Homeಕರ್ನಾಟಕಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

- Advertisement -
- Advertisement -

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಕಿತ್ತು EWS ಕೋಟಾಗೆ ಸೇರಿಸುವ ಮೂಲಕ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲಿನ ಬಿಜೆಪಿ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕೂಡಲೇ ಹಿಂದುಳಿದ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಯ ಅವನತಿ ಖಚಿತ ಎಂದು AISA, ASA, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ, Collective, DVP, GIO, KVS, SIO ಮತ್ತು ಪರಿವರ್ತನ ವಿದ್ಯಾರ್ಥಿ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ SIO ರಾಜ್ಯ ಮುಖಂಡ ಝೀಶಾನ್ ಸಿದ್ದಿಕಿ, “ಕೇಂದ್ರ ಗೃಹ ಮಂತ್ರಿಗಳಾದ ಅಮಿತ್‌ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಮುಸ್ಲಿಂಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ, ಆಂಧ್ರ ಸರ್ಕಾರ ಸಹ ರದ್ದು ಮಾಡಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದಕ್ಕೆ ಕಾರಣ ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ್ದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಕಾರಣಗಳಿಗೆ. ಆದರೆ, ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ. ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಅವರು ಸಾಮಾಜಿಕವಾಗಿ-ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಮೀಸಲಾತಿ ನೀಡಲಾಗುತ್ತಿದೆ” ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಸ್ಲಿಂ ಸಮುದಾಯವು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆಯೇ ಎಂಬ ಯಾವುದೇ ಆಧ್ಯಯನವನ್ನು ಕೈಗೊಳ್ಳದೆ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದೆ ಅವರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು. ಮುಸ್ಲಿಂಮರಿಗೆ ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸ್ಸು ಮಾಡಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ಳು ನುಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿರಿಸಿದೆ.

ಸ್ವಾತಂತ್ರೋತ್ತರದಲ್ಲಿ ಕರ್ನಾಟಕವು ರಚಿಸಿದ ಎಲ್‌ ಜಿ ಹಾವನೂರು ಆಯೋಗವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಕೂಡ ವಿವಿಧ ಆಯಾಮಗಳನ್ನು ಆಧರಿಸಿ, ಅಧ್ಯಯನ ನಡೆಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದೆ. ಇದನ್ನೇ ನಂತರ ಸಾಚಾರ್‌ ಸಮಿತಿ ವರದಿ ಕೂಡ ಎತ್ತಿಹಿಡಿದಿದೆ ಎಂದರು ಅವರು ತಿಳಿಸಿದರು.

ಬಿಜೆಪಿ ಸರ್ಕಾರವು ಒಳಮೀಸಲಾತಿಯ ಅನುಷ್ಟಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಹೊಸ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಪ್ರವರ್ಗವನ್ನು ಬದಲಿಸುವ ವಿಚಾರ, ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಮೂರು ವರ್ಷಕ್ಕೂ ಹೆಚ್ಚು ಕಾಲ ಕಣ್ಣು ಮುಚ್ಚಿ ಕುಳಿತು ಈಗ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಉಳಿದಿರುವಾಗ ಮೀಸಲಾತಿ ನೀತಿಯನ್ನು ಬದಲಾಯಿಸಿದೆ ಎಂಬುದನ್ನು ಗಮನಿಸಿದರೆ ತಾನು ನೆಲೆಗೊಂಡಿರುವ ಏಕೈಕ ದಕ್ಷಿಣ ರಾಜ್ಯದಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೆದರಿ ಬಿಜೆಪಿ ಹೀಗೆ ಮಾಡಿದೆ ಎಂಬುದು ಸ್ಪಷ್ಟ. ಅಂದರೆ ಮೀಸಲಾತಿ ನೀತಿಯ ಹೆಸರಿನಲ್ಲಿ ಚುನಾವಣೆಯಲ್ಲಿ ವೋಟು ಪಡೆಯಲ್ಲಿಕ್ಕೆ ನಡೆಸುತ್ತಿರುವ ಪ್ರಹಸನವಿದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಮತ್ತೊಂದು ದಾಳಿ ಎಂಬುದನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಶಿಕ್ಷಣದ ಹಕ್ಕಿನ ಮೇಲಿನ ದಾಳಿ ಎಂದು ನಾವು ಅರಿತಿದ್ದೇವೆ. ಹಿಜಾಬ್‌ ಹೆಸರನಲ್ಲಿ ಗಲಭೆಯೆಬ್ಬಿಸಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಹಾಗೂ ಮೌಲಾನಾ ಆಜಾದ್‌ ನ್ಯಾಷನಲ್‌ ಫೆಲೋಷಿಪ್‌ ಮತ್ತು ಪಿ.ಹೆಚ್.ಡಿ ಸಂಶೋಧನಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿದ್ದರ ಮುಂದುವರಿಕೆಯ ಭಾಗವೇ ಇದಾಗಿದೆ ಎಂದರು.

ಸಂವಿಧಾನದ ಮೂಲ ತತ್ವವಾದ ಸಾಮಜಿಕ-ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಅವರು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದರು.

ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲಾ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ ಮುಸ್ಲಿಂಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ AIFRTEಯ ಶಂಶಾಂಕ್ ಎಸ್.ಆರ್, AISAದ ಆರತ್ರಿಕ, GIOನ ಮುಬ್ಬಾರ, ಬೆಂಗಳೂರು ವಿಶ್ವಾವಿದ್ಯಾಲಯ ವಿದ್ಯಾರ್ಥಿ ಸಂಘದ ಲೋಕೇಶ್ ರಾಮ್ ಮತ್ತು ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...