Homeಮುಖಪುಟಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

- Advertisement -
- Advertisement -

ಚೀನಾ ದೇಶವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿ, ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಮೂರನೇ ಸೆಟ್ ಹೆಸರುಗಳನ್ನು ಬಿಡುಗಡೆ ಮಾಡಿ ವಿವಾದ ಸೃಷ್ಟಿಸಿದೆ.

ಅರುಣಾಚಲ ಪ್ರದೇಶದ ಕೆಲವು ಭಾಗಗಳು ದಕ್ಷಿಣ ಟಿಬೆಟ್‌ನಲ್ಲಿವೆ ಎಂದು ಪ್ರತಿಪಾದಿಸಿ ಈ 11 ಸ್ಥಳಗಳೊಂದಿಗೆ ಚೀನಾ ನಕ್ಷೆಯನ್ನು ಬಿಡುಗಡೆ ಮಾಡಿದೆ, ಇದನ್ನು ಚೀನಾ, ‘ಝಂಗ್ನಾನ್ ಪ್ರದೇಶ’ ಎಂದು ಉಲ್ಲೇಖಿಸಿದೆ. ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಸಮೀಪವಿರುವ ಪಟ್ಟಣವನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಹೆಸರಿಸಲಾದ 11 ಸ್ಥಳಗಳಲ್ಲಿ ಐದು ಪರ್ವತ ಶಿಖರಗಳು, ಎರಡು ವಸತಿ ಪ್ರದೇಶಗಳು, ಎರಡು ಭೂ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಚೀನಾ ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳಲು ಯತ್ನಿಸಿರುವ ಈ ಭೌಗೋಳಿಕ ಪ್ರದೇಶವನ್ನು ಮೊದಲಿನಿಂದಲೂ ಭಾರತ ನಿಯಂತ್ರಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ.

ಸ್ಥಳಗಳನ್ನು ಮರುಹೆಸರಿಸಲು ಪ್ರಯತ್ನಿಸುತ್ತಿರುವ ಚೀನಾವು ಅಂತಹ ಪಟ್ಟಿಯನ್ನು ಹೈಲೈಟ್ ಮಾಡಿದ್ದು, ಅವುಗಳನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದುಕೊಂಡಿದೆ.

2017ರಲ್ಲಿ ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಇದೇ ರೀತಿಯ ಆರು ಸ್ಥಳಗಳ ಪಟ್ಟಿಯನ್ನು ಹೊರತಂದಿತ್ತು; 2021ರಲ್ಲಿ ಮರುಹೆಸರಿಸಿದ 15 ಸ್ಥಳಗಳ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿತ್ತು.

ಇತ್ತೀಚಿನ ನಾಮಕರಣವನ್ನು ಏಪ್ರಿಲ್ 2 ರಂದು ಅಧಿಸೂಚನೆಯ ಮೂಲಕ ಮಾಡಲಾಗಿದೆ. “ಭೌಗೋಳಿಕ ಹೆಸರುಗಳ ನಿರ್ವಹಣೆಯ ರಾಜ್ಯ ಕೌನ್ಸಿಲ್‌ನ ಸಂಬಂಧಿತ ನಿಬಂಧನೆಗಳ ಪ್ರಕಾರ, [ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ] ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ದಕ್ಷಿಣ ಟಿಬೆಟ್‌ನ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಲಾಗಿದೆ. ದಕ್ಷಿಣ ಟಿಬೆಟ್‌ನಲ್ಲಿ (ಒಟ್ಟು 11) ಸಾರ್ವಜನಿಕ ಬಳಕೆಗಾಗಿ ಪೂರಕವಾಗಿ ಸ್ಥಳನಾಮಗಳ ಮೂರನೇ ಪಟ್ಟಿಯನ್ನು ಈಗ ಅಧಿಕೃತವಾಗಿ ಘೋಷಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ.

“ಚೀನಾ ನೀಡಿರುವ ಪ್ರಕಟಣೆಯ ಕುರಿತು ಪ್ರತಿಕ್ರಿಯೆ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಪಡೆದಿಲ್ಲ. ಆದರೆ ಹಿಂದೆ ಇದೇ ರೀತಿಯ ಮರುನಾಮಕರಣ ಮತ್ತು ಪ್ರಮಾಣೀಕರಣ ಪ್ರಯತ್ನಗಳು ನಡೆದಿರುವುದನ್ನು ಸಚಿವಾಲಯ ತಿರಸ್ಕರಿಸಿದೆ” ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

“ಅರುಣಾಚಲ ಪ್ರದೇಶವು ಎಂದಿಗೂ ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡುವುದರಿಂದ ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ವಕ್ತಾರ ಅರಿಂದಮ್ ಬಾಗ್ಚಿ 2021 ರಲ್ಲಿ ಹೇಳಿದ್ದರು.

2017 ಮತ್ತು 2021 ರಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಪ್ರತಿಕ್ರಿಯೆಯನ್ನು ನೀಡಿತ್ತು. ‘“ಝಂಗ್ನಾನ್ ಪ್ರದೇಶ’ ಎಂದು ಕರೆಯಲ್ಪಡುವ ಪ್ರದೇಶ ಚೀನಾಕ್ಕೆ ಸೇರಿದೆ. ಇದು ಐತಿಹಾಸಿಕ ಮತ್ತು ಆಡಳಿತಾತ್ಮಕ ಆಧಾರ” ಎಂದಿತ್ತು.

ಇದನ್ನೂ ಓದಿರಿ: ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಡೋಕ್ಲಾಮ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದರು. ಅದೇ ವರ್ಷದಲ್ಲಿ ಮೊದಲ ಪಟ್ಟಿಯ ಪ್ರಕಟಣೆ ಹೊರಬಿದ್ದಿದ್ದು ಗಮನಿಸಬೇಕಾದ ಸಂಗತಿ. ಆದರೆ ಎರಡನೇ ಪಟ್ಟಿ ಮತ್ತು ಇತ್ತೀಚಿನದು ಭಾರತೀಯ ಸೇನೆ ಹಾಗೂ ಪಿಎಲ್‌ಎ ಪಡೆಗಳ ನಡುವಿನ ಎಲ್‌ಎಸಿ ಬಿಕ್ಕಟ್ಟು ಪ್ರಾರಂಭವಾದ ನಂತರ ಹೊರಬಂದಿದೆ. ಹಲವಾರು ಸುತ್ತಿನ ಅಧಿಕೃತ ಮಾತುಕತೆಗಳು ಮತ್ತು ಮಿಲಿಟರಿ ಕಮಾಂಡರ್-ಮಟ್ಟದ ಮಾತುಕತೆಗಳ ಹೊರತಾಗಿಯೂ, ಗಡಿಗಳನ್ನು ಚೀನಾ ಉಲ್ಲಂಘಿಸಿರುವ ವರದಿಗಳಾಗಿವೆ.

ಚೀನಾ ಮತ್ತು ಭಾರತದ ನಡುವೆ ಉಂಟಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, “ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ” ಎಂದಿದ್ದರು.

“ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...