Homeಮುಖಪುಟಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ?

ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ದರ್ಶನ್-ಸುದೀಪ್ ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ ಎಂದು ಕೆ.ಪಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಕೇವಲ ಒಂದು ತಿಂಗಳು ಇರುವಾಗ ಕನ್ನಡದ ಖ್ಯಾತ ನಟರಾದ ದರ್ಶನ್ ತೂಗುದೀಪ ಮತ್ತು ಸುದೀಪ್ ಬಿಜೆಪಿ ಪಕ್ಷ ಸೇರುತ್ತಾರೆ ಎಂಬ ವರದಿಗಳು ಪ್ರಕಟವಾಗುತ್ತಿವೆ. ಹಾಗಾಗಿ ಚುನಾವಣೆ ಸಮಯದಲ್ಲಿ ಸಿನಿಮಾ ನಟರು ರಾಜಕಾರಣಕ್ಕೆ ಬರುವುದು ಎಷ್ಟು ಸರಿ ಎಂಬ ಚರ್ಚೆಗಳು ಸಹ ಆರಂಭವಾಗಿವೆ.

ಕೆಲ ತಿಂಗಳ ಹಿಂದೆ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗಳು ಆರಂಭವಾಗಿದ್ದವು. ಆದರೆ ತನಿಖಾ ಸಂಸ್ಥೆಗಳ ಬೆದರಿಕೆಯಿಂದ ಅವರು ಬಿಜೆಪಿ ಸೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಖ್ಯಾತ ಬಹುಭಾಷ ನಟ ಪ್ರಕಾಶ್ ರಾಜ್ ಇದು ಸುಳ್ಳು ಸುದ್ದಿ ಇರಬೇಕು ಎಂದಿದ್ದಾರೆ. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಚಿಂತಕ ಕೆ.ಪಿ ಸುರೇಶ್‌ರವರು ದರ್ಶನ್ ಮತ್ತು ಸುದೀಪ್‌ರವರಿಗೆ ಬಹಿರಂಗ ಪತ್ರ ಬರೆದಿದ್ದು ಡಾ.ರಾಜ್‌ಕುಮಾರ್ ಪರಂಪರೆಗೆ ಅವಮಾನ ಮಾಡಬೇಡಿ ಎಂದಿದ್ದಾರೆ. ಅದರ ಪೂರ್ಣ ಪಾಠ ಈ ಕೆಳಗಿನಂತಿದೆ.

“ಸುದೀಪ್- ದರ್ಶನ್ ಅವರೇ, ಅಣ್ಣಾವ್ರು ತೋರಿದ ನೈತಿಕ ಹಾದಿಗೆ ಅಪಚಾರವೆಸಗಬೇಡಿ

ಕನ್ನಡದ ಹೆಮ್ಮೆಯ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಭಾಜಪ ಸೇರುತ್ತಿರುವ ಸುದ್ದಿ ಬಂದಿದೆ.
ಇದರ ಹಿಂದೆ, ED ಬೆದರಿಕೆ ಇದೆಯೋ ಗೊತ್ತಿಲ್ಲ. ತೆರೆಯ ಮೇಲೆ ಸುಪರ್ ಮ್ಯಾನ್ ಆಗುವ ನಟರು ನಿಜ ಜೀವನದಲ್ಲಿ ಪ್ರಭುತ್ವದ ನೆರಳಿಗೇ ಬೆದರುವುದಿದೆ.

ಆದರೆ ಕನ್ನಡದ ಕಲಾವಿದರಿಗೊಂದು ಧೀಮಂತ ಹಾದಿಯನ್ನು ಡಾ. ರಾಜಕುಮಾರ್, ಮತ್ರು ಅವರ ಮಗ ಅಪ್ಪು ಹಾಕಿಕೊಟ್ಟಿದ್ದಾರೆ. ಕನ್ನಡದ ನಾಡು ನುಡಿಯ ಪರವಾಗಿ ಬೀದಿಗಳಿದು ಜನ ಜಾಗೃತಿ ಮಾಡಿದ ಅಣ್ಣಾವ್ರು , ಯಾವ ರಾಜಕೀಯ ಪಕ್ಷಕ್ಕೂ ಸೇರಲಿಲ್ಲ. ಬೆಂಬಲಿಸಲೂ ಇಲ್ಲ.

“ಅಭಿಮಾನಿ ದೇವರುಗಳು ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಅವರಿಗೆ ಅಪಚಾರ ಮಾಡಲಾರೆ” ಎಂಬ ಖಚಿತ ನಿಲುವು ಅಣ್ಣಾವರಿಗಿತ್ತು.

60ರ ದಶಕದಲ್ಲಿ ಅನಕೃ, ರಾಮಮೂರ್ತಿ ಮುಂತಾದ ಕನ್ನಡದ ಲೇಖಕರ ಆಶಯಕ್ಕೆ ಮನ್ನಣೆ ಕೊಟ್ಟು ಡಾ. ರಾಜಕುಮಾರ್ ಕನ್ನಡದ ಹಿತಾಸಕ್ತಿಗೆ ಕಂಕಣಬದ್ಧರಾಗಿದ್ದರು. ಕೊನೆ ಉಸಿರಿನ ವರೆಗೂ ಹಾಗೆಯೇ ಇದ್ದರು.
ಈ ಆದರ್ಶ- ಸುದೀಪ್, ದರ್ಶನ್ ಅವರೊಳಗೆ ಇಳಿದಿದ್ದರೆ ಅವರು ಈ ನಿರ್ಧಾರದಿಂದ ಹಿಂದೆ ಸರಿಯಬೇಕು.

