Homeಮುಖಪುಟಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

ಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

- Advertisement -
- Advertisement -

ಎಷ್ಟೇ ಪ್ರಭಾವಿಗಳಾದರೂ ಭ್ರಷ್ಟರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಕೇಂದ್ರೀಯ ತನಿಖಾ ದಳದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಅವರು, “ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಗೆ ಭ್ರಷ್ಟಚಾರದಿಮದ ದೊಡ್ಡ ಅಡ್ಡಿಯಾಗಿದೆ” ಎಂದು ತಿಳಿಸಿದ್ದಾರೆ.

ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಕೇಂದ್ರೀಯ ತನಿಖಾ ದಳದ ಮುಖ್ಯ ಕಾರ್ಯವಾಗಿದೆ ಎಂದಿದ್ದಾರೆ.

“ಯಾವುದೇ ಭ್ರಷ್ಟರನ್ನು ಬಿಡಬಾರದು” ಎಂದು ಒತ್ತಿ ಹೇಳಿರುವ ಮೋದಿ, “ನಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದು ದೇಶದ ಜನತೆಯ ಆಶಯ. ದೇಶ, ಕಾನೂನು ಮತ್ತು ಸಂವಿಧಾನ ನಿಮ್ಮೊಂದಿಗಿದೆ. ಇಂದು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರೀಯ ಸಂಸ್ಥೆ ನ್ಯಾಯದ ಬ್ರಾಂಡ್ ಅಂಬಾಸಿಡರ್ ಆಗಿದೆ. ಇಂದಿಗೂ ಪ್ರಕರಣ ಇತ್ಯರ್ಥವಾಗದೆ ಇದ್ದ ಸಂದರ್ಭದಲ್ಲಿ, ಅದನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಬೇಡಿಕೆಗಳಿವೆ. ಎಲ್ಲರ ಬಾಯಲ್ಲೂ ಸಿಬಿಐ ಹೆಸರು ಇದೆ. ಯಾವುದೇ ಮಹತ್ವದ ಅಪರಾಧ ನಡೆದರೆ ಅದನ್ನು ಸಿಬಿಐಗೆ ಒಪ್ಪಿಸಬೇಕೆಂದುಪಂಚಾಯತಿ ಮಟ್ಟದಲ್ಲಿಯೂ ಜನರು ಬಯಸುತ್ತಾರೆ” ಎಂದಿದ್ದಾರೆ.

“ದಶಕಗಳ ಕಾಲ ಭ್ರಷ್ಟಾಚಾರದಿಂದ ಲಾಭ ಪಡೆದವರು ಕೇಂದ್ರ ತನಿಖಾ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದ್ದಾರೆ.

“ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಪ್ರಭಾವಿಗಳು ಎಂದು ನನಗೆ ತಿಳಿದಿದೆ, ಅವರು ಹಲವು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಆದರೆ ಭ್ರಷ್ಟರ ಪ್ರಭಾವ ನೋಡಿ ಏಜೆನ್ಸಿಗಳು ಹಿಂಜರಿಯಬಾರದು” ಎಂದು ಸಲಹೆ ನೀಡಿದ್ದಾರೆ.

ಸಿಬಿಐ ದುರ್ಬಳಕೆ; ಪ್ರತಿಪಕ್ಷಗಳ ಆರೋಪ

ಕೇಂದ್ರೀಯ ತನಿಖಾ ದಳವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...