Homeಮುಖಪುಟಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ನಕ್ಷೆ ಬಿಡುಗಡೆ

- Advertisement -
- Advertisement -

ಚೀನಾ ದೇಶವು ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಮರುನಾಮಕರಣ ಮಾಡಿ, ಚೈನೀಸ್, ಟಿಬೆಟಿಯನ್ ಮತ್ತು ಪಿನ್ಯಿನ್ ಅಕ್ಷರಗಳಲ್ಲಿ ಮೂರನೇ ಸೆಟ್ ಹೆಸರುಗಳನ್ನು ಬಿಡುಗಡೆ ಮಾಡಿ ವಿವಾದ ಸೃಷ್ಟಿಸಿದೆ.

ಅರುಣಾಚಲ ಪ್ರದೇಶದ ಕೆಲವು ಭಾಗಗಳು ದಕ್ಷಿಣ ಟಿಬೆಟ್‌ನಲ್ಲಿವೆ ಎಂದು ಪ್ರತಿಪಾದಿಸಿ ಈ 11 ಸ್ಥಳಗಳೊಂದಿಗೆ ಚೀನಾ ನಕ್ಷೆಯನ್ನು ಬಿಡುಗಡೆ ಮಾಡಿದೆ, ಇದನ್ನು ಚೀನಾ, ‘ಝಂಗ್ನಾನ್ ಪ್ರದೇಶ’ ಎಂದು ಉಲ್ಲೇಖಿಸಿದೆ. ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಸಮೀಪವಿರುವ ಪಟ್ಟಣವನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ.

ಹೆಸರಿಸಲಾದ 11 ಸ್ಥಳಗಳಲ್ಲಿ ಐದು ಪರ್ವತ ಶಿಖರಗಳು, ಎರಡು ವಸತಿ ಪ್ರದೇಶಗಳು, ಎರಡು ಭೂ ಪ್ರದೇಶಗಳು ಮತ್ತು ಎರಡು ನದಿಗಳು ಸೇರಿವೆ. ಚೀನಾ ತನ್ನ ವ್ಯಾಪ್ತಿಗೆ ಸೇರಿಸಿಕೊಳ್ಳಲು ಯತ್ನಿಸಿರುವ ಈ ಭೌಗೋಳಿಕ ಪ್ರದೇಶವನ್ನು ಮೊದಲಿನಿಂದಲೂ ಭಾರತ ನಿಯಂತ್ರಿಸುತ್ತಿದೆ ಮತ್ತು ನಿರ್ವಹಿಸುತ್ತಿದೆ.

ಸ್ಥಳಗಳನ್ನು ಮರುಹೆಸರಿಸಲು ಪ್ರಯತ್ನಿಸುತ್ತಿರುವ ಚೀನಾವು ಅಂತಹ ಪಟ್ಟಿಯನ್ನು ಹೈಲೈಟ್ ಮಾಡಿದ್ದು, ಅವುಗಳನ್ನು ‘ಪ್ರಮಾಣೀಕೃತ ಭೌಗೋಳಿಕ ಹೆಸರುಗಳು’ ಎಂದು ಕರೆದುಕೊಂಡಿದೆ.

2017ರಲ್ಲಿ ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಇದೇ ರೀತಿಯ ಆರು ಸ್ಥಳಗಳ ಪಟ್ಟಿಯನ್ನು ಹೊರತಂದಿತ್ತು; 2021ರಲ್ಲಿ ಮರುಹೆಸರಿಸಿದ 15 ಸ್ಥಳಗಳ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿತ್ತು.

ಇತ್ತೀಚಿನ ನಾಮಕರಣವನ್ನು ಏಪ್ರಿಲ್ 2 ರಂದು ಅಧಿಸೂಚನೆಯ ಮೂಲಕ ಮಾಡಲಾಗಿದೆ. “ಭೌಗೋಳಿಕ ಹೆಸರುಗಳ ನಿರ್ವಹಣೆಯ ರಾಜ್ಯ ಕೌನ್ಸಿಲ್‌ನ ಸಂಬಂಧಿತ ನಿಬಂಧನೆಗಳ ಪ್ರಕಾರ, [ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ] ಸಂಬಂಧಿತ ಇಲಾಖೆಗಳೊಂದಿಗೆ ಸೇರಿ ದಕ್ಷಿಣ ಟಿಬೆಟ್‌ನ ಕೆಲವು ಭೌಗೋಳಿಕ ಹೆಸರುಗಳನ್ನು ಪ್ರಮಾಣೀಕರಿಸಲಾಗಿದೆ. ದಕ್ಷಿಣ ಟಿಬೆಟ್‌ನಲ್ಲಿ (ಒಟ್ಟು 11) ಸಾರ್ವಜನಿಕ ಬಳಕೆಗಾಗಿ ಪೂರಕವಾಗಿ ಸ್ಥಳನಾಮಗಳ ಮೂರನೇ ಪಟ್ಟಿಯನ್ನು ಈಗ ಅಧಿಕೃತವಾಗಿ ಘೋಷಿಸಲಾಗಿದೆ” ಎಂದು ಅಧಿಸೂಚನೆ ತಿಳಿಸಿದೆ.

