Homeಮುಖಪುಟಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

ಪ.ಬಂಗಾಳ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; 144 ಸೆಕ್ಷನ್ ಜಾರಿ, ಇಂಟರ್ನೆಟ್ ಸೇವೆ ಬಂದ್

- Advertisement -
- Advertisement -

ಭಾನುವಾರ ಸಂಜೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ನೆರೆಯ ಹೌರಾ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ ಈ ಘರ್ಷಣೆಗಳು ನಡೆದಿವೆ.

ಈ ಮೆರವಣಿಗೆಯ ವೇಳೆ ನಡೆದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಸ್ಥಳದಲ್ಲಿ ಉದ್ವಿಘ್ನತೆ ಉಂಟಾಯಿತು. ಇದರಲ್ಲಿ ಹಲವಾರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಆನಂತರ ಅಧಿಕಾರಿಗಳು ಹೂಗ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಿದ್ದಾರೆ.

ನಗರದ ರಿಶ್ರಾ ಪ್ರದೇಶದಲ್ಲಿ ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಘರ್ಷಣೆ ನಡೆದಿದೆ. ಈ ಪ್ರದೇಶದಲ್ಲಿ ಎರಡು ರಾಮನವಮಿ ಮೆರವಣಿಗೆಗಳನ್ನು ಆಯೋಜಿಸಲಾಗಿತ್ತು ಎಂದು ಪೊಲೀಸರು ತಿಳಿಸಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಮೆರವಣಿಗೆಯಲ್ಲಿ ಬಿಜೆಪಿ ನಾಯಕರೂ ಭಾಗಿಯಾಗಿದ್ದರು. ”ಮೇದಿನಿಪುರ ಸಂಸದ ದಿಲೀಪ್ ಘೋಷ್ ಮತ್ತು ದಾಳಿಗೊಳಗಾದ ಪುರ್ಸುರಾ ಶಾಸಕ ಬಿಮನ್ ಘೋಷ್ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು” ಎಂದು ಚಂದನನಗರ ಪೊಲೀಸ್ ಕಮಿಷನರೇಟ್‌ನ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

”ಈ ಮೆರವಣಿಗೆ ಸಾಂಪ್ರದಾಯಿಕ ಮಾರ್ಗದಲ್ಲಿ ಹೋಗುತ್ತಿದ್ದಾಗ ಒಂದು ಗುಂಪು ಅದರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿತು. ಪರಿಸ್ಥಿತಿ ಹತೋಟೆಗೆ ತಗೆದುಕೊಳ್ಳಲು ನಾವು ತಕ್ಷಣದಲ್ಲೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ” ಎಂದು ಅವರು ಹೇಳಿದರು.

ಹಿಂಸಾಚಾರದಲ್ಲಿ ಬಿಮನ್ ಘೋಷ್ ಗಾಯಗೊಂಡಿದ್ದಾರೆ. ”ಕಲ್ಲು ಎಸೆದವರನ್ನು ಓಡಿಸುವ ಮುನ್ನ ಪೊಲೀಸರು ಸ್ವಲ್ಪ ಹೊತ್ತು ಮೂಕ ಪ್ರೇಕ್ಷಕರಾಗಿದ್ದರು” ಎಂದು ಘೋಷ್ ಆರೋಪಿಸಿದ್ದಾರೆ.

ಹಿಂಸಾಚಾರ ನಡೆದ ಬಳಿಕ ರಿಶ್ರಾದ 1-5 ವಾರ್ಡ್‌ ಮತ್ತು ಸೆರಾಂಪೋರ್‌ನ 24ರ ವಾರ್ಡ್‌ಗಳಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆಯವರೆಗೆ ರಿಶ್ರಾ ಮತ್ತು ಸೆರಾಂಪೋರ್‌ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಜಾಯ್‌ಪ್ರಕಾಶ್ ಮಜುಂದಾರ್, ”ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಲಾಭಕ್ಕಾಗಿ ಗಲಭೆಗಳನ್ನು ಸೃಷ್ಟಿಸಿ, ರಾಜ್ಯದಲ್ಲಿ ಅಸ್ಥಿರತೆ ಉಂಟುಮಾಡಲು ಬಯಸಿದೆ” ಎಂದು ಆರೋಪಿಸಿದ್ದಾರೆ.

”ಪವಿತ್ರ ರಂಜಾನ್ ತಿಂಗಳಲ್ಲಿ ರಾಮನವಮಿ ಮೆರವಣಿಗೆಗಳನ್ನು ಕೈಗೊಳ್ಳಲು ಅವರು ಏಕೆ ಒಲವು ತೋರುತ್ತಿದ್ದಾರೆ? ರಾಮ ನವಮಿ ಮುಗಿದು ಎರಡು ದಿನಗಳ ನಂತರ ಏಕೆ ರ್ಯಾಲಿಯನ್ನು ನಡೆಸಲಾಯಿತು?” ಎಂದು ಅವರು ಕೇಳಿದರು.

”ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ತರಲು ಬಿಜೆಪಿ ಇಂತಹ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ” ಎಂದು ಮಜುಂದಾರ್ ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...