Homeಕರ್ನಾಟಕ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

- Advertisement -
- Advertisement -

“ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಇಲ್ಲ” ಎಂದು ರಾಮನಗರ ಎಂಎಲ್‌ಎ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ರೀತಿಯಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

“ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ” ಎಂದಿದ್ದಾರೆ.

“2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ” ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

“2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ” ಎಂದಿರುವ ಅವರು, “ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

“ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಅವರು ಮನವಿ ಮಾಡಿದ್ದಾರೆ.

“ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...