Homeಕರ್ನಾಟಕ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

- Advertisement -
- Advertisement -

“ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಇಲ್ಲ” ಎಂದು ರಾಮನಗರ ಎಂಎಲ್‌ಎ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ರೀತಿಯಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

“ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ” ಎಂದಿದ್ದಾರೆ.

“2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ” ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

“2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ” ಎಂದಿರುವ ಅವರು, “ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

“ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಅವರು ಮನವಿ ಮಾಡಿದ್ದಾರೆ.

“ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...