Homeಮುಖಪುಟಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

ಹೈಕೋರ್ಟ್ ನ್ಯಾಯಮೂರ್ತಿಗಳ ಕುರಿತು ನೀಡಿದ್ದ ಹೇಳಿಕೆ ಹಿಂಪಡೆದ ಹರ್ಯಾಣ ಸಿಎಂ

- Advertisement -
- Advertisement -

ಹೈಕೋರ್ಟ್ ನ್ಯಾಯಾಧೀಶರ ಕುರಿತು ನೀಡಿದ್ದ ಹೇಳಿಕೆಯನ್ನು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸೋಮವಾರ ಹಿಂತೆಗೆದುಕೊಂಡಿದ್ದಾರೆ. ಅವರು ನೀಡಿದ್ದ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ಭಿವಾನಿಯಲ್ಲಿ ಹಿಂದಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಖಟ್ಟರ್, “ಇದು ಅಸ್ವಾಭಾವಿಕ ಅಭಿಪ್ರಾಯ. ಈ ಹೇಳಿಕೆಯನ್ನು ನೀಡಬಾರದಿತ್ತು” ಎಂದಿದ್ದಾರೆ.

ಮೂರು ದಿನಗಳ ಪ್ರವಾಸವನ್ನು ಆರಂಭಿಸಿದ ಭಿವಾನಿಯಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಖಟ್ಟರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತು.

2019ರ ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಖಟ್ಟರ್‌, “ಆ ಸಮಸ್ಯೆ ಬಗೆಹರಿಯುತ್ತದೆ. ನ್ಯಾಯಾಧೀಶರಿದ್ದಾರೆ, ಅವರ ತಲೆಯಲ್ಲಿ ಕೆಲವು ಸಮಸ್ಯೆ ಇದೆ. ನಾವು ಅದನ್ನು ಸರಿಪಡಿಸುತ್ತೇವೆ. ನನಗೆ ಸಂಪೂರ್ಣ ವಿಷಯ ತಿಳಿದಿದೆ. ಮೂರು ಸಾವಿರ ಮಂದಿ ಈಗಾಗಲೇ ನೇಮಕವಾಗಿದ್ದಾರೆ. 5,000ದಲ್ಲಿ ಮೂರು ಸಾವಿರ ಸೇರಿದ್ದಾರೆ. ಇನ್ನುಳಿದ 2,000 ಮಂದಿ ಶೀಘ್ರದಲ್ಲೇ ನ್ಯಾಯಾಲಯದ ತೀರ್ಪು ಪಡೆಯುತ್ತಾರೆ” ಎಂದಿದ್ದರು. ಇದು ವೈರಲ್ ವಿಡಿಯೊದಲ್ಲಿ ಸೆರೆಯಾಗಿದೆ.

ಹರಿಯಾಣ ಪೊಲೀಸ್ ಕಾನ್ಸ್‌ಟೇಬಲ್‌ಗಳ ನೇಮಕಾತಿಗೆ ಸಂಬಂಧಿಸಿದ 2019ರ ಪ್ರಕರಣವನ್ನು ಉಲ್ಲೇಖಿಸಿ ಖಟ್ಟರ್‌ ಮಾತನಾಡಿದ್ದಾರೆಂದು ಮೂಲಗಳು ತಿಳಿಸಿವೆ. ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆಕ್ಷೇಪಿಸಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು. ಭರ್ತಿ ಮಾಡಬೇಕಿದ್ದ 5,000 ಹುದ್ದೆಗಳ ಪೈಕಿ ಕನಿಷ್ಠ 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹರಿಯಾಣ ಸಿಬ್ಬಂದಿ ಆಯ್ಕೆ ಆಯೋಗ ಹೇಳಿದೆ. ಹೈಕೋರ್ಟ್‌‌ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ಆ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಖಟ್ಟರ್, “ನಾನು ನ್ಯಾಯಾಲಯಗಳನ್ನು ಗೌರವಿಸುತ್ತೇನೆ. ನ್ಯಾಯಾಲಯಗಳು ಏನೇ ತೀರ್ಪು ನೀಡಿದರೂ ಅದು ಅಂತಿಮ ತೀರ್ಪು ಎಂಬುದರಲ್ಲಿ ಸಂದೇಹವಿಲ್ಲ ಎಂದು ನಾನು ತಕ್ಷಣ ಹೇಳಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ವಿಷಯಗಳು ಮುಂದುವರಿಯುತ್ತವೆ. ಎಲ್ಲರೂ ಸಾರ್ವಜನಿಕ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಾರೆ. ವಿಪರೀತ ವಿಳಂಬಕ್ಕೆ ಸಂಬಂಧಿಸಿದ ಪ್ರಶ್ನೆ ಇದಾಗಿತ್ತು. ಪರೀಕ್ಷೆ ನಡೆಯಿತು, ಮತ್ತು ಫಲಿತಾಂಶವನ್ನು ಪ್ರಕಟಿಸಲಾಯಿತು, ಆದರೆ ತಡೆಯಾಜ್ಞೆ ವಿಧಿಸಲಾಯಿತು. ಹೀಗಾಗಿ, ಅಸ್ವಾಭಾವಿಕ ಅಭಿಪ್ರಾಯ ಹೊರಬಿದ್ದಿದೆ, ನಾನು ಈ ಹೇಳಿಕೆ ನೀಡಬಾರದಿತ್ತು ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಯಾರದೋ ಮೀಸಲಾತಿ ಕಿತ್ತು ಕೊಟ್ಟಿದ್ದಾರೆ, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: ನಂಜಾವಧೂತ ಸ್ವಾಮೀಜಿ

“ಒಂದು ವಿಷಯ ನಿರ್ದಿಷ್ಟ ನ್ಯಾಯಾಧೀಶರನ್ನು ತಲುಪಿದ್ದರೂ ಸಹ, ನಾನು ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ. ಆದರೆ, ಈ ವಿಳಂಬದಿಂದ ಸಾವಿರಾರು ಜನರು ತೊಂದರೆಗೀಡಾಗಿದ್ದಾರೆ. ಅವರ ತರಬೇತಿಗೆ ಸಾಕಷ್ಟು ಸಮಯ ಸಿಗುತ್ತಿಲ್ಲ. ನಿನ್ನೆಯ ಸಾರ್ವಜನಿಕ ಸಭೆಗೆ, ತಮ್ಮ ಕೆಲಸಕ್ಕೆ ಸೇರಲು ಸಾಧ್ಯವಾಗದ ಅಂತಹ ಜನರೆಲ್ಲರೂ ಬಂದಿದ್ದರು. ಹೀಗಾಗಿ, ಅಸ್ವಾಭಾವಿಕ ಹೇಳಿಕೆ ನೀಡಲಾಯಿತು. ಅದಕ್ಕಾಗಿ ನಾನು ವಿಷಾದಿಸುತ್ತೇನೆ” ಎಂದು ಕಟ್ಟರ್‌ ಸ್ಪಷ್ಟಪಡಿಸಿದ್ದಾರೆ.

ಖಟ್ಟರ್ ಅವರ ವೀಡಿಯೊ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಕಾಂಗ್ರೆಸ್ ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರತಿಕ್ರಿಯಿಸಿ, “ಇದು ನ್ಯಾಯಾಂಗದ ಮೇಲಿನ ನೇರ ದಾಳಿ” ಎಂದು ಟೀಕಿಸಿದರು.

ಖಟ್ಟರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, “ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ), ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಈ ವಿಷಯವನ್ನು ಅರಿತುಕೊಳ್ಳಬೇಕು. ಹರಿಯಾಣ ಮುಖ್ಯಮಂತ್ರಿಗೆ ನಿಂದನೆ ನೋಟಿಸ್ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

“ಆಯೋಗವು 833 ಅಭ್ಯರ್ಥಿಗಳ ಬಯೋಮೆಟ್ರಿಕ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಅಧ್ಯಕ್ಷರು ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೆ, ಜೂನ್ 2019ರಲ್ಲಿ ಪ್ರಾರಂಭವಾದ ನೇಮಕಾತಿ ಇನ್ನೂ ಏಕೆ ಪೂರ್ಣಗೊಂಡಿಲ್ಲ ಎಂಬುದನ್ನು ಸರ್ಕಾರವು ವಿವರಿಸಲು ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿಗಳು ಎಲ್ಲದ್ದಕ್ಕೂ ನ್ಯಾಯಾಧೀಶರನ್ನು ದೂಷಿಸುವುದು ಸರಿಯೇ? ಸುಮಾರು ನಾಲ್ಕು ವರ್ಷಗಳಿಂದ ನೇಮಕಾತಿ ಪೂರ್ಣಗೊಳ್ಳದಿರುವುದು ಯಾರ ತಪ್ಪೆಂದು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...