Homeಕರ್ನಾಟಕಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಪುನೀತ್ ಕೆರೆಹಳ್ಳಿಯೊಂದಿಗೆ ಇದ್ದ ನಾಲ್ವರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು  ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...