ಇದಕ್ಕೆ ಇನ್ನೊಂದು ಆಯಾಮವಿದೆ. ಸ್ವತಃ ತಮ್ಮ ಬೀಗರಾದ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ರಾಜ್ ಕುಮಾರ್ ಅವರು ಜೀವನ ಚೈತ್ರ ಸಿನೆಮಾದಲ್ಲಿ ಹೆಂಡದ ವಿರುದ್ಧ ಸೆಟೆದು ಹೋರಾಡುವ ಪಾತ್ರ ನಿರ್ವಹಿಸಿದ್ದರು.
ಇದು ನೈತಿಕ ನಿಲುವು.

ಕರ್ನಾಟಕದ ಇತಿಹಾಸದಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಕೋಮು ವಿಷ ಹರಡುವ ಕೆಲಸವನ್ನು ಲಜ್ಜೆಗೆಟ್ಟು ಮಾಡಿದ ಪಕ್ಷ ಭಾಜಪ.

ಸ್ವತಃ ದರ್ಶನ್ ಸರಕಾರಿ ಶಾಲೆಗಳ ಇಶ್ಯೂ ಇದ್ದ ಕ್ರಾಂತಿ ಎಂಬ ಸಿನೆಮಾದಲ್ಲಿ ಸೂಪರ್ ಹೀರೋ ಆಗಿ ನಟಿಸಿದ್ದರು. ಆದರೆ ಕನ್ನಡ / ಸರಕಾರಿ ಶಾಲೆಗಳಿಗೆ ಆತ್ಯಂತಿಕ ಕೊಡಲಿಯೇಟು ಕೊಟ್ಟ ಪಕ್ಷ ಭಾಜಪ. ಕನ್ನಡ ಶಿಕ್ಷಣ ಮಾಧ್ಯಮವಾಗದಂತೆ ಸಂಘ ಪರಿವಾರದ ಸಂಸ್ಥೆ ಮೂಲಕ ತಡೆಯೊಡ್ಡಿದ್ದು ಹೌದಷ್ಟೇ.

ಇನ್ನು ಈ ಇಬ್ಬರ ಸಿನೆಮಾಗಳಲ್ಲೂ ಹಿಂದೂ- ಮುಸ್ಲಿಮ್ ಬಾಂಧವ್ಯ ಗಾಢವಾಗಿ ಪ್ರಸ್ತುತಪಡಿಸಿದ ಉದಾಹರಣೆಗಳಿವೆ. ಆದರೆ ಈ ಸರಕಾರ ಹೆಜ್ಜೆ ಹೆಜ್ಜೆಗೆ‌ ಮುಸ್ಲಿಮರನ್ನು ದುಷ್ಟೀಕರಿಸುತ್ತಾ ಮೀಸಲಾತಿಯನ್ನೂ ಕಿತ್ತುಕೊಂಡು ಅವರನ್ನು ಅಂಚಿಗೆ ಸರಿಸುವ ಕೆಲಸ ಮಾಡಿದೆ.

ಉರಿ- ನಂಜು ಸೃಷ್ಟಿ ಸ್ವತಃ ಮಂಡ್ಯದ ನಿರ್ವ್ಯಾಜ ಪ್ರೀತಿ ಪಡೆದಿರುವ ದರ್ಶನ್ ಗೆ ಗೊತ್ತಿರಬಹುದಷ್ಟೇ.
ಹೀಗಿರುವಾಗ ಕರ್ನಾಟಕದ ಜನತೆಗೆ ಪರಮ ಭ್ರಷ್ಟಾಚಾರದ ಮೂಲಕ ದ್ರೋಹ ಬಗೆದಿರುವ ಪಕ್ಷಕ್ಕೆ ಈ ಇಬ್ಬರು ಸೇರುವುದು ರಾಜ್ ಕುಮಾರ್ ಅವರ ಪರಂಪರೆಗೆ ಬಗೆಯುವ ದ್ರೋಹ.

ಈ ಇಬ್ಬರೂ ನೆನಪಿಡಬೇಕಾದ ಇನ್ನೊಂದು ಸತ್ಯವಿದೆ. ಜನಾಗ್ರಹಕ್ಕೆ ತುತ್ತಾಗಿರುವ ಪಕ್ಷಕ್ಕೆ ಈಗ ಸೇರಿದರೆ, ಆ ಪಕ್ಷದೊಂದಿಗೆ ನೀವೂ ಜನರ ತಿರಸ್ಕಾರಕ್ಕೊಳಗಾಗುವುದು ಖಂಡಿತ” ಎಂದು ಕೆ.ಪಿ.ಸುರೇಶ್‌ರವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳು ಕರ್ನಾಟಕಕ್ಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...