Homeಮುಖಪುಟಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

- Advertisement -
- Advertisement -

ಬಸವರಾಜ ಬೊಮ್ಮಾಯಿಯವರನ್ನು ನಾನು ಮಾಮ ಎಂದು ಚಿಕ್ಕ ವಯಸ್ಸಿನಿಂದ ಹಾಗೆ ಕರೆದು ಅಭ್ಯಾಸ ಆಗಿದೆ. ಇದರಲ್ಲಿ ನನ್ನ ನಿಲುವು, ರಾಜಕೀಯ ಇಲ್ಲ. ಚಿತ್ರರಂಗದಲ್ಲಿ ನನ್ನ ಕಷ್ಟದ ದಿನಗಳಲ್ಲಿ ಕೆಲವೇ ಕೆಲವರು ನನ್ನ ಜೊತೆ ನಿಂತಿದ್ದರು. ಅವರಲ್ಲಿ ಮಾಮ ಬಸವರಾಜ ಬೊಮ್ಮಾಯಿಯವರು ಒಬ್ಬರು. ನಾನು ಅವರ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಹೇಳಲು ಪತ್ರಿಕಾಗೋಷ್ಟಿಯಲ್ಲಿ ಇದ್ದೇನೆ ಎಂದು ಸುದೀಪ್ ಹೇಳಿದ್ದಾರೆ.

ನನಗೆ ಗಾಡ್‌ಫಾದರ್ ಯಾರೂ ಇರಲಿಲ್ಲ. ಆಗ ಮಾಮ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದರು. ಅವರು ನನಗೆ ಬೆಂಬಲ ಕೊಟ್ಟಿದ್ದರು. ಈಗ ನಾನು ನನ್ನ ಬೆಂಬಲವನ್ನು ಅವರಿಗೆ ನೀಡಲು ಬಂದಿದ್ದೇನೆ. ನನ್ನ ಕೆಲವು ಸ್ನೇಹಿತರುಗಳಿದ್ದಾರೆ. ಅವರ ಪರವಾಗಿ ನಿಲ್ಲುತ್ತೇನೆ ಎಂದು ಸುದೀಪ್ ಹೇಳಿದರು.

ನನಗೆ ಪಕ್ಷ ಕರೆದಿಲ್ಲ. ಬೊಮ್ಮಾಯಿ ಸರ್ ಕರೆದಿದ್ದಾರೆ. ಅವರ ಪರವಾಗಿ ಬಂದಿದ್ದೇನೆ ಎಂದು ಸುದೀಪ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಮಾಧ್ಯಮಗಳು ಮಾಡಿದ್ದ ಊಹೆ ಸತ್ಯವಾಗಿದೆ. ನಿಮಗೆ ಅಭಿನಂದನೆಗಳು. ಕಿಚ್ಚ ಸುದೀಪ್ ಅವರು ಇವತ್ತು ತಮ್ಮ ವಿಚಾರ ಮತ್ತು ನಿಲುವನ್ನು ಹಂಚಿಕೊಳ್ಳುತ್ತಾರೆ ಎಂದು ಮೊದಲು ಹೇಳಿದ್ದ ಬಸವರಾಜ ಬೊಮ್ಮಾಯಿಯವರು ಆನಂತರ ಅವರು ಯಾವುದೇ ಪಕ್ಷ ಸೇರಿಲ್ಲ. ನನಗೆ ಮೊದಲಿಂದಲೂ ಅವರೊಂದಿಗೆ ಸಂಬಂಧ ಇರುವುದರಿಂದ ಅವರೊಟ್ಟಿಗೆ ಮಾತನಾಡಿ ನಮ್ಮ ಪಕ್ಷ ಸೇರದಿದ್ದರೂ ನಿಮ್ಮ ಪ್ರಚಾರ ಅಗತ್ಯವಿದೆ ಎಂದು ಮನವಿ ಮಾಡಿದ್ದೆ. ಆಗ ಸುದೀಪ್ ರವರು ನಿಮಗೆ ಪ್ರಚಾರ ಮಾಡುತ್ತೇನೆ ಎಂದಿದ್ದರು. ಅದರರ್ಥ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಲವು ಶಕ್ತಿಗಳು ಸೇರಿದರೆ ಒಳ್ಳೆಯದಾಗುತ್ತದೆ ಎಂದರೆ ಮಾಡುತ್ತೇನೆ. ಅವರು ಪಕ್ಷಕ್ಕೆ ಮಾಡಿ ಅಂದರೆ ಅದಕ್ಕೂ ಮಾಡುತ್ತೇನೆ. ಆದರೆ ಇಡೀ ರಾಜ್ಯದಲ್ಲಿ ಮಾಡಲು ಆಗುವುದಿಲ್ಲ. ಎಷ್ಟೊಂದು ಎಸ್‌ಟಿ ಕ್ಷೇತ್ರಗಳು ಇವೆ, ಅಲ್ಲೆಲ್ಲ ಹೋಗಲು ಸಾಧ್ಯವಿಲ್ಲ ಎಂದು ಸುದೀಪ್ ಹೇಳಿದರು.

ಬಸವರಾಜ ಬೊಮ್ಮಾಯಿಯವರು ಯಾವುದೇ ಪಕ್ಷದಲ್ಲಿದ್ದರೂ ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಸುದೀಪ್ ಸ್ಪಷ್ಟಪಡಿಸಿದರು.

ಪ್ರಕಾಶ್‌ ರಾಜ್‌ರವರು ಸುದೀಪ್ ಮಾರಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂಬುದಕ್ಕೆ ಉತ್ತರಿಸಿದ ಅವರು, “ಪ್ರಕಾಶ್ ರಾಜ್‌ರವರು ಅದ್ಭುತ ಕಲಾವಿದರು. ಅವರೊಟ್ಟಿಗೆ ರನ್ನ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮುಂದೆ ಅವರೊಟ್ಟಿಗೆ ಯಾವ ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದೇನೆ” ಎಂದರು.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅನಿವಾರ್ಯಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವುದಾದರೆ ಮೊದಲೇ ಘೋಷಿಸುತ್ತೇನೆ ಎಂದರು.

ಇದನ್ನೂ ಓದಿ; ಯಾವ ಪಕ್ಷದಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ನೇಹಿತರ ಪರ ಪ್ರಚಾರ ಮಾಡುತ್ತೇನೆ ಅಷ್ಟೇ: ಸುದೀಪ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...