Homeಮುಖಪುಟಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ - ರಾಮನಗರ ಎಸ್‌ಪಿ

ಇದ್ರೀಸ್ ಪಾಶ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ – ರಾಮನಗರ ಎಸ್‌ಪಿ

- Advertisement -
- Advertisement -

ಇದ್ರೀಸ್‌ ಸಾವು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕುಕ ತಂಡಗಳನ್ನು ರಚಿಸಿದ್ದೇವೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಸಾತನೂರು ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದರು. ಆನಂತರ ಡ್ರೈವರ್ ಸಯ್ಯದ್ ಜಮೀರ್ ತಮನ್ನು ಅಡ್ಡಗಟ್ಟಿ ಹಿಂಸೆ ನೀಡಿದ್ದಾರೆ ಎಂದು ದೂರು ನೀಡಿದ್ದರು. ಶನಿವಾರ ಕೊಲೆಯಾದ ಇದ್ರೀಸ್ ಸಹೋದರ ಯೂನುಸ್‌ ಪಾಷ ದೂರು ನೀಡಿದ್ದಾರೆ. ಮೂರು ದೂರನ್ನು ಆಧರಿಸಿ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.

“ಇದ್ರೀಸ್‌ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ, ಎಫ್‌ಎಸ್‌ಎಲ್ ವರದಿ ಬಂದ ಬಳಿಕವಷ್ಟೇ ಗೊತ್ತಾಗುತ್ತದೆ. ಪ್ರಕರಣದ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಯಾವುದೇ ರಾಜಕೀಯ ಒತ್ತಡವಿಲ್ಲ. ಕನಕಪುರದ ವೈದ್ಯರ ತಂಡವು ಇದ್ರೀಸ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ಎಸ್‌ಎಲ್‌ ವರದಿಯನ್ನೂ ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಫೇಸ್‌ಬುಕ್‌ ಲೈವ್ ಬಂದಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಫೇಸ್‌ಬುಕ್‌ನಲ್ಲಿ ಬಂದಿರಬಹುದು. ಆದರೆ ಈಗ ತಲೆ ಮರೆಸಿಕೊಂಡಿದ್ದಾರೆ. ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರ ಬಂಧನಕ್ಕೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಆರೋಪಿಯು ಇನ್ನೂ ಪತ್ತೆಯಾಗಿಲ್ಲ. ಆತನಿಗಾಗಿ ಶೋಧಕಾರ್ಯ ನಡೆಸಿದ್ದೇವೆ” ಎಂದಿದ್ದಾರೆ.

ಇನ್ನೊಂದೆಡೆ ನಾನು ತಲೆ ಮರೆಸಿಕೊಂಡಿಲ್ಲ. ಮಾಹಿತಿ ಬಂದರೆ ನಾನೇ ಖುದ್ದು ಪೊಲೀಸರ ಮುಂದೆ ಹಾಜರಾಗುತ್ತೇನೆ ಎಂದು ಪುನೀತ್ ಕೆರೆಹಳ್ಳಿ ವಿಡಿಯೋ ಒಂದರಲ್ಲಿ ಹೇಳಿದ್ದಾನೆ.

ಫೇಸ್‌ಬುಕ್‌ನಲ್ಲಿ ವಿಡಿಯೋ ಅಪ್‌ಲೋಡ್‌ ಮಾಡಿರುವ ಪುನೀತ್‌ ಕೆರೆಹಳ್ಳಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದಾನೆ. “ಇದ್ರೀಸ್‌ ಪಾಷ ಸಾವಿನ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ನನಗೆ ನ್ಯಾಯ ಬೇಕು. ನಾನು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ.

“ನಾನು ಕೆಲವು ದಿನಗಳಿಂದ ದೇವಸ್ಥಾನಗಳಿಗೆ ಭೇಟಿ ನಿಡುತ್ತಿದ್ದೆ. ಆ ಕಾರಣದಿಂದ ನನ್ನ ಮೊಬೈಲ್ ಸ್ವಿಚ್‌ ಆಫ್‌ ಆಗಿತ್ತು. ಈಗ ಮೊಬೈಲ್‌ ಆನ್‌ ಮಾಡಿದ ಬಳಿಕ ರಾಜಕೀಯ ಮುಖಂಡರು ನೀಡಿರುವ ಹೇಳಿಕೆಗಳು, ಅನೇಕರೂ ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮಾಡಿರುವ ಪೋಸ್ಟ್‌ಗಳನ್ನು ಗಮನಿಸಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ. ನಾನು ತಲೆ ಮರೆಸಿಕೊಂಡಿಲ್ಲ” ಎಂದು ಹೇಳಿದ್ದಾನೆ.

“ಶುಕ್ರವಾರ ಮಧ್ಯರಾತ್ರಿ 11.59 ರಿಂದ ನಾನು ಘಟನೆಯನ್ನು ಫೇಸ್‌ಬುಕ್‌ ಲೈವ್‌ ಮಾಡಿದ್ದೇನೆ. ಶನಿವಾರ ಬೆಳಗ್ಗೆ 5ಕ್ಕೆ ಮಠಕ್ಕೆ ಹಸುಗಳನ್ನು ಬಿಡುವವರೆಗೂ ನಾನು ಪೊಲೀಸರ ಜೊತೆಯಲ್ಲೇ ಇದ್ದೆ. ನಾವು ಯಾರನ್ನೂ ಹತ್ಯೆ ಮಾಡಿಲ್ಲ. ಮರಣೋತ್ತರ ಪರೀಕ್ಷೆ ವರದಿಯೇ ಇದಕ್ಕೆ ಉತ್ತರ ನೀಡಲಿದೆ” ಎಂದು ಸಮರ್ಥಿಸಿಕೊಂಡಿದ್ದಾನೆ.

“ನಾನು ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ” ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ; ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರನ್ನು ಬಂಧಿಸಿ: ಹೆಚ್ಚಿದ ಒತ್ತಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...