“ಚೀನಾ ನೀಡಿರುವ ಪ್ರಕಟಣೆಯ ಕುರಿತು ಪ್ರತಿಕ್ರಿಯೆ ಪಡೆಯಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಲಾಗಿದೆ. ಆದರೆ ಯಾವುದೇ ಪ್ರತಿಕ್ರಿಯೆ ಪಡೆದಿಲ್ಲ. ಆದರೆ ಹಿಂದೆ ಇದೇ ರೀತಿಯ ಮರುನಾಮಕರಣ ಮತ್ತು ಪ್ರಮಾಣೀಕರಣ ಪ್ರಯತ್ನಗಳು ನಡೆದಿರುವುದನ್ನು ಸಚಿವಾಲಯ ತಿರಸ್ಕರಿಸಿದೆ” ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

“ಅರುಣಾಚಲ ಪ್ರದೇಶವು ಎಂದಿಗೂ ಮತ್ತು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೊಸ ಹೆಸರುಗಳನ್ನು ನೀಡುವುದರಿಂದ ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ವಕ್ತಾರ ಅರಿಂದಮ್ ಬಾಗ್ಚಿ 2021 ರಲ್ಲಿ ಹೇಳಿದ್ದರು.

2017 ಮತ್ತು 2021 ರಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ತನ್ನ ಪ್ರತಿಕ್ರಿಯೆಯನ್ನು ನೀಡಿತ್ತು. ‘“ಝಂಗ್ನಾನ್ ಪ್ರದೇಶ’ ಎಂದು ಕರೆಯಲ್ಪಡುವ ಪ್ರದೇಶ ಚೀನಾಕ್ಕೆ ಸೇರಿದೆ. ಇದು ಐತಿಹಾಸಿಕ ಮತ್ತು ಆಡಳಿತಾತ್ಮಕ ಆಧಾರ” ಎಂದಿತ್ತು.

ಇದನ್ನೂ ಓದಿರಿ: ಪೂರ್ವ ಲಡಾಖ್‌ನ ಎಲ್‌ಎಸಿನಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ: ವಿದೇಶಾಂಗ ಸಚಿವ ಜೈಶಂಕರ್‌‌

ಡೋಕ್ಲಾಮ್‌ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದರು. ಅದೇ ವರ್ಷದಲ್ಲಿ ಮೊದಲ ಪಟ್ಟಿಯ ಪ್ರಕಟಣೆ ಹೊರಬಿದ್ದಿದ್ದು ಗಮನಿಸಬೇಕಾದ ಸಂಗತಿ. ಆದರೆ ಎರಡನೇ ಪಟ್ಟಿ ಮತ್ತು ಇತ್ತೀಚಿನದು ಭಾರತೀಯ ಸೇನೆ ಹಾಗೂ ಪಿಎಲ್‌ಎ ಪಡೆಗಳ ನಡುವಿನ ಎಲ್‌ಎಸಿ ಬಿಕ್ಕಟ್ಟು ಪ್ರಾರಂಭವಾದ ನಂತರ ಹೊರಬಂದಿದೆ. ಹಲವಾರು ಸುತ್ತಿನ ಅಧಿಕೃತ ಮಾತುಕತೆಗಳು ಮತ್ತು ಮಿಲಿಟರಿ ಕಮಾಂಡರ್-ಮಟ್ಟದ ಮಾತುಕತೆಗಳ ಹೊರತಾಗಿಯೂ, ಗಡಿಗಳನ್ನು ಚೀನಾ ಉಲ್ಲಂಘಿಸಿರುವ ವರದಿಗಳಾಗಿವೆ.

ಚೀನಾ ಮತ್ತು ಭಾರತದ ನಡುವೆ ಉಂಟಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ‘ಇಂಡಿಯಾ ಟುಡೇ’ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, “ಪೂರ್ವ ಲಡಾಖ್‌ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯು ಬಹಳ ಸೂಕ್ಷ್ಮವೂ, ಸಾಕಷ್ಟು ಅಪಾಯಕಾರಿಯೂ ಆಗಿ ಉಳಿದಿದೆ” ಎಂದಿದ್ದರು.

“ಎರಡೂ ದೇಶಗಳ ಮಿಲಿಟರಿ ಪಡೆಗಳು ಕೆಲವು ಭಾಗಗಳಲ್ಲಿ ಪರಸ್ಪರ ಹತ್ತಿರದಲ್ಲಿ ನಿಯೋಜಿಸಲ್ಪಟ್ಟಿವೆ. ಹೀಗಾಗಿ ಪರಿಸ್ಥಿತಿ ಸೂಕ್ಷ್ಮವೂ ಅಪಾಯಕಾರಿಯೂ ಆಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...