Homeಮುಖಪುಟಜಾರ್ಖಂಡ್‌: ಗುಂಡಿನ ಚಕಮಕಿಯಲ್ಲಿ ಐವರು ಮಾವೋವಾದಿಗಳ ಹತ್ಯೆ

ಜಾರ್ಖಂಡ್‌: ಗುಂಡಿನ ಚಕಮಕಿಯಲ್ಲಿ ಐವರು ಮಾವೋವಾದಿಗಳ ಹತ್ಯೆ

- Advertisement -
- Advertisement -

ಸೋಮವಾರ ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಹತ್ಯೆಯಾದವರಲ್ಲಿ ಮಾವೋವಾದಿ ವಿಶೇಷ ಪ್ರದೇಶ ಸಮಿತಿ ಸದಸ್ಯ ಗೌತಮ್ ಪಾಸ್ವಾನ್ ಮತ್ತು ಉಪ ವಲಯದ ಕಮಾಂಡರ್‌ಗಳಾದ ಅಮರ್ ಗ್ಂಜು, ನಂದು, ಸಂಜೀವ್ ಭುಯಾನ್ ಇದ್ದಾರೆ. ಒಬ್ಬರನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ತಿಳಿಸಿದೆ.

ವಿಶೇಷ ಪ್ರದೇಶ ಸಮಿತಿಗೆ ಅಧಿಕಾರಿಗಳು 25 ಲಕ್ಷ ರೂಪಾಯಿ ಇನಾಮು ಘೋಷಿಸಿದ್ದರೆ, ಉಪ ವಲಯ ಕಮಾಂಡರ್‌ಗಳಿಗೆ ತಲಾ 5 ಲಕ್ಷ ರೂಪಾಯಿ ಇನಾಮು ಇತ್ತು.

ಎರಡು AK-47, ಒಂದು INSAS ರೈಫಲ್ ಮತ್ತು ಎರಡು ಸಾಮಾನ್ಯ ರೈಫಲ್‌ಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ರಂಜನ್ ತಿಳಿಸಿದ್ದಾರೆ.

ಛತ್ರಾ ಜಿಲ್ಲೆಯ ಕಾಡಿನಲ್ಲಿ ಕೆಲವು ಮಾವೋವಾದಿ ಕಮಾಂಡರ್‌ಗಳು ಇದ್ದಾರೆ ಎಂದು ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದರ ಬೆನ್ನಲ್ಲೇ ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಜಾರ್ಖಂಡ್ ಸಶಸ್ತ್ರ ಪೊಲೀಸರು ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಲಾವಾಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಾ-ಪಾಲಮು ಗಡಿಯಲ್ಲಿ ಎನ್‌ಕೌಂಟರ್ ನಡೆದಿದೆ.

“ಛತ್ರಾ ಮತ್ತು ಗಯಾ (ಪಕ್ಕದ ಬಿಹಾರದ) ಪ್ರದೇಶಗಳನ್ನು ನಕ್ಸಲ್ ಅಂಶಗಳಿಂದ ಮುಕ್ತಗೊಳಿಸಲಾಗಿದೆ. ಇದು ಪೊಲೀಸರಿಗೆ ದೊಡ್ಡ ಸಾಧನೆಯಾಗಿದೆ. ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾದ ಕಾರ್ಯಾಚರಣೆ ಮುಂದುವರೆದಿದೆ. ಇದೀಗ ಹುಡುಕಾಟ ನಡೆಯುತ್ತಿದೆ” ರಾಜ್ಯ ಡಿಜಿಪಿ ಅಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿರಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

ಭದ್ರತಾ ಪಡೆಯಲ್ಲಿದ್ದವರಿಗೆ ಗಾಯಗಳಾಗಿವೆಯೇ ಎಂದು ಪ್ರಶ್ನಿಸಿದಾಗ, “ಯಾರೂ ಗಾಯಗೊಂಡಿಲ್ಲ, ಮಾವೋವಾದಿ ಬಣದ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ, ಆತನನ್ನು ಗ್ಯಾಂಗ್ ಸದಸ್ಯರು ಕರೆದೊಯ್ದಿದ್ದಾರೆಂದು ತೋರುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ ಮಾವೋವಾದಿಗಳ ಮೇಲೆ ರೈಡ್ ಮಾಡಲಾಯಿತು. ಜಂಟಿ ಕಾರ್ಯಾಚರಣೆಯಲ್ಲಿ ಪ್ರಮುಖ ಶಿಬಿರವನ್ನು ಧ್ವಂಸಗೊಳಿಸಲಾಗಿದೆ ಎಂದಿದ್ದಾರೆ.

ಗುಂಡಿನ ಚಕಮಕಿ ನಡೆದ ಪ್ರದೇಶಕ್ಕೆ ಸಮೀಪವಿರುವ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ ಎಂದು ಪಲಾಮು ಡಿಐಜಿ ರಾಜ್‌ಕುಮಾರ್ ಲಾಕ್ರಾ ಅವರು ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...