Homeಕರ್ನಾಟಕಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ಪುನೀತ್ ಕೆರೆಹಳ್ಳಿಯೊಂದಿಗೆ ಇದ್ದ ನಾಲ್ವರನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

- Advertisement -
- Advertisement -

ಮಂಡ್ಯದ ವಾಹನ ಚಾಲಕ ಇದ್ರೀಸ್‌ ಪಾಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಇಷ್ಟು ದಿನ ತಲೆ ಮರೆಸಿಕೊಂಡಿದ್ದ ಪುನೀತ್‌ ಕೆರೆಹಳ್ಳಿಯನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ. ಅವನೊಂದಿಗೆ ಇದ್ದ ನಾಲ್ವರು ಸಹಚರರನ್ನು ಸಹ ಬಂಧಿಸಲಾಗಿದೆ.

ಮಾರ್ಚ್ 31ರ ರಾತ್ರಿ ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಆ ಸಂದರ್ಭದಲ್ಲಿ ವಾಹನ ಚಾಲಕ ಇದ್ರೀಸ್ ಪಾಶ ಹತ್ಯೆಯಾಗಿದ್ದರು. ಈ ಕುರಿತು ಪುನೀತ್ ಕೆರೆಹಳ್ಳಿ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 506, 324, 302, 304 ಅಡಿ ಪ್ರಕರಣ ದಾಖಲಿಸಿದ್ದರು. ಆದರೆ ಅಂದಿನಿಂದ ತಲೆ ಮರೆಸಿಕೊಂಡಿದ್ದ ಅವರು ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ ಬಂದು ನಾನು ಕೊಲೆ ಮಾಡಿಲ್ಲ ಎಂದಿದ್ದರು.

ಪ್ರಕರಣದ ಕುರಿತು ಪತ್ರಿಕಾಗೋಷ್ಟಿ ನಡೆಸಿದ್ದ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, “ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ನಾಲ್ಕು ತಂಡಗಳನ್ನು ರಚಿಸಿದ್ದೇವೆ” ಎಂದು ಹೇಳಿದ್ದರು.

ಮಾರ್ಚ್ 27 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ತೆಂಡೇಕೆರೆ ದನದ ಸಂತೆಯಲ್ಲಿ ಖರೀದಿಸಿದ ರಾಸುಗಳನ್ನು ಮಾರ್ಚ್ 31 ರ ರಾತ್ರಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಂತೆಗಳಿಗೆ ಕೊಂಡೊಯ್ಯುತ್ತಿರುವಾಗ ಅವರನ್ನು ರಾಮನಗರ ಜಿಲ್ಲೆಯ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಗ್ಯಾಂಗ್ ತಡೆದಿದೆ.  2 ಲಕ್ಷ ಹಣ ಕೊಟ್ಟರೆ ಗಾಡಿ ಬಿಡುತ್ತೇನೆ, ಇಲ್ಲದಿದ್ದರೆ ಬಿಡುವುದಿಲ್ಲ ಎಂದು ಇದ್ರಿಶ್ ಪಾಶ ಸೇರಿ ಅವರ ಜೊತೆಗಿದ್ದ ಇರ್ಫಾನ್ ಮತ್ತು ಸೈಯ್ಯದ್ ಜಹೀರ್ ಎಂಬುವವರಿಗೆ ಬೆದರಿಕೆಯೊಡ್ಡಿದ್ದಾರೆ. ಆದರೆ ಇದ್ರಿಶ್ ಪಾಶ ರಾಸುಗಳನ್ನು ಖರೀದಿಸಿದ ರಶೀದಿಗಳನ್ನು ತೋರಿಸಿ ನಾವು ಕಾನೂನು ಬದ್ಧವಾಗಿ ಖರೀದಿಸಿದ ಗೋವುಗಳನ್ನು ಸಾಗಾಟ ಮಾಡುತ್ತಿದ್ದೇವೆ, ನಿಮಗೆ ಏಕೆ  ಹಣ ಕೊಡಬೇಕೆಂದು  ವಾದಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪುನೀತ್ ಕೆರೆಹಳ್ಳಿ ಗ್ಯಾಂಗ್ ಮಾರಕಾಸ್ತ್ರಗಳಿಂದ ಇದ್ರಿಶ್ ಪಾಶ, ಇರ್ಫಾನ್ ಮತ್ತು ಸಯ್ಯದ್ ಜಹೀರ್ ಮೇಲೆ ತೀವ್ರ ಹಲ್ಲೆ ನಡೆಸಿದೆ.

ಈ ಗಲಾಟೆಯಲ್ಲಿ ಇರ್ಫಾನ್ ತಪ್ಪಿಸಿಕೊಂಡು ಓಡಿದರೆ, ಸಯ್ಯದ್ ಅಂಗಡಿಯ ಬಳಿ ಅವಿತುಕೊಂಡಾಗ ಸಿಕ್ಕಿಬಿದ್ದಿದ್ದಾರೆ. ಆದರೆ ಇದ್ರೀಸ್ ತಪ್ಪಿಸಿಕೊಳ್ಳಲು ಯತ್ನಿಸುವಾಗ ಅವರಿಗೆ ಚಿತ್ರಹಿಂಸೆ ನೀಡಲಾಗಿದೆ. ಎಲೆಕ್ಟ್ರಿಕ್ ಗನ್ ರೀತಿಯ ಸಾಧನದಿಂದ ಕರೆಂಟ್ ಶಾಕ್ ಕೊಟ್ಟಿದ್ದಾರೆ. ಅದು ಮಿತಿ ಮೀರಿದ್ದರಿಂದ ಇದ್ರಿಶ್ ಪಾಶ ಜೀವ ಬಿಟ್ಟಿದ್ದಾರೆ. ಅವರಿಗೆ ನೀಡಿದ ಕಿರುಕುಳದ ಮಾರ್ಕ್‌ಗಳು ಇದ್ರೀಶ್ ದೇಹದ ಮೇಲಿರುವುದನ್ನು ಫೋಟೊಗಳು ದೃಢೀಕರಿಸುತ್ತವೆ ಎಂದು ಇದ್ರೀಸ್ ಪಾಶ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...