Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...