ ತರಲು ಸಹಾಯ ಕೋರಿ ನಮ್ಮನ್ನು ಸಂಪರ್ಕಿಸಿದರು, ನಾವು ರಾಜ್ಯ ಸರ್ಕಾರಕ್ಕೆ ವರದಿ ಮಾಡಿದ್ದೇವೆ” ಎಂದು ಅಧಿಕಾರಿ ಹೇಳಿದರು.

ಇನ್ನು ಕೆನಡಾದ ಅಧಿಕಾರಿಗಳು ಪತ್ತೆಯಾದ ಶವಗಳ ಬಗ್ಗೆ ಮಾಹಿತಿ ನೀಡಿದ್ದು, ”ಆರು ವಯಸ್ಕರು ಮತ್ತು ಎರಡು ಕುಟುಂಬಗಳ ಇಬ್ಬರು ಮಕ್ಕಳು – ಒಂದು ಭಾರತೀಯ ಮತ್ತು ಇನ್ನೊಂದು ರೊಮೇನಿಯನ್ ಮೂಲದ ಕುಟುಂಬ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಜನವರಿ 19ರಂದು ಕೆನಡಾದ ಗಡಿ ಪಟ್ಟಣವಾದ ಎಮರ್ಸನ್ ಬಳಿ ಅಲ್ಲಿಯ ಪೊಲೀಸರು ನಾಲ್ಕು ಭಾರತೀಯರ ಶವಗಳನ್ನು ಪತ್ತೆ ಮಾಡಿದ್ದರು. ಅವರನ್ನು ಜಗದೀಶ್ ಪಟೇಲ್ (39), ವೈಶಾಲಿ ಪಟೇಲ್ (37), ವಿಹಂಗಿ ಪಟೇಲ್ (11) ಮತ್ತು ಧಾರ್ಮಿಕ್ ಪಟೇಲ್ (3) ಎಂದು ಗುರುತಿಸಲಾಗಿದೆ.

ಕೆನಡಾ-ಅಮೆರಿಕ ಗಡಿಯನ್ನು ದಾಟಲು ಪ್ರಯತ್ನಿಸುತ್ತಿದ್ದ ಗುಜರಾತ್‌ನ ಹನ್ನೊಂದು ವ್ಯಕ್ತಿಗಳಲ್ಲಿ ಕುಟುಂಬವೂ ಸೇರಿದೆ. ಇತರ ಏಳು ಜನರನ್ನು ಅಮೆರಿಕ ಅಧಿಕಾರಿಗಳು ಗಡಿ ದಾಟಿದ ನಂತರ ಬಂಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...