Homeಮುಖಪುಟಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

ಚೆನೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕ ಅರೆಸ್ಟ್‌

- Advertisement -
- Advertisement -

ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯೊಬ್ಬರು ನೀಡಿದ ಲೈಂಗಿಕ ಕಿರುಕುಳದ ದೂರಿನ ಆಧಾರದ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಾರ್ಚ್ 31ರಂದು, ಕಲಾಕ್ಷೇತ್ರ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್ ವಿರುದ್ಧ ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ), 509 (ಪದಗಳು, ಸನ್ನೆಗಳು ಅಥವಾ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿದ ಕೃತ್ಯಗಳು) ಮತ್ತು ತಮಿಳುನಾಡು ಮಹಿಳೆಯರಿಗೆ ಕಿರುಕುಳದ ನಿಷೇಧದ ನಿಬಂಧನೆಗಳ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ಹೈದರಾಬಾದ್‌ನ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ಪದ್ಮನ್ ಅವರು ಹಿಂದಿರುಗಿದ ನಂತರ ತಲೆಮರೆಸಿಕೊಂಡಿದ್ದರು. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಮೊಬೈಲ್ ಫೋನ್‌ನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿದ್ದರು ಆದರೆ ಭಾನುವಾರ ಬೆಳಿಗ್ಗೆ ಅವರು ಚೆನ್ನೈಗೆ ಹಿಂದಿರುಗಿದ ನಂತರ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಲು ಫೋನ್ ಆನ್‌ ಮಾಡಿದ್ದರು. ಈ ಕರೆ ಅವರ ಇರುವಿಕೆಯ ಪತ್ತೆಗೆ ಸಹಾಯ ಮಾಡಿದೆ. ಬಂಧಿತ ಸಹಾಯಕ ಪ್ರಾಧ್ಯಾಪಕರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

”ಹರಿ ಪದ್ಮನ್‌ ನೀಡುತ್ತಿದ್ದ ಲೈಂಗಿಕ ಕಿರುಕುಳ ಹಾಗೂ ಅವರ ನಿಂದನೆಯಿಂದಾಗಿ ಕೆಲವು ವರ್ಷಗಳ ಹಿಂದೆ ಕಲಾಕ್ಷೇತ್ರ ಫೌಂಡೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಕಾರ್ಯಕ್ರಮದಿಂದ ಹೊರಗುಳಿದಿದ್ದೆ” ಎಂದು ದೂರು ದಾಖಲಿಸಿದ ವಿದ್ಯಾರ್ಥಿನಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

”ಅವರು ಒಮ್ಮೆ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದರು. ಯಾರಿಗೂ ತಿಳಿಯುವುದಿಲ್ಲ, ಮನೆಗೆ ಬಾ ಎಂದು ನನ್ನನ್ನು ಕರೆದಿದ್ದರು” ಎಂದು ದೂರುದಾರರು ಹೇಳಿದ್ದಾರೆ.

”ಅವರ ಆ ಬೇಡಿಕೆಗೆ ನಾನು ಒಪ್ಪದಿದ್ದಾಗ ಅದರ ಪ್ರತೀಕಾರದ ಕ್ರಮವಾಗಿ, ಪ್ರಮುಖ ನೃತ್ಯ ಪಾತ್ರದಿಂದ ನನ್ನನ್ನು ತೆಗೆದುಹಾಕಲಾಯಿತು” ಎಂದು ಆ ವಿದ್ಯಾರ್ಥಿನಿ ಹೇಳಿಕೊಂಡಿದ್ದಾಳೆ.

ಸುಮಾರು 250 ವಿದ್ಯಾರ್ಥಿಗಳು ಮಾರ್ಚ್ 30ರಿಂದ ಪ್ರತಿಭಟನೆ ನಡೆಸುತ್ತಿದ್ದು, ಅನುಚಿತ ವರ್ತನೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಹರಿ ಸಹಾಯಕ ಪ್ರಾಧ್ಯಾಪಕ ಹರಿ ಪದ್ಮನ್‌ ಹಾಗೂ ಸಂಜಿತ್ ಲಾಲ್, ಸಾಯಿ ಕೃಷ್ಣನ್ ಮತ್ತು ಶ್ರೀನಾಥ್ ಎಂಬ ಸಿಬ್ಬಂದಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆಗೆ ದೂರು ನೀಡಿದ್ದರು.

”ನಾನು ಕಲಾಕ್ಷೇತ್ರ ಫೌಂಡೇಶನ್‌ನ ಕ್ಯಾಂಪಸ್‌ನಲ್ಲಿ ಐದು ಗಂಟೆಗಳ ವಿಚಾರಣೆ ನಡೆಸಿದಾಗ ಲೈಂಗಿಕ ಕಿರುಕುಳ ಮತ್ತು ಕಿರುಕುಳದ 90 ದೂರುಗಳು ವಿದ್ಯಾರ್ಥಿಗಳಿಂದ ಸ್ವೀಕರಿಸಿದ್ದಾರೆ” ಎಂದು ಶುಕ್ರವಾರ ತಮಿಳುನಾಡು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ಎಆರ್ ಕುಮಾರಿ ಅವರು ತಿಳಿಸಿದ್ದಾರೆ.

”ದೂರುಗಳಲ್ಲಿ ಹುಡುಗಿಯರು ಮತ್ತು ಹುಡುಗರ ಲೈಂಗಿಕ ದೌರ್ಜನ್ಯವೂ ಸೇರಿದೆ. ನಾನು ಜೂಮ್ ಆ್ಯಪ್ ಮೂಲಕ ಆರು ವಿದ್ಯಾರ್ಥಿಗಳನ್ನು ಸೇರಿದಂತೆ ಒಟ್ಟು 12 ವಿದ್ಯಾರ್ಥಿಗಳನ್ನು ಮಾತನಾಡಿಸಿ, ಎಲ್ಲರಲ್ಲೂ ಆತ್ಮವಿಶ್ವಾಸದಿಂದ ಇರಬೇಕು ಎಂದು ಹೇಳಿದ್ದೇನೆ. ಈ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತೇನೆ” ಎಂದು ಕುಮಾರಿ ಅವರು ಹೇಳಿದರು.

ತನಿಖೆಯ ಸಮಯದಲ್ಲಿ ಆರೋಪಿ ಸಿಬ್ಬಂದಿ ವಿರುದ್ಧ ಆರೋಪ ದೃಢಪಟ್ಟರೆ ಸರ್ಕಾರವು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜ್ಯ ವಿಧಾನಸಭೆಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...