Homeಕರ್ನಾಟಕ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?': ಇದ್ರೀಶ್ ಹತ್ಯೆಗೆ ಎಚ್‌ಡಿಕೆ...

‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

- Advertisement -
- Advertisement -

ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ನಡೆಸಿದ್ದಾರೆ ಎನ್ನಲಾದ ಇದ್ರೀಶ್‌ ಪಾಷ ಅವರ ಹತ್ಯೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, “ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ?” ಎಂದು ಪ್ರಶ್ನಿಸಿದ್ದಾರೆ.

“ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

“ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ” ಎಂದು ಒತ್ತಾಯಿಸಿದ್ದಾರೆ.

“ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ?” ಎಂದು ಕೇಳಿದ್ದಾರೆ.

“ